AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

ಗಗನ್‌ಯಾನ್ ಮಿಷನ್‌ನ ಪ್ರಗತಿಯನ್ನು ಪರಿಶೀಲಿಸಿದ ಪ್ರಧಾನಿ ದೇಶದ ಮೊದಲ ಮಾನವ ಬಾಹ್ಯಾಕಾಶ ಯಾನಕ್ಕಾಗಿ ತರಬೇತಿ ಪಡೆಯುತ್ತಿರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಘೋಷಿಸಿದರು. ಈ ಬಗ್ಗೆ ಮಾತನಾಡಿದ ಅವರು ಇದು ಕೇವಲ 4 ಹೆಸರುಗಳು ಅಥವಾ 4 ಮನುಷ್ಯರಲ್ಲ, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯಲು ಹೊರಟಿರುವ ನಾಲ್ಕು ಶಕ್ತಿಗಳು. 40 ವರ್ಷಗಳ ನಂತರ ಭಾರತೀಯನೊಬ್ಬ ಬಾಹ್ಯಾಕಾಶಕ್ಕೆ ಹೋಗುತ್ತಿದ್ದಾನೆ ಎಂದಿದ್ದಾರೆ

ಕೇರಳ: ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 27, 2024 | 1:31 PM

Share

ತಿರುವನಂತಪುರಂ ಫೆಬ್ರವರಿ 27: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು(ಮಂಗಳವಾರ) ಕೇರಳದಲ್ಲಿ (Kerala) ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ PSLV ಇಂಟಿಗ್ರೇಷನ್ ಫೆಸಿಲಿಟಿ (PIF), ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಹೊಸ ‘ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ’, ತಿರುವನಂತಪುರದ VSSC ನಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಈ ಮೂರು ಯೋಜನೆಗಳಿಗೆ ಮೋದಿ ಚಾಲನೆ ನೀಡಿದ್ದಾರೆ. ಪ್ರಸ್ತುತ ಯೋಜನೆಗಳನ್ನ ಸುಮಾರು ₹1,800 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಗಗನ್‌ಯಾನ್ ಮಿಷನ್‌ನ ಪ್ರಗತಿಯನ್ನು ಪರಿಶೀಲಿಸಿದ ಪ್ರಧಾನಿ ದೇಶದ ಮೊದಲ ಮಾನವ ಬಾಹ್ಯಾಕಾಶ ಯಾನಕ್ಕಾಗಿ ತರಬೇತಿ ಪಡೆಯುತ್ತಿರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಘೋಷಿಸಿದರು.

ನಾಲ್ವರು ಗಗನಯಾತ್ರಿಗಳು: ಪ್ರಶಾಂತ್ ಬಾಲಕೃಷ್ಣನ್ ನಾಯರ್, ಅಂಗದ್ ಪ್ರತಾಪ್, ಅಜಿತ್ ಕೃಷ್ಣನ್ ಮತ್ತು ಶುಭಾಂಶು ಶುಕ್ಲಾ.

ಮೋದಿ ಮಾತು

ಕೇರಳ ರಾಜ್ಯದ ರಾಜಧಾನಿ ಬಳಿಯ ತುಂಬಾದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (VSSC) ಮೋದಿ ಈ ಹೆಸರು ಘೋಷಿಸಿದ್ದಾರೆ. ಈ ಅವರು ನಾಲ್ವರಿಗೆ ಮೋದಿ astronaut wings ನೀಡಿದ್ದಾರೆ. ‘ಅವರು ಕೇವಲ 4 ಹೆಸರುಗಳು ಅಥವಾ 4 ಮನುಷ್ಯರಲ್ಲ, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯಲು ಹೊರಟಿರುವ ನಾಲ್ಕು ಶಕ್ತಿಗಳು. 40 ವರ್ಷಗಳ ನಂತರ ಭಾರತೀಯನೊಬ್ಬ ಬಾಹ್ಯಾಕಾಶಕ್ಕೆ ಹೋಗುತ್ತಿದ್ದಾನೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಮೋದಿ

ಗಗನ್‌ಯಾನ್ ಮಿಷನ್ ಭಾರತದ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮವಾಗಿದ್ದು, ಇದಕ್ಕಾಗಿ ವಿವಿಧ ಇಸ್ರೋ ಕೇಂದ್ರಗಳಲ್ಲಿ ವ್ಯಾಪಕ ಸಿದ್ಧತೆಗಳು ನಡೆಯುತ್ತಿವೆ.

ಇದನ್ನೂ ಓದಿ: ಇಂದಿನಿಂದ ಮೂರು ರಾಜ್ಯಗಳಿಗೆ ಮೋದಿ ಪ್ರವಾಸ; ಇಲ್ಲಿದೆ ಎರಡು ದಿನಗಳ ಕಾರ್ಯಕ್ರಮದ ಪಟ್ಟಿ

ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ (ವಿಎಸ್‌ಎಸ್‌ಸಿ) ಭೇಟಿ ನೀಡಿದ ಪ್ರಧಾನಿ ಮೋದಿ ಜತೆ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇರಳ ಸಿಎಂ ಪಿಣರಾಯಿ ವಿಜಯನ್, ಎಂಒಎಸ್ ಮುರಳೀಧರನ್ ಕೂಡಾ ಇದ್ದರು. ಈ ಸಂದರ್ಭದಲ್ಲಿ ಇಸ್ರೋ ಅಧ್ಯಕ್ಷ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ