CBI’s diamond jubilee celebrations: ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವಲ್ಲಿ ಸಿಬಿಐನ ಪಾತ್ರ ದೊಡ್ಡದು: ನರೇಂದ್ರ ಮೋದಿ
ಈ ವೇಳೆ ಸಿಬಿಐನ ವಜ್ರ ಮಹೋತ್ಸವದ ವರ್ಷವನ್ನು ಗುರುತಿಸುವ ಅಂಚೆ ಚೀಟಿ ಮತ್ತು ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡುವುದರ ಜೊತೆಗೆ ಸಿಬಿಐನ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಮೋದಿ ಬಿಡುಗಡೆ ಮಾಡಿದ್ದಾರೆ.

ಮುಖ್ಯಾಂಶಗಳು
- ಸಿಬಿಐ ಸಾಮಾನ್ಯ ನಾಗರಿಕರಿಗೆ ಭರವಸೆ ಮತ್ತು ಶಕ್ತಿಯನ್ನು ನೀಡಿದೆ
- ಸಿಬಿಐನಂಥಾ ವೃತ್ತಿಪರ ಮತ್ತು ದಕ್ಷ ಸಂಸ್ಥೆಗಳಿಲ್ಲದೆ ಭಾರತ ಮುಂದುವರಿಯಲು ಸಾಧ್ಯವಿಲ್ಲ
- ನಾವು ಕಪ್ಪುಹಣ ಹೊಂದಿರುವವರ ವಿರುದ್ಧ, ಭ್ರಷ್ಟರ ವಿರುದ್ಧ, ಭ್ರಷ್ಟಾಚಾರದ ಮೂಲ ಕಾರಣಗಳ ವಿರುದ್ಧ ಕ್ರಮ ಕ್ರಮದಲ್ಲಿ ಕೆಲಸ ಮಾಡಿದ್ದೇವೆ ಎಂದ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಸೋಮವಾರ ಕೇಂದ್ರೀಯ ತನಿಖಾ ದಳದ (CBI) ವಜ್ರಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿದ್ದಾರೆ. ಈ ವೇಳೆ ಸಿಬಿಐನ ವಜ್ರ ಮಹೋತ್ಸವದ ವರ್ಷವನ್ನು ಗುರುತಿಸುವ ಅಂಚೆ ಚೀಟಿ ಮತ್ತು ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡುವುದರ ಜೊತೆಗೆ ಸಿಬಿಐನ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಮೋದಿ ಬಿಡುಗಡೆ ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಮೋದಿ ಅವರು ವಿಶೇಷ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ಮತ್ತು ಏಜೆನ್ಸಿಯ ಅತ್ಯುತ್ತಮ ತನಿಖಾ ಅಧಿಕಾರಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿದ್ದಾರೆ.
PM @narendramodi welcomed with CBI’s Diamond Jubilee Celebration memento at Vigyan Bhawan in New Delhi pic.twitter.com/idP5BvkCZ2
— DD News (@DDNewslive) April 3, 2023
ಮೋದಿ ಶಿಲ್ಲಾಂಗ್, ಪುಣೆ ಮತ್ತು ನಾಗ್ಪುರದಲ್ಲಿ ಹೊಸದಾಗಿ ನಿರ್ಮಿಸಲಾದ ಸಿಬಿಐ ಕಚೇರಿ ಸಂಕೀರ್ಣಗಳನ್ನು ಉದ್ಘಾಟಿಸಿದ್ದಾರೆ. ಏಪ್ರಿಲ್ 1, 1963 ರಂದು ಕೇಂದ್ರ ಗೃಹ ಸಚಿವಾಲಯದ ನಿರ್ಣಯದ ಮೂಲಕ ಸಿಬಿಐ ಅನ್ನು ಸ್ಥಾಪಿಸಲಾಯಿತು.
ಮೋದಿ ಭಾಷಣದ ಮುಖ್ಯಾಂಶಗಳು
- ಸಿಬಿಐನ ವಜ್ರಮಹೋತ್ಸವದ ಸಮಾರಂಭದಲ್ಲಿ ಭಾಷಣ ಮಾಡಿದ ಮೋದಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಸಿಬಿಐ ಜನರ ವಿಶ್ವಾಸವನ್ನು ಗೆದ್ದಿದೆ. ಏನಾದರೂ ತನಿಖೆ ಬಂದರೆ ಜನರು ಅದನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಬಯಸುತ್ತಾರೆ.ಯಾಕೆಂದರೆ ಅವರಿಗೆ ಅದರ ಮೇಲೆ ಅಷ್ಟೊಂದು ವಿಶ್ವಾಸವಿಗೆ. ಈ ರೀತಿ ಜನರ ನಂಬುಗೆ ಪಡೆಯುವುದು ಅಷ್ಟೊಂದು ಸುಲಭವಲ್ಲ. ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವಲ್ಲಿ ಸಿಬಿಐನ ಪಾತ್ರ ದೊಡ್ಡದು.
- ಸಿಬಿಐ ಸಾಮಾನ್ಯ ನಾಗರಿಕರಿಗೆ ಭರವಸೆ ಮತ್ತು ಶಕ್ತಿಯನ್ನು ನೀಡಿದೆ. ಸಿಬಿಐ ನ್ಯಾಯಕ್ಕಾಗಿ ಬ್ರಾಂಡ್ ಆಗಿ ಹೊರಹೊಮ್ಮಿರುವುದರಿಂದ ಸಿಬಿಐ ತನಿಖೆಗೆ ಒತ್ತಾಯಿಸಿ ಜನರು ಪ್ರತಿಭಟನೆಗಳನ್ನು ನಡೆಸುತ್ತಾರೆ.
- ಸಿಬಿಐನಂಥಾ ವೃತ್ತಿಪರ ಮತ್ತು ದಕ್ಷ ಸಂಸ್ಥೆಗಳಿಲ್ಲದೆ ಭಾರತ ಮುಂದುವರಿಯಲು ಸಾಧ್ಯವಿಲ್ಲ. ಬ್ಯಾಂಕ್ ವಂಚನೆಗಳಿಂದ ಹಿಡಿದು ವನ್ಯಜೀವಿಗಳಿಗೆ ಸಂಬಂಧಿಸಿದ ವಂಚನೆಗಳವರೆಗೆ, ಸಿಬಿಐನ ಕಾರ್ಯವ್ಯಾಪ್ತಿಯು ಹಲವಾರು ಪಟ್ಟು ಹೆಚ್ಚಾಗಿದೆ.
- ಪ್ರಜಾಪ್ರಭುತ್ವ ಮತ್ತು ನ್ಯಾಯಕ್ಕೆ ಭ್ರಷ್ಟಾಚಾರವು ಅತಿದೊಡ್ಡ ತಡೆಯಾಗಿದೆ, ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಸಿಬಿಐನ ಪ್ರಮುಖ ಜವಾಬ್ದಾರಿಯಾಗಿದೆ.
- ಆಧುನಿಕ ತಂತ್ರಜ್ಞಾನಗಳಿಂದಾಗಿ ಇಂದು ಅಪರಾಧಗಳು ಜಾಗತಿಕವಾಗುತ್ತಿರುವುದು ನಿಜ. ಆದರೆ ಈ ತಂತ್ರಜ್ಞಾನಗಳು ಮಾತ್ರ ಈ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡಬಲ್ಲವು ಎಂಬುದಂತೂ ನಿಜ. ತನಿಖೆಯಲ್ಲಿ ನ್ಯಾಯ ವಿಜ್ಞಾನದ ಬಳಕೆಯನ್ನು ನಾವು ಮತ್ತಷ್ಟು ತೀವ್ರಗೊಳಿಸಬೇಕಾಗಿದೆ.
- ದೇಶದಲ್ಲಿ ಈ ಹಿಂದೆ ಅಪನಂಬಿಕೆ ಇತ್ತು, ನೀತಿ ಪಾಲನೆಯಾಗಲು ಸಮಯ ತೆಗೆದುಕೊಳ್ಳುತ್ತಿತ್ತು. ಆದರೆ 2014 ರಿಂದ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಮರುಸ್ಥಾಪಿಸುವುದು, ಪೋಷಿಸುವುದು ಮತ್ತು ಬಲಪಡಿಸುವುದು ನಮ್ಮ ಪ್ರಾಥಮಿಕ ಗುರಿಯಾಗಿದೆ.
- ನಾವು ಕಪ್ಪುಹಣ ಹೊಂದಿರುವವರ ವಿರುದ್ಧ, ಭ್ರಷ್ಟರ ವಿರುದ್ಧ, ಭ್ರಷ್ಟಾಚಾರದ ಮೂಲ ಕಾರಣಗಳ ವಿರುದ್ಧ ಕ್ರಮ ಕ್ರಮದಲ್ಲಿ ಕೆಲಸ ಮಾಡಿದ್ದೇವೆ.
- ನಾವು ವ್ಯವಸ್ಥೆಗಳಲ್ಲಿ ಅತ್ಯಂತ ಪಾರದರ್ಶಕತೆಯನ್ನು ಖಾತ್ರಿಪಡಿಸಿದ್ದೇವೆ. 2G ಮತ್ತು 5G ಸ್ಪೆಕ್ಟ್ರಮ್ ಹಂಚಿಕೆ ಪ್ರಕ್ರಿಯೆಗಳು ಇದಕ್ಕೆ ಸಾಕ್ಷಿಯಾಗಿ ನಿಂತಿವೆ.
- ಕಳೆದ ಆರು ದಶಕಗಳಲ್ಲಿ ಸಿಬಿಐ ಬಹು ಆಯಾಮದ ಮತ್ತು ಬಹು-ಶಿಸ್ತಿನ ತನಿಖಾ ಸಂಸ್ಥೆಯಾಗಿ ಮನ್ನಣೆ ಗಳಿಸಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:18 pm, Mon, 3 April 23



