AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಧುನಿಕ ಸೌಲಭ್ಯಗಳಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ ಉದ್ಘಾಟನೆ: ಇದು ದೇಶದ ಪ್ರಗತಿಗೆ ದ್ಯೋತಕ ಎಂದ ಪ್ರಧಾನಿ ನರೇಂದ್ರ ಮೋದಿ

ಐತಿಹಾಸಿಕ ಮಹತ್ವದ ರೈಲು ನಿಲ್ದಾಣದ ಹೆಸರಿನ ಮೂಲಕ ಗೋಂಡವನದ ಹೆಮ್ಮೆಯ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಳ್ಳಲು ಭಾರತೀಯ ರೈಲ್ವೆ ಹೆಮ್ಮೆಪಡುತ್ತದೆ. ಮರುನಿರ್ಮಾಣಗೊಂಡಿರುವ ಈ ಐತಿಹಾಸಿಕ ರೈಲು ನಿಲ್ದಾಣವು ಭಾರತೀಯ ರೈಲ್ವೆಯ ಭವಿಷ್ಯದ ದ್ಯೋತಕವಾಗಿದೆ ಎಂದರು.

ಅತ್ಯಾಧುನಿಕ ಸೌಲಭ್ಯಗಳಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ ಉದ್ಘಾಟನೆ: ಇದು ದೇಶದ ಪ್ರಗತಿಗೆ ದ್ಯೋತಕ ಎಂದ ಪ್ರಧಾನಿ ನರೇಂದ್ರ ಮೋದಿ
ಭೋಪಾಲ್​ನಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಮರು ನಿರ್ನಿಮಾಣಗೊಂಡಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ
TV9 Web
| Edited By: |

Updated on: Nov 15, 2021 | 6:34 PM

Share

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಗರದಲ್ಲಿ ಮಧ್ಯಪ್ರದೇಶದಲ್ಲಿಯೇ ಅತ್ಯಂತ ಅಧುನಿಕ ಎಂಬ ಶ್ರೇಯ ಹೊಂದಿರುವ ರಾಣಿ ಕಮಲಾಪತಿ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಈ ಮೊದಲು ಈ ನಿಲ್ದಾಣವನ್ನು ಹಬೀಬ್​ಗಂಜ್ ನಿಲ್ದಾಣ ಎಂದು ಕರೆಯುತ್ತಿದ್ದರು. ಗೋಂಡಾ ಬುಡಕಟ್ಟಿಗೆ ಸೇರಿದ ರಾಣಿ ಕಮಲಾಪತಿ ಅವರ ಸ್ಮರಣಾರ್ಥ ನಿಲ್ದಾಣದ ಹೆಸರು ಬದಲಿಸಲಾಗಿದೆ. ರಾಜ್ಯಪಾಲರಾದ ಮನ್​ಗುಭಾಯ್ ಪಟೇಲ್, ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಗಿನ್ನೋರ್​​ಗಡದ ರಾಣಿ ಕಮಲಾಪತಿ ಅವರ ಹೆಸರು ಇರಿಸಿದ ನಂತರ ನಿಲ್ದಾಣದ ಪ್ರಾಮುಖ್ಯತೆ ಹೆಚ್ಚಾಗಿದೆ. ಐತಿಹಾಸಿಕ ಮಹತ್ವದ ರೈಲು ನಿಲ್ದಾಣದ ಹೆಸರಿನ ಮೂಲಕ ಗೋಂಡವನದ ಹೆಮ್ಮೆಯ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಳ್ಳಲು ಭಾರತೀಯ ರೈಲ್ವೆ ಹೆಮ್ಮೆಪಡುತ್ತದೆ. ಮರುನಿರ್ಮಾಣಗೊಂಡಿರುವ ಈ ಐತಿಹಾಸಿಕ ರೈಲು ನಿಲ್ದಾಣವು ಭಾರತೀಯ ರೈಲ್ವೆಯ ಭವಿಷ್ಯದ ದ್ಯೋತಕವಾಗಿದೆ ಎಂದರು.

ಹಬೀಬ್​ಗಂಜ್ ರೈಲು ನಿಲ್ದಾಣದ ಹೆಸರು ಬದಲಿಸುವಂತೆ ಮಧ್ಯಪ್ರದೇಶ ಸರ್ಕಾರವು ಕೇಂದ್ರ ಗೃಹ ಇಲಾಖೆಗೆ ಪತ್ರಬರೆದು ವಿನಂತಿಸಿತ್ತು. ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡ ಅವರ ಹೋರಾಟ ಮತ್ತು ತ್ಯಾಗವನ್ನು ಸ್ಮರಿಸುವ ಬುಡಕಟ್ಟು ಜನರ ಸಮಾವೇಶ ‘ಜನಜಾತೀಯ ಗೌರವ ದಿನಸ’ದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಭೋಪಾಲ್​ಗೆ ಬಂದಿದ್ದರು. ಇದೇ ಸಂದರ್ಭ ನವೀಕೃತ ರೈಲು ನಿಲ್ದಾಣಕ್ಕೂ ಚಾಲನೆ ನೀಡಿದರು. ‘ಈ ಮೊದಲು ಕೇವಲ ವಿಮಾನ ನಿಲ್ದಾಣಗಳಲ್ಲಿ ಮಾತ್ರ ದೊರೆಯುತ್ತಿದ್ದ ಸೌಲಭ್ಯಗಳು ಇದೀಗ ರೈಲು ನಿಲ್ದಾಣಗಳಲ್ಲಿ ಸಿಗುತ್ತಿವೆ. ಅತ್ಯುತ್ತಮ ವಾತಾನುಕೂಲ ಮತ್ತು ಹವಾನಿಯಂತ್ರಕ ವ್ಯವಸ್ಥೆ ಹೊಂದಿದೆ. ದೇಶವು ಹೇಗೆ ಪ್ರಗತಿಯತ್ತ ದಾಪುಗಾಲು ಹಾಕುತ್ತಿದೆ ಎಂಬುದಕ್ಕೆ ಭಾರತೀಯ ರೈಲ್ವೆಯು ಉತ್ತಮ ಉದಾಹರಣೆ ಎಂದರು.

ರೈಲು ನಿಲ್ದಾಣವನ್ನು ₹ 450 ಕೋಟಿ ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಪರಿಸರ ಸ್ನೇಹಿ ಕಟ್ಟಡದಲ್ಲಿ ವಿಶ್ವದರ್ಜೆಯ ಸೌಲಭ್ಯಗಳು ಲಭ್ಯವಿದೆ. ಅಂಗವಿಕಲರಿಗೆ ಬೇಕಿರುವ ಅನುಕೂಲಗಳನ್ನೂ ಕಲ್ಪಿಸಲಾಗಿದೆ. ಬಹುಹಂತದ ಸಾರಿಗೆ ವ್ಯವಸ್ಥೆಯನ್ನೂ ಈ ನಿಲ್ದಾಣದಲ್ಲಿ ಕಲ್ಪಿಸಲಾಗಿದೆ.

ಇದನ್ನೂ ಓದಿ: Cryptocurrency: ಕ್ರಿಪ್ಟೋಕರೆನ್ಸಿ ಕುರಿತು ತಜ್ಞರ ಜೊತೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ಇದನ್ನೂ ಓದಿ: ನರೇಂದ್ರ ಮೋದಿಯವರಿಗೆ ಸೀರೆ ಉಡುಗೊರೆ ಕೊಟ್ಟ ಪದ್ಮಶ್ರೀ ಪುರಸ್ಕೃತ; ಗಿಫ್ಟ್​ ನೋಡಿ ಪ್ರಧಾನಿಗೆ ಖುಷಿಯೋ ಖುಷಿ !

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ