AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖನೌನಲ್ಲಿ ಆಜಾದಿ@75ರಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ; ವಸತಿ ಫಲಾನುಭವಿಗಳೊಂದಿಗೆ ಸಂವಾದ

ಪ್ರಧಾನಿ ನರೇಂದ್ರ ಮೋದಿಯವರು ನವಭಾರತ ನಿರ್ಮಾಣದ ಕನಸು ಕಂಡಿದ್ದಾರೆ. ಅದನ್ನು ಪೂರೈಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ರಾಜನಾಥ್​ ಸಿಂಗ್​ ಹೇಳಿದ್ದಾರೆ.

ಲಖನೌನಲ್ಲಿ ಆಜಾದಿ@75ರಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ; ವಸತಿ ಫಲಾನುಭವಿಗಳೊಂದಿಗೆ ಸಂವಾದ
ಆಜಾದಿ ಕಿ ಅಮೃತ್​ ಮಹೋತ್ಸವ್​
TV9 Web
| Edited By: |

Updated on:Oct 29, 2021 | 3:19 PM

Share

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಪ್ರದೇಶದ ಲಖನೌಗೆ ಆಗಮಿಸಿ ಆಜಾದಿ@75: ನ್ಯೂ ಅರ್ಬನ್​ ಇಂಡಿಯಾ: ಟ್ರಾನ್ಸ್​ಫರ್ಮಿಂಗ್​ ಅರ್ಬನ್​ ಲ್ಯಾಂಡ್​ಸ್ಕೇಪ್​ ಸಮ್ಮೇಳನ ಮತ್ತು ಎಕ್ಸ್​ಪೋ ಉದ್ಘಾಟಿಸಿದ್ದಾರೆ. ಒಟ್ಟು 75 ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅದರಲ್ಲಿ ಮುಖ್ಯವಾಗಿ 75 ಜಿಲ್ಲೆಗಳ 75 ಸಾವಿರ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಆವಾಸ್​ ಯೋಜನೆ-ಅರ್ಬನ್​(PMAY-U) ಯಡಿ ಮನೆಗಳ ಕೀಯನ್ನು ವರ್ಚ್ಯುವಲ್​ ಆಗಿ ವಿತರಿಸಿದ್ದಾರೆ. ಹಾಗೇ, ಲಖನೌ, ಕಾನ್ಪುರ, ವಾರಾಣಸಿ, ಪ್ರಯಾಗ್​ರಾಜ್​, ಗೋರಖ್​ಪುರ, ಝಾನ್ಸಿ ಮತ್ತು ಘಾಜಿಯಾಬಾದ್​​ಗಳಿಗೆ ಸಂಚಾರ ಮಾಡುವಂತೆ 75 ಎಲೆಕ್ಟ್ರಿಕ್​ ಬಸ್​​ಗಳಿಗೆ ಚಾಲನೆ ನೀಡಿದ್ದಾರೆ.  ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯ ವಿವಿಧ ಪ್ರಮುಖ ಕಾರ್ಯಕ್ರಮಗಳಡಿ ಜಾರಿಗೊಳಿಸಿದ 75 ಯೋಜನೆಗಳ ವಿವರಗಳನ್ನೊಳಗೊಂಡ ಕಾಫಿ ಟೇಬಲ್​ ಬುಕ್​ ಬಿಡುಗಡೆ ಮಾಡಿದ್ದಾರೆ.

ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಈ ಎಕ್ಸ್​ಪೋ ಮತ್ತು ನವನಗರ ಭಾರತ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಸತಿ ಯೋಜನೆ ಫಲಾನುಭವಿಗಳೊಂದಿಗೆ ಸಂವಾದವನ್ನೂ ನಡೆಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ಗೃಹ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಹರ್ದೀಪ್​ ಪುರಿ, ಯುಪಿ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪಾಲ್ಗೊಂಡಿದ್ದಾರೆ.  ಸಮಾರಂಭದಲ್ಲಿ ಮಾತನಾಡಿದ ರಾಜನಾಥ್​ ಸಿಂಗ್​, ಪ್ರಧಾನಿ ನರೇಂದ್ರ ಮೋದಿಯವರು ನವಭಾರತ ನಿರ್ಮಾಣದ ಕನಸು ಕಂಡಿದ್ದಾರೆ. ಅದನ್ನು ಪೂರೈಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಪ್ರಧಾನಿ ಕನಸು ನನಸಾಗುತ್ತಿರುವುದಕ್ಕೆ ಸಾಕ್ಷಿಯಾಗಿ ಹಲವು ಬದಲಾವಣೆಗಳು ಆಗುತ್ತಿದೆ ಎಂದು ಹೇಳಿದರು.

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

ಬಳಿಕ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿ, ಪ್ರಧಾನಮಂತ್ರಿ ಆವಾಸ್​ ಯೋಜನೆಯಡಿ ಕೇಂದ್ರ ಸರ್ಕಾರ 17.3 ಲಕ್ಷ ಮನೆಗಳನ್ನು ಮಂಜೂರು ಮಾಡಿದೆ. ಇದುವರೆಗೆ 8.8 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಮನೆ ಪಡೆದಿದ್ದಾರೆ ಎಂದು ತಿಳಿಸಿದರು. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಇದೇ ವೇಳೆ, ಅಯೋಧ್ಯೆ ಅಭಿವೃದ್ಧಿ ಯೋಜನೆಯ ಬಗ್ಗೆಯೂ ಸಿಎಂ ಯೋಗಿ ಆದಿತ್ಯನಾಥ್​ ಬಳಿ ಕೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

ಅನಾಥಾಶ್ರಮದ ಹೆಸರಲ್ಲಿ ಬಟ್ಟೆ ಸಂಗ್ರಹ ಮಾಡಿ 10-20 ರೂಗೆ ಸೇಲ್, ಮಾರ್ಷಲ್​ಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ವಂಚಕ

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

Published On - 1:23 pm, Tue, 5 October 21

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?