AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖನೌನಲ್ಲಿ ಆಜಾದಿ@75ರಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ; ವಸತಿ ಫಲಾನುಭವಿಗಳೊಂದಿಗೆ ಸಂವಾದ

ಪ್ರಧಾನಿ ನರೇಂದ್ರ ಮೋದಿಯವರು ನವಭಾರತ ನಿರ್ಮಾಣದ ಕನಸು ಕಂಡಿದ್ದಾರೆ. ಅದನ್ನು ಪೂರೈಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ರಾಜನಾಥ್​ ಸಿಂಗ್​ ಹೇಳಿದ್ದಾರೆ.

ಲಖನೌನಲ್ಲಿ ಆಜಾದಿ@75ರಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ; ವಸತಿ ಫಲಾನುಭವಿಗಳೊಂದಿಗೆ ಸಂವಾದ
ಆಜಾದಿ ಕಿ ಅಮೃತ್​ ಮಹೋತ್ಸವ್​
TV9 Web
| Edited By: |

Updated on:Oct 29, 2021 | 3:19 PM

Share

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಪ್ರದೇಶದ ಲಖನೌಗೆ ಆಗಮಿಸಿ ಆಜಾದಿ@75: ನ್ಯೂ ಅರ್ಬನ್​ ಇಂಡಿಯಾ: ಟ್ರಾನ್ಸ್​ಫರ್ಮಿಂಗ್​ ಅರ್ಬನ್​ ಲ್ಯಾಂಡ್​ಸ್ಕೇಪ್​ ಸಮ್ಮೇಳನ ಮತ್ತು ಎಕ್ಸ್​ಪೋ ಉದ್ಘಾಟಿಸಿದ್ದಾರೆ. ಒಟ್ಟು 75 ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅದರಲ್ಲಿ ಮುಖ್ಯವಾಗಿ 75 ಜಿಲ್ಲೆಗಳ 75 ಸಾವಿರ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಆವಾಸ್​ ಯೋಜನೆ-ಅರ್ಬನ್​(PMAY-U) ಯಡಿ ಮನೆಗಳ ಕೀಯನ್ನು ವರ್ಚ್ಯುವಲ್​ ಆಗಿ ವಿತರಿಸಿದ್ದಾರೆ. ಹಾಗೇ, ಲಖನೌ, ಕಾನ್ಪುರ, ವಾರಾಣಸಿ, ಪ್ರಯಾಗ್​ರಾಜ್​, ಗೋರಖ್​ಪುರ, ಝಾನ್ಸಿ ಮತ್ತು ಘಾಜಿಯಾಬಾದ್​​ಗಳಿಗೆ ಸಂಚಾರ ಮಾಡುವಂತೆ 75 ಎಲೆಕ್ಟ್ರಿಕ್​ ಬಸ್​​ಗಳಿಗೆ ಚಾಲನೆ ನೀಡಿದ್ದಾರೆ.  ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯ ವಿವಿಧ ಪ್ರಮುಖ ಕಾರ್ಯಕ್ರಮಗಳಡಿ ಜಾರಿಗೊಳಿಸಿದ 75 ಯೋಜನೆಗಳ ವಿವರಗಳನ್ನೊಳಗೊಂಡ ಕಾಫಿ ಟೇಬಲ್​ ಬುಕ್​ ಬಿಡುಗಡೆ ಮಾಡಿದ್ದಾರೆ.

ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಈ ಎಕ್ಸ್​ಪೋ ಮತ್ತು ನವನಗರ ಭಾರತ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಸತಿ ಯೋಜನೆ ಫಲಾನುಭವಿಗಳೊಂದಿಗೆ ಸಂವಾದವನ್ನೂ ನಡೆಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ಗೃಹ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಹರ್ದೀಪ್​ ಪುರಿ, ಯುಪಿ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪಾಲ್ಗೊಂಡಿದ್ದಾರೆ.  ಸಮಾರಂಭದಲ್ಲಿ ಮಾತನಾಡಿದ ರಾಜನಾಥ್​ ಸಿಂಗ್​, ಪ್ರಧಾನಿ ನರೇಂದ್ರ ಮೋದಿಯವರು ನವಭಾರತ ನಿರ್ಮಾಣದ ಕನಸು ಕಂಡಿದ್ದಾರೆ. ಅದನ್ನು ಪೂರೈಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಪ್ರಧಾನಿ ಕನಸು ನನಸಾಗುತ್ತಿರುವುದಕ್ಕೆ ಸಾಕ್ಷಿಯಾಗಿ ಹಲವು ಬದಲಾವಣೆಗಳು ಆಗುತ್ತಿದೆ ಎಂದು ಹೇಳಿದರು.

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

ಬಳಿಕ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿ, ಪ್ರಧಾನಮಂತ್ರಿ ಆವಾಸ್​ ಯೋಜನೆಯಡಿ ಕೇಂದ್ರ ಸರ್ಕಾರ 17.3 ಲಕ್ಷ ಮನೆಗಳನ್ನು ಮಂಜೂರು ಮಾಡಿದೆ. ಇದುವರೆಗೆ 8.8 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಮನೆ ಪಡೆದಿದ್ದಾರೆ ಎಂದು ತಿಳಿಸಿದರು. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಇದೇ ವೇಳೆ, ಅಯೋಧ್ಯೆ ಅಭಿವೃದ್ಧಿ ಯೋಜನೆಯ ಬಗ್ಗೆಯೂ ಸಿಎಂ ಯೋಗಿ ಆದಿತ್ಯನಾಥ್​ ಬಳಿ ಕೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

ಅನಾಥಾಶ್ರಮದ ಹೆಸರಲ್ಲಿ ಬಟ್ಟೆ ಸಂಗ್ರಹ ಮಾಡಿ 10-20 ರೂಗೆ ಸೇಲ್, ಮಾರ್ಷಲ್​ಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ವಂಚಕ

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

Published On - 1:23 pm, Tue, 5 October 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ