AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖನೌನಲ್ಲಿ ಆಜಾದಿ@75ರಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ; ವಸತಿ ಫಲಾನುಭವಿಗಳೊಂದಿಗೆ ಸಂವಾದ

ಪ್ರಧಾನಿ ನರೇಂದ್ರ ಮೋದಿಯವರು ನವಭಾರತ ನಿರ್ಮಾಣದ ಕನಸು ಕಂಡಿದ್ದಾರೆ. ಅದನ್ನು ಪೂರೈಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ರಾಜನಾಥ್​ ಸಿಂಗ್​ ಹೇಳಿದ್ದಾರೆ.

ಲಖನೌನಲ್ಲಿ ಆಜಾದಿ@75ರಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ; ವಸತಿ ಫಲಾನುಭವಿಗಳೊಂದಿಗೆ ಸಂವಾದ
ಆಜಾದಿ ಕಿ ಅಮೃತ್​ ಮಹೋತ್ಸವ್​
TV9 Web
| Updated By: ಆಯೇಷಾ ಬಾನು|

Updated on:Oct 29, 2021 | 3:19 PM

Share

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಪ್ರದೇಶದ ಲಖನೌಗೆ ಆಗಮಿಸಿ ಆಜಾದಿ@75: ನ್ಯೂ ಅರ್ಬನ್​ ಇಂಡಿಯಾ: ಟ್ರಾನ್ಸ್​ಫರ್ಮಿಂಗ್​ ಅರ್ಬನ್​ ಲ್ಯಾಂಡ್​ಸ್ಕೇಪ್​ ಸಮ್ಮೇಳನ ಮತ್ತು ಎಕ್ಸ್​ಪೋ ಉದ್ಘಾಟಿಸಿದ್ದಾರೆ. ಒಟ್ಟು 75 ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅದರಲ್ಲಿ ಮುಖ್ಯವಾಗಿ 75 ಜಿಲ್ಲೆಗಳ 75 ಸಾವಿರ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಆವಾಸ್​ ಯೋಜನೆ-ಅರ್ಬನ್​(PMAY-U) ಯಡಿ ಮನೆಗಳ ಕೀಯನ್ನು ವರ್ಚ್ಯುವಲ್​ ಆಗಿ ವಿತರಿಸಿದ್ದಾರೆ. ಹಾಗೇ, ಲಖನೌ, ಕಾನ್ಪುರ, ವಾರಾಣಸಿ, ಪ್ರಯಾಗ್​ರಾಜ್​, ಗೋರಖ್​ಪುರ, ಝಾನ್ಸಿ ಮತ್ತು ಘಾಜಿಯಾಬಾದ್​​ಗಳಿಗೆ ಸಂಚಾರ ಮಾಡುವಂತೆ 75 ಎಲೆಕ್ಟ್ರಿಕ್​ ಬಸ್​​ಗಳಿಗೆ ಚಾಲನೆ ನೀಡಿದ್ದಾರೆ.  ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯ ವಿವಿಧ ಪ್ರಮುಖ ಕಾರ್ಯಕ್ರಮಗಳಡಿ ಜಾರಿಗೊಳಿಸಿದ 75 ಯೋಜನೆಗಳ ವಿವರಗಳನ್ನೊಳಗೊಂಡ ಕಾಫಿ ಟೇಬಲ್​ ಬುಕ್​ ಬಿಡುಗಡೆ ಮಾಡಿದ್ದಾರೆ.

ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಈ ಎಕ್ಸ್​ಪೋ ಮತ್ತು ನವನಗರ ಭಾರತ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಸತಿ ಯೋಜನೆ ಫಲಾನುಭವಿಗಳೊಂದಿಗೆ ಸಂವಾದವನ್ನೂ ನಡೆಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ಗೃಹ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಹರ್ದೀಪ್​ ಪುರಿ, ಯುಪಿ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪಾಲ್ಗೊಂಡಿದ್ದಾರೆ.  ಸಮಾರಂಭದಲ್ಲಿ ಮಾತನಾಡಿದ ರಾಜನಾಥ್​ ಸಿಂಗ್​, ಪ್ರಧಾನಿ ನರೇಂದ್ರ ಮೋದಿಯವರು ನವಭಾರತ ನಿರ್ಮಾಣದ ಕನಸು ಕಂಡಿದ್ದಾರೆ. ಅದನ್ನು ಪೂರೈಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಪ್ರಧಾನಿ ಕನಸು ನನಸಾಗುತ್ತಿರುವುದಕ್ಕೆ ಸಾಕ್ಷಿಯಾಗಿ ಹಲವು ಬದಲಾವಣೆಗಳು ಆಗುತ್ತಿದೆ ಎಂದು ಹೇಳಿದರು.

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

ಬಳಿಕ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿ, ಪ್ರಧಾನಮಂತ್ರಿ ಆವಾಸ್​ ಯೋಜನೆಯಡಿ ಕೇಂದ್ರ ಸರ್ಕಾರ 17.3 ಲಕ್ಷ ಮನೆಗಳನ್ನು ಮಂಜೂರು ಮಾಡಿದೆ. ಇದುವರೆಗೆ 8.8 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಮನೆ ಪಡೆದಿದ್ದಾರೆ ಎಂದು ತಿಳಿಸಿದರು. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಇದೇ ವೇಳೆ, ಅಯೋಧ್ಯೆ ಅಭಿವೃದ್ಧಿ ಯೋಜನೆಯ ಬಗ್ಗೆಯೂ ಸಿಎಂ ಯೋಗಿ ಆದಿತ್ಯನಾಥ್​ ಬಳಿ ಕೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

ಅನಾಥಾಶ್ರಮದ ಹೆಸರಲ್ಲಿ ಬಟ್ಟೆ ಸಂಗ್ರಹ ಮಾಡಿ 10-20 ರೂಗೆ ಸೇಲ್, ಮಾರ್ಷಲ್​ಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ವಂಚಕ

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

Published On - 1:23 pm, Tue, 5 October 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ