AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM-KISAN ಯೋಜನೆಗೆ 2 ವರ್ಷ: ರೈತರ ಆದಾಯ ದ್ವಿಗುಣಕ್ಕೆ ಸರ್ಕಾರದ ಪರಿಶ್ರಮ ಎಂದ ನರೇಂದ್ರ ಮೋದಿ

PM-KISAN Scheme: ದೇಶದ ಜನತೆಗೆ ಆಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುವ ರೈತರಿಗೆ ಗೌರವಯುತ ಮತ್ತು ಸಮೃದ್ಧಿಯ ಬದುಕು ನೀಡುವ ಸಲುವಾಗಿ ಈ ಯೋಜನೆ ಜಾರಿಗೊಳಿಸಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

PM-KISAN ಯೋಜನೆಗೆ 2 ವರ್ಷ: ರೈತರ ಆದಾಯ ದ್ವಿಗುಣಕ್ಕೆ ಸರ್ಕಾರದ ಪರಿಶ್ರಮ ಎಂದ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
TV9 Web
| Updated By: ganapathi bhat|

Updated on:Apr 06, 2022 | 7:43 PM

Share

ದೆಹಲಿ: ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಾಧ್ಯವಿರುವ ಎಲ್ಲಾ ಕೆಲಸಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (PM Kisan) ಎರಡನೇ ವರ್ಷಾಚರಣೆಯ ಪ್ರಯುಕ್ತ ಇಂದು (ಫೆ.24) ಮೋದಿ ಸರಣಿ ಟ್ವೀಟ್ ಮಾಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಗೊಳಿಸಲು ಸರ್ಕಾರ ಶ್ರಮಿಸಿದೆ. ಕೃಷಿ ವಲಯದಲ್ಲಿ ಬದಲಾವಣೆಗಳನ್ನು ತರಲು ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಉತ್ತಮ ನೀರಾವರಿ, ಉತ್ತಮ ತಂತ್ರಜ್ಞಾನ, ಬೆಳೆವಿಮೆ, ಮಣ್ಣಿನ ಫಲವತ್ತತೆ ವಿಚಾರದಲ್ಲಿ ಕೇಂದ್ರ ಶ್ರಮಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಎರಡು ವರ್ಷದ ಹಿಂದೆ ಇದೇ ದಿನ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಜಾರಿಗೆ ಬಂತು. ದೇಶದ ಜನತೆಗೆ ಆಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುವ ರೈತರಿಗೆ ಗೌರವಯುತ ಮತ್ತು ಸಮೃದ್ಧಿಯ ಬದುಕು ನೀಡುವ ಸಲುವಾಗಿ ಈ ಯೋಜನೆ ಜಾರಿಗೊಳಿಸಲಾಯಿತು. ರೈತರ ಉತ್ಸಾಹ ನಿಜವಾಗಿಯೂ ಸ್ಫೂರ್ತಿ ತುಂಬುವಂಥದ್ದು ಎಂದು ಮೋದಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯು ಸಣ್ಣ ಮತ್ತು ಮಧ್ಯಮ ವಲಯದ ರೈತರಿಗೆ ನಿಗದಿತ ಹಣ ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕ 6,000 ರೂಪಾಯಿ ಮೊತ್ತವನ್ನು ರೈತರಿಗೆ ನೀಡಲಾಗುತ್ತಿದೆ. ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ರೈತರು 2,000 ರೂಪಾಯಿ ಪಡೆಯುತ್ತಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯು ಫೆಬ್ರವರಿ 24, 2019ರಂದು ಜಾರಿಗೆ ಬಂತು. ಈ ಯೋಜನೆಯಂತೆ ರೈತರು ವಾರ್ಷಿಕ ₹ 6,000 ಪಡೆಯುತ್ತಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ವೆಬ್​ಸೈಟ್​ನ ಮಾಹಿತಿಯಂತೆ, 11.47 ಕೋಟಿ ರೈತರು ಯೋಜನೆಯ ಲಾಭ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸಂಸತ್​ ಭವನದ ಬಳಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪಿಸಲಿ: ರೈತ ಮುಖಂಡ ರಾಕೇಶ್ ಟಿಕಾಯತ್ ಆಪೇಕ್ಷೆ

ಇದನ್ನೂ ಓದಿ: ಪ್ರತಿಭಟನಾ ಸ್ಥಳ ಖಾಲಿ ಮಾಡಿ ಎಂದು ಬ್ಯಾನರ್ ಹಚ್ಚಿದ ದೆಹಲಿ ಪೊಲೀಸರು; ರೈತ ಮುಖಂಡರ ಆಕ್ರೋಶ 

Published On - 2:37 pm, Wed, 24 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!