AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಧುನಿಕ ಸೌಲಭ್ಯಗಳಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ ಉದ್ಘಾಟನೆ: ಇದು ದೇಶದ ಪ್ರಗತಿಗೆ ದ್ಯೋತಕ ಎಂದ ಪ್ರಧಾನಿ ನರೇಂದ್ರ ಮೋದಿ

ಐತಿಹಾಸಿಕ ಮಹತ್ವದ ರೈಲು ನಿಲ್ದಾಣದ ಹೆಸರಿನ ಮೂಲಕ ಗೋಂಡವನದ ಹೆಮ್ಮೆಯ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಳ್ಳಲು ಭಾರತೀಯ ರೈಲ್ವೆ ಹೆಮ್ಮೆಪಡುತ್ತದೆ. ಮರುನಿರ್ಮಾಣಗೊಂಡಿರುವ ಈ ಐತಿಹಾಸಿಕ ರೈಲು ನಿಲ್ದಾಣವು ಭಾರತೀಯ ರೈಲ್ವೆಯ ಭವಿಷ್ಯದ ದ್ಯೋತಕವಾಗಿದೆ ಎಂದರು.

ಅತ್ಯಾಧುನಿಕ ಸೌಲಭ್ಯಗಳಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ ಉದ್ಘಾಟನೆ: ಇದು ದೇಶದ ಪ್ರಗತಿಗೆ ದ್ಯೋತಕ ಎಂದ ಪ್ರಧಾನಿ ನರೇಂದ್ರ ಮೋದಿ
ಭೋಪಾಲ್​ನಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಮರು ನಿರ್ನಿಮಾಣಗೊಂಡಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ
TV9 Web
| Edited By: |

Updated on: Nov 15, 2021 | 6:34 PM

Share

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಗರದಲ್ಲಿ ಮಧ್ಯಪ್ರದೇಶದಲ್ಲಿಯೇ ಅತ್ಯಂತ ಅಧುನಿಕ ಎಂಬ ಶ್ರೇಯ ಹೊಂದಿರುವ ರಾಣಿ ಕಮಲಾಪತಿ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಈ ಮೊದಲು ಈ ನಿಲ್ದಾಣವನ್ನು ಹಬೀಬ್​ಗಂಜ್ ನಿಲ್ದಾಣ ಎಂದು ಕರೆಯುತ್ತಿದ್ದರು. ಗೋಂಡಾ ಬುಡಕಟ್ಟಿಗೆ ಸೇರಿದ ರಾಣಿ ಕಮಲಾಪತಿ ಅವರ ಸ್ಮರಣಾರ್ಥ ನಿಲ್ದಾಣದ ಹೆಸರು ಬದಲಿಸಲಾಗಿದೆ. ರಾಜ್ಯಪಾಲರಾದ ಮನ್​ಗುಭಾಯ್ ಪಟೇಲ್, ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಗಿನ್ನೋರ್​​ಗಡದ ರಾಣಿ ಕಮಲಾಪತಿ ಅವರ ಹೆಸರು ಇರಿಸಿದ ನಂತರ ನಿಲ್ದಾಣದ ಪ್ರಾಮುಖ್ಯತೆ ಹೆಚ್ಚಾಗಿದೆ. ಐತಿಹಾಸಿಕ ಮಹತ್ವದ ರೈಲು ನಿಲ್ದಾಣದ ಹೆಸರಿನ ಮೂಲಕ ಗೋಂಡವನದ ಹೆಮ್ಮೆಯ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಳ್ಳಲು ಭಾರತೀಯ ರೈಲ್ವೆ ಹೆಮ್ಮೆಪಡುತ್ತದೆ. ಮರುನಿರ್ಮಾಣಗೊಂಡಿರುವ ಈ ಐತಿಹಾಸಿಕ ರೈಲು ನಿಲ್ದಾಣವು ಭಾರತೀಯ ರೈಲ್ವೆಯ ಭವಿಷ್ಯದ ದ್ಯೋತಕವಾಗಿದೆ ಎಂದರು.

ಹಬೀಬ್​ಗಂಜ್ ರೈಲು ನಿಲ್ದಾಣದ ಹೆಸರು ಬದಲಿಸುವಂತೆ ಮಧ್ಯಪ್ರದೇಶ ಸರ್ಕಾರವು ಕೇಂದ್ರ ಗೃಹ ಇಲಾಖೆಗೆ ಪತ್ರಬರೆದು ವಿನಂತಿಸಿತ್ತು. ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡ ಅವರ ಹೋರಾಟ ಮತ್ತು ತ್ಯಾಗವನ್ನು ಸ್ಮರಿಸುವ ಬುಡಕಟ್ಟು ಜನರ ಸಮಾವೇಶ ‘ಜನಜಾತೀಯ ಗೌರವ ದಿನಸ’ದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಭೋಪಾಲ್​ಗೆ ಬಂದಿದ್ದರು. ಇದೇ ಸಂದರ್ಭ ನವೀಕೃತ ರೈಲು ನಿಲ್ದಾಣಕ್ಕೂ ಚಾಲನೆ ನೀಡಿದರು. ‘ಈ ಮೊದಲು ಕೇವಲ ವಿಮಾನ ನಿಲ್ದಾಣಗಳಲ್ಲಿ ಮಾತ್ರ ದೊರೆಯುತ್ತಿದ್ದ ಸೌಲಭ್ಯಗಳು ಇದೀಗ ರೈಲು ನಿಲ್ದಾಣಗಳಲ್ಲಿ ಸಿಗುತ್ತಿವೆ. ಅತ್ಯುತ್ತಮ ವಾತಾನುಕೂಲ ಮತ್ತು ಹವಾನಿಯಂತ್ರಕ ವ್ಯವಸ್ಥೆ ಹೊಂದಿದೆ. ದೇಶವು ಹೇಗೆ ಪ್ರಗತಿಯತ್ತ ದಾಪುಗಾಲು ಹಾಕುತ್ತಿದೆ ಎಂಬುದಕ್ಕೆ ಭಾರತೀಯ ರೈಲ್ವೆಯು ಉತ್ತಮ ಉದಾಹರಣೆ ಎಂದರು.

ರೈಲು ನಿಲ್ದಾಣವನ್ನು ₹ 450 ಕೋಟಿ ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಪರಿಸರ ಸ್ನೇಹಿ ಕಟ್ಟಡದಲ್ಲಿ ವಿಶ್ವದರ್ಜೆಯ ಸೌಲಭ್ಯಗಳು ಲಭ್ಯವಿದೆ. ಅಂಗವಿಕಲರಿಗೆ ಬೇಕಿರುವ ಅನುಕೂಲಗಳನ್ನೂ ಕಲ್ಪಿಸಲಾಗಿದೆ. ಬಹುಹಂತದ ಸಾರಿಗೆ ವ್ಯವಸ್ಥೆಯನ್ನೂ ಈ ನಿಲ್ದಾಣದಲ್ಲಿ ಕಲ್ಪಿಸಲಾಗಿದೆ.

ಇದನ್ನೂ ಓದಿ: Cryptocurrency: ಕ್ರಿಪ್ಟೋಕರೆನ್ಸಿ ಕುರಿತು ತಜ್ಞರ ಜೊತೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ಇದನ್ನೂ ಓದಿ: ನರೇಂದ್ರ ಮೋದಿಯವರಿಗೆ ಸೀರೆ ಉಡುಗೊರೆ ಕೊಟ್ಟ ಪದ್ಮಶ್ರೀ ಪುರಸ್ಕೃತ; ಗಿಫ್ಟ್​ ನೋಡಿ ಪ್ರಧಾನಿಗೆ ಖುಷಿಯೋ ಖುಷಿ !

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು