AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM-KISAN ಯೋಜನೆಗೆ 2 ವರ್ಷ: ರೈತರ ಆದಾಯ ದ್ವಿಗುಣಕ್ಕೆ ಸರ್ಕಾರದ ಪರಿಶ್ರಮ ಎಂದ ನರೇಂದ್ರ ಮೋದಿ

PM-KISAN Scheme: ದೇಶದ ಜನತೆಗೆ ಆಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುವ ರೈತರಿಗೆ ಗೌರವಯುತ ಮತ್ತು ಸಮೃದ್ಧಿಯ ಬದುಕು ನೀಡುವ ಸಲುವಾಗಿ ಈ ಯೋಜನೆ ಜಾರಿಗೊಳಿಸಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

PM-KISAN ಯೋಜನೆಗೆ 2 ವರ್ಷ: ರೈತರ ಆದಾಯ ದ್ವಿಗುಣಕ್ಕೆ ಸರ್ಕಾರದ ಪರಿಶ್ರಮ ಎಂದ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
TV9 Web
| Edited By: |

Updated on:Apr 06, 2022 | 7:43 PM

Share

ದೆಹಲಿ: ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಾಧ್ಯವಿರುವ ಎಲ್ಲಾ ಕೆಲಸಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (PM Kisan) ಎರಡನೇ ವರ್ಷಾಚರಣೆಯ ಪ್ರಯುಕ್ತ ಇಂದು (ಫೆ.24) ಮೋದಿ ಸರಣಿ ಟ್ವೀಟ್ ಮಾಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಗೊಳಿಸಲು ಸರ್ಕಾರ ಶ್ರಮಿಸಿದೆ. ಕೃಷಿ ವಲಯದಲ್ಲಿ ಬದಲಾವಣೆಗಳನ್ನು ತರಲು ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಉತ್ತಮ ನೀರಾವರಿ, ಉತ್ತಮ ತಂತ್ರಜ್ಞಾನ, ಬೆಳೆವಿಮೆ, ಮಣ್ಣಿನ ಫಲವತ್ತತೆ ವಿಚಾರದಲ್ಲಿ ಕೇಂದ್ರ ಶ್ರಮಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಎರಡು ವರ್ಷದ ಹಿಂದೆ ಇದೇ ದಿನ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಜಾರಿಗೆ ಬಂತು. ದೇಶದ ಜನತೆಗೆ ಆಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುವ ರೈತರಿಗೆ ಗೌರವಯುತ ಮತ್ತು ಸಮೃದ್ಧಿಯ ಬದುಕು ನೀಡುವ ಸಲುವಾಗಿ ಈ ಯೋಜನೆ ಜಾರಿಗೊಳಿಸಲಾಯಿತು. ರೈತರ ಉತ್ಸಾಹ ನಿಜವಾಗಿಯೂ ಸ್ಫೂರ್ತಿ ತುಂಬುವಂಥದ್ದು ಎಂದು ಮೋದಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯು ಸಣ್ಣ ಮತ್ತು ಮಧ್ಯಮ ವಲಯದ ರೈತರಿಗೆ ನಿಗದಿತ ಹಣ ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕ 6,000 ರೂಪಾಯಿ ಮೊತ್ತವನ್ನು ರೈತರಿಗೆ ನೀಡಲಾಗುತ್ತಿದೆ. ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ರೈತರು 2,000 ರೂಪಾಯಿ ಪಡೆಯುತ್ತಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯು ಫೆಬ್ರವರಿ 24, 2019ರಂದು ಜಾರಿಗೆ ಬಂತು. ಈ ಯೋಜನೆಯಂತೆ ರೈತರು ವಾರ್ಷಿಕ ₹ 6,000 ಪಡೆಯುತ್ತಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ವೆಬ್​ಸೈಟ್​ನ ಮಾಹಿತಿಯಂತೆ, 11.47 ಕೋಟಿ ರೈತರು ಯೋಜನೆಯ ಲಾಭ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸಂಸತ್​ ಭವನದ ಬಳಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪಿಸಲಿ: ರೈತ ಮುಖಂಡ ರಾಕೇಶ್ ಟಿಕಾಯತ್ ಆಪೇಕ್ಷೆ

ಇದನ್ನೂ ಓದಿ: ಪ್ರತಿಭಟನಾ ಸ್ಥಳ ಖಾಲಿ ಮಾಡಿ ಎಂದು ಬ್ಯಾನರ್ ಹಚ್ಚಿದ ದೆಹಲಿ ಪೊಲೀಸರು; ರೈತ ಮುಖಂಡರ ಆಕ್ರೋಶ 

Published On - 2:37 pm, Wed, 24 February 21

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?