AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖನೌನಲ್ಲಿ ಆಜಾದಿ@75ರಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ; ವಸತಿ ಫಲಾನುಭವಿಗಳೊಂದಿಗೆ ಸಂವಾದ

ಪ್ರಧಾನಿ ನರೇಂದ್ರ ಮೋದಿಯವರು ನವಭಾರತ ನಿರ್ಮಾಣದ ಕನಸು ಕಂಡಿದ್ದಾರೆ. ಅದನ್ನು ಪೂರೈಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ರಾಜನಾಥ್​ ಸಿಂಗ್​ ಹೇಳಿದ್ದಾರೆ.

ಲಖನೌನಲ್ಲಿ ಆಜಾದಿ@75ರಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ; ವಸತಿ ಫಲಾನುಭವಿಗಳೊಂದಿಗೆ ಸಂವಾದ
ಆಜಾದಿ ಕಿ ಅಮೃತ್​ ಮಹೋತ್ಸವ್​
TV9 Web
| Edited By: |

Updated on:Oct 29, 2021 | 3:19 PM

Share

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಪ್ರದೇಶದ ಲಖನೌಗೆ ಆಗಮಿಸಿ ಆಜಾದಿ@75: ನ್ಯೂ ಅರ್ಬನ್​ ಇಂಡಿಯಾ: ಟ್ರಾನ್ಸ್​ಫರ್ಮಿಂಗ್​ ಅರ್ಬನ್​ ಲ್ಯಾಂಡ್​ಸ್ಕೇಪ್​ ಸಮ್ಮೇಳನ ಮತ್ತು ಎಕ್ಸ್​ಪೋ ಉದ್ಘಾಟಿಸಿದ್ದಾರೆ. ಒಟ್ಟು 75 ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅದರಲ್ಲಿ ಮುಖ್ಯವಾಗಿ 75 ಜಿಲ್ಲೆಗಳ 75 ಸಾವಿರ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಆವಾಸ್​ ಯೋಜನೆ-ಅರ್ಬನ್​(PMAY-U) ಯಡಿ ಮನೆಗಳ ಕೀಯನ್ನು ವರ್ಚ್ಯುವಲ್​ ಆಗಿ ವಿತರಿಸಿದ್ದಾರೆ. ಹಾಗೇ, ಲಖನೌ, ಕಾನ್ಪುರ, ವಾರಾಣಸಿ, ಪ್ರಯಾಗ್​ರಾಜ್​, ಗೋರಖ್​ಪುರ, ಝಾನ್ಸಿ ಮತ್ತು ಘಾಜಿಯಾಬಾದ್​​ಗಳಿಗೆ ಸಂಚಾರ ಮಾಡುವಂತೆ 75 ಎಲೆಕ್ಟ್ರಿಕ್​ ಬಸ್​​ಗಳಿಗೆ ಚಾಲನೆ ನೀಡಿದ್ದಾರೆ.  ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯ ವಿವಿಧ ಪ್ರಮುಖ ಕಾರ್ಯಕ್ರಮಗಳಡಿ ಜಾರಿಗೊಳಿಸಿದ 75 ಯೋಜನೆಗಳ ವಿವರಗಳನ್ನೊಳಗೊಂಡ ಕಾಫಿ ಟೇಬಲ್​ ಬುಕ್​ ಬಿಡುಗಡೆ ಮಾಡಿದ್ದಾರೆ.

ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಈ ಎಕ್ಸ್​ಪೋ ಮತ್ತು ನವನಗರ ಭಾರತ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಸತಿ ಯೋಜನೆ ಫಲಾನುಭವಿಗಳೊಂದಿಗೆ ಸಂವಾದವನ್ನೂ ನಡೆಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ಗೃಹ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಹರ್ದೀಪ್​ ಪುರಿ, ಯುಪಿ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪಾಲ್ಗೊಂಡಿದ್ದಾರೆ.  ಸಮಾರಂಭದಲ್ಲಿ ಮಾತನಾಡಿದ ರಾಜನಾಥ್​ ಸಿಂಗ್​, ಪ್ರಧಾನಿ ನರೇಂದ್ರ ಮೋದಿಯವರು ನವಭಾರತ ನಿರ್ಮಾಣದ ಕನಸು ಕಂಡಿದ್ದಾರೆ. ಅದನ್ನು ಪೂರೈಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಪ್ರಧಾನಿ ಕನಸು ನನಸಾಗುತ್ತಿರುವುದಕ್ಕೆ ಸಾಕ್ಷಿಯಾಗಿ ಹಲವು ಬದಲಾವಣೆಗಳು ಆಗುತ್ತಿದೆ ಎಂದು ಹೇಳಿದರು.

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

ಬಳಿಕ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿ, ಪ್ರಧಾನಮಂತ್ರಿ ಆವಾಸ್​ ಯೋಜನೆಯಡಿ ಕೇಂದ್ರ ಸರ್ಕಾರ 17.3 ಲಕ್ಷ ಮನೆಗಳನ್ನು ಮಂಜೂರು ಮಾಡಿದೆ. ಇದುವರೆಗೆ 8.8 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಮನೆ ಪಡೆದಿದ್ದಾರೆ ಎಂದು ತಿಳಿಸಿದರು. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಇದೇ ವೇಳೆ, ಅಯೋಧ್ಯೆ ಅಭಿವೃದ್ಧಿ ಯೋಜನೆಯ ಬಗ್ಗೆಯೂ ಸಿಎಂ ಯೋಗಿ ಆದಿತ್ಯನಾಥ್​ ಬಳಿ ಕೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

ಅನಾಥಾಶ್ರಮದ ಹೆಸರಲ್ಲಿ ಬಟ್ಟೆ ಸಂಗ್ರಹ ಮಾಡಿ 10-20 ರೂಗೆ ಸೇಲ್, ಮಾರ್ಷಲ್​ಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ವಂಚಕ

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

Published On - 1:23 pm, Tue, 5 October 21

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ