AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು, ಪುದುಚೇರಿಯಲ್ಲಿ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ನರೇಂದ್ರ ಮೋದಿ

Narendra Modi: ಮೋದಿಯವರು 11.30ಕ್ಕೆ ಪುದುಚೇರಿಗೆ ತಲುಪಲಿದ್ದು ಸಂಜೆ 4.30ಕ್ಕೆ ಕೊಯಂಬತ್ತೂರ್ ತಲುಪಲಿದ್ದಾರೆ. ಪುದುಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ45- ಎ ಚತುಷ್ಪಥ ಯೋಜನೆ, ಕಿರು ಬಂದರು ಮತ್ತು ಇಂದಿರಾ ಗಾಂಧಿ ಸ್ಪೋರ್ಟ್ಸ್​ ಕಾಂಪ್ಲೆಕ್ಸ್​​ನಲ್ಲಿ ಸಿಂಥೆಟಿಕ್ ಅಥ್ಲೆಟಿಕ್ ಟ್ರಾಕ್​ಗೆ ಶಂಕು ಸ್ಥಾಪನೆ ಮಾಡಲಿದ್ದಾರೆ.

ತಮಿಳುನಾಡು, ಪುದುಚೇರಿಯಲ್ಲಿ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ನರೇಂದ್ರ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Feb 25, 2021 | 11:34 AM

Share

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಿ, ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ವೀರಪಾಂಡಿ, ತಿರುಪ್ಪೂರ್​ನ ತಿರುಕುಮಾರನ್ ನಗರ, ಮಧುರೈನ ರಾಜಕ್ಕೂರ್ ಎರಡನೇ ಹಂತ, ತಿರುಚ್ಚಿಯ ಇರುಂಗಲೂರ್​ನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಗುರುವಾರ ಬೆಳಗ್ಗೆ ಈ ಬಗ್ಗೆ ಟ್ವೀಟ್ ಮಾಡಿದ್ದ ಮೋದಿ ಪುದುಚೇರಿ ಮತ್ತು ತಮಿಳುನಾಡಿನಲ್ಲಿನ ಜನರ ಜೀವನ ಸುಧಾರಣೆ ಮತ್ತು ಆರ್ಥಿಕ ಬೆಳವಣಿಗೆಗೆ ಪೂರಕವಾಗುವ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಹೊರಡುತ್ತಿದ್ದೇನೆ ಎಂದಿದ್ದಾರೆ.

ದೇಶದ ಪ್ರಗತಿಗೆ ತಮಿಳುನಾಡಿನ ಕೊಡುಗೆ ಬಗ್ಗೆ ಹೆಮ್ಮ ಇದೆ. ತಮಿಳು ಸಂಸ್ಕೃತಿ ಜಾಗತಿಕ ಮಟ್ಟದಲ್ಲಿಯೇ ಜನಪ್ರಿಯವಾಗಿದೆ. ತಮಿಳುನಾಡಿನ ಪ್ರಗತಿಗಾಗಿ ಕೆಲಸ ಮಾಡುವುದು ಕೇಂದ್ರ ಸರ್ಕಾರಕ್ಕೆ ಹೆಮ್ಮೆ ಎನಿಸಿದೆ. ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ನಾನು ಕೊಯಂಬತ್ತೂರ್ ಗೆ ತೆರಳಲಿದ್ದೇನೆ ಎಂದು  ಮೋದಿ ಬುಧವಾರ  ಟ್ವೀಟ್ ಮಾಡಿದ್ದರು.

ಮೋದಿಯವರು 11.30ಕ್ಕೆ ಪುದುಚೇರಿಗೆ ತಲುಪಲಿದ್ದು ಸಂಜೆ 4.30ಕ್ಕೆ ಕೊಯಂಬತ್ತೂರ್ ತಲುಪಲಿದ್ದಾರೆ. ಪುದುಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ45- ಎ ಚತುಷ್ಪಥ ಯೋಜನೆ, ಕಿರು ಬಂದರು ಮತ್ತು ಇಂದಿರಾ ಗಾಂಧಿ ಸ್ಪೋರ್ಟ್ಸ್​ ಕಾಂಪ್ಲೆಕ್ಸ್​​ನಲ್ಲಿ ಸಿಂಥೆಟಿಕ್ ಅಥ್ಲೆಟಿಕ್ ಟ್ರಾಕ್​ಗೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಕೊಯಂಬತ್ತೂರ್​ನಲ್ಲಿ 12,400 ಕೋಟಿಗಿಂತಲೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.

 ಇದನ್ನೂ ಓದಿ: PM-KISAN ಯೋಜನೆಗೆ 2 ವರ್ಷ: ರೈತರ ಆದಾಯ ದ್ವಿಗುಣಕ್ಕೆ ಸರ್ಕಾರದ ಪರಿಶ್ರಮ ಎಂದ ನರೇಂದ್ರ ಮೋದಿ

Published On - 11:22 am, Thu, 25 February 21

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!