AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು, ಪುದುಚೇರಿಯಲ್ಲಿ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ನರೇಂದ್ರ ಮೋದಿ

Narendra Modi: ಮೋದಿಯವರು 11.30ಕ್ಕೆ ಪುದುಚೇರಿಗೆ ತಲುಪಲಿದ್ದು ಸಂಜೆ 4.30ಕ್ಕೆ ಕೊಯಂಬತ್ತೂರ್ ತಲುಪಲಿದ್ದಾರೆ. ಪುದುಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ45- ಎ ಚತುಷ್ಪಥ ಯೋಜನೆ, ಕಿರು ಬಂದರು ಮತ್ತು ಇಂದಿರಾ ಗಾಂಧಿ ಸ್ಪೋರ್ಟ್ಸ್​ ಕಾಂಪ್ಲೆಕ್ಸ್​​ನಲ್ಲಿ ಸಿಂಥೆಟಿಕ್ ಅಥ್ಲೆಟಿಕ್ ಟ್ರಾಕ್​ಗೆ ಶಂಕು ಸ್ಥಾಪನೆ ಮಾಡಲಿದ್ದಾರೆ.

ತಮಿಳುನಾಡು, ಪುದುಚೇರಿಯಲ್ಲಿ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ನರೇಂದ್ರ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Feb 25, 2021 | 11:34 AM

Share

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಿ, ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ವೀರಪಾಂಡಿ, ತಿರುಪ್ಪೂರ್​ನ ತಿರುಕುಮಾರನ್ ನಗರ, ಮಧುರೈನ ರಾಜಕ್ಕೂರ್ ಎರಡನೇ ಹಂತ, ತಿರುಚ್ಚಿಯ ಇರುಂಗಲೂರ್​ನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಗುರುವಾರ ಬೆಳಗ್ಗೆ ಈ ಬಗ್ಗೆ ಟ್ವೀಟ್ ಮಾಡಿದ್ದ ಮೋದಿ ಪುದುಚೇರಿ ಮತ್ತು ತಮಿಳುನಾಡಿನಲ್ಲಿನ ಜನರ ಜೀವನ ಸುಧಾರಣೆ ಮತ್ತು ಆರ್ಥಿಕ ಬೆಳವಣಿಗೆಗೆ ಪೂರಕವಾಗುವ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಹೊರಡುತ್ತಿದ್ದೇನೆ ಎಂದಿದ್ದಾರೆ.

ದೇಶದ ಪ್ರಗತಿಗೆ ತಮಿಳುನಾಡಿನ ಕೊಡುಗೆ ಬಗ್ಗೆ ಹೆಮ್ಮ ಇದೆ. ತಮಿಳು ಸಂಸ್ಕೃತಿ ಜಾಗತಿಕ ಮಟ್ಟದಲ್ಲಿಯೇ ಜನಪ್ರಿಯವಾಗಿದೆ. ತಮಿಳುನಾಡಿನ ಪ್ರಗತಿಗಾಗಿ ಕೆಲಸ ಮಾಡುವುದು ಕೇಂದ್ರ ಸರ್ಕಾರಕ್ಕೆ ಹೆಮ್ಮೆ ಎನಿಸಿದೆ. ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ನಾನು ಕೊಯಂಬತ್ತೂರ್ ಗೆ ತೆರಳಲಿದ್ದೇನೆ ಎಂದು  ಮೋದಿ ಬುಧವಾರ  ಟ್ವೀಟ್ ಮಾಡಿದ್ದರು.

ಮೋದಿಯವರು 11.30ಕ್ಕೆ ಪುದುಚೇರಿಗೆ ತಲುಪಲಿದ್ದು ಸಂಜೆ 4.30ಕ್ಕೆ ಕೊಯಂಬತ್ತೂರ್ ತಲುಪಲಿದ್ದಾರೆ. ಪುದುಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ45- ಎ ಚತುಷ್ಪಥ ಯೋಜನೆ, ಕಿರು ಬಂದರು ಮತ್ತು ಇಂದಿರಾ ಗಾಂಧಿ ಸ್ಪೋರ್ಟ್ಸ್​ ಕಾಂಪ್ಲೆಕ್ಸ್​​ನಲ್ಲಿ ಸಿಂಥೆಟಿಕ್ ಅಥ್ಲೆಟಿಕ್ ಟ್ರಾಕ್​ಗೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಕೊಯಂಬತ್ತೂರ್​ನಲ್ಲಿ 12,400 ಕೋಟಿಗಿಂತಲೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.

 ಇದನ್ನೂ ಓದಿ: PM-KISAN ಯೋಜನೆಗೆ 2 ವರ್ಷ: ರೈತರ ಆದಾಯ ದ್ವಿಗುಣಕ್ಕೆ ಸರ್ಕಾರದ ಪರಿಶ್ರಮ ಎಂದ ನರೇಂದ್ರ ಮೋದಿ

Published On - 11:22 am, Thu, 25 February 21

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?