AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿಯಿಂದ ಮೊಟ್ಟ ಮೊದಲ ಗ್ರೀನ್​ಫೀಲ್ಡ್​ ವಿಮಾನ ನಿಲ್ದಾಣ ಲೋಕಾರ್ಪಣೆ

ಅರುಣಾಚಲ ಪ್ರದೇಶದ ಮೊದಲ "ಗ್ರೀನ್‌ಫೀಲ್ಡ್" ವಿಮಾನ ನಿಲ್ದಾಣದ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ ತಮ್ಮ ವಿರುದ್ಧದ ಟೀಕಾಕಾರರಿಗೆ ಚಾಟಿ ಬೀಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿಯಿಂದ ಮೊಟ್ಟ ಮೊದಲ ಗ್ರೀನ್​ಫೀಲ್ಡ್​ ವಿಮಾನ ನಿಲ್ದಾಣ ಲೋಕಾರ್ಪಣೆ
ಅರುಣಾಚಲ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 19, 2022 | 12:53 PM

ಇಟಾನಗರ: 2014ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತದ ಪ್ರತಿ ಹಳ್ಳಿಗೆ ವಿದ್ಯುತ್ ನೀಡುವ ಅಭಿಯಾನವನ್ನು ಪ್ರಾರಂಭಿಸಲಾಯಿತು. ಅರುಣಾಚಲ ಪ್ರದೇಶದ (Arunachal Pradesh) ಹಲವಾರು ಗ್ರಾಮಗಳು ಇದರಿಂದ ಪ್ರಯೋಜನ ಪಡೆದಿವೆ. ಗಡಿ ಭಾಗದಲ್ಲಿರುವ ಗ್ರಾಮಗಳನ್ನು ದೇಶದ ಮೊದಲ ಗ್ರಾಮವೆಂದು ಪರಿಗಣಿಸಿ ನಮ್ಮ ಸರ್ಕಾರ ಕೆಲಸ ಮಾಡಿದೆ. ಗಡಿ ಭಾಗದಲ್ಲಿರುವ ಗ್ರಾಮಗಳನ್ನು ಬಲಪಡಿಸುವುದು ನಮ್ಮ ಪ್ರಯತ್ನವಾಗಿದೆ ಎಂದು ಪ್ರಧಾನಿ ಮೋದಿ (PM Narendra Modi) ಹೇಳಿದ್ದಾರೆ.

ನಾನು 2019ರಲ್ಲಿ ಇದರ ಅಡಿಗಲ್ಲು ಹಾಕಿದಾಗ ರಾಜಕೀಯ ಟೀಕಾಕಾರರು ಚುನಾವಣೆಗಳು ನಡೆಯುತ್ತಿರುವುದರಿಂದಲೇ ಪ್ರಧಾನಿ ಮೋದಿ ಅರುಣಾಚಲ ಪ್ರದೇಶಕ್ಕೆ ಹೋಗುತ್ತಿದ್ದಾರೆ. ಅವರು ವಿಮಾನ ನಿಲ್ದಾಣವನ್ನು ನಿರ್ಮಿಸಲು ಹೋಗುತ್ತಿಲ್ಲ, ಕೇವಲ ಅಡಿಗಲ್ಲು ಹಾಕಲು ಹೋಗುತ್ತಿದ್ದಾರೆ ಎಂದು ಗಲಾಟೆ ಮಾಡಿದ್ದರು. ಇದೀಗ ಈ ವಿಮಾನ ನಿಲ್ದಾಣದ ಉದ್ಘಾಟನೆಯಿಂದ ಅವರಿಗೆ ಕಪಾಳಮೋಕ್ಷವಾಗಿದೆ ಎಂದು ದೋನಿ ಪೋಲೋ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: Viral Photo: ಜಿ20 ಶೃಂಗಸಭೆ; ಪ್ರಧಾನಿ ನರೇಂದ್ರ ಮೋದಿಗೆ ಸೆಲ್ಯೂಟ್ ಹೊಡೆದ ಅಮೆರಿಕ ಅಧ್ಯಕ್ಷ ಜೋ ಬೈಡೆನ್

ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರುಣಾಚಲದ ಮೊದಲ “ಗ್ರೀನ್‌ಫೀಲ್ಡ್” ವಿಮಾನ ನಿಲ್ದಾಣದ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ ತಮ್ಮ ವಿರುದ್ಧದ ಟೀಕಾಕಾರರಿಗೆ ಚಾಟಿ ಬೀಸಿದ್ದಾರೆ. ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಪ್ರಧಾನಿ ಮೋದಿಯವರು ದೋನಿ ಪೋಲೋ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಹೆಸರು ಈಶಾನ್ಯ ರಾಜ್ಯದಲ್ಲಿ ಸೂರ್ಯ (ಡೊನಿ) ಮತ್ತು ಚಂದ್ರ (ಪೊಲೊ)ಗೆ ಪ್ರಾಚೀನ ಹೆಸರಾಗಿದೆ. 640 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಈ ವಿಮಾನ ನಿಲ್ದಾಣವು ಸಂಪರ್ಕವನ್ನು ಹೆಚ್ಚಿಸಲು ಮತ್ತು ಈ ಪ್ರದೇಶದಲ್ಲಿ ವ್ಯಾಪಾರ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: Kashi-Tamil Samagam: ವಾರಣಾಸಿಯಲ್ಲಿ ಕಾಶಿ-ತಮಿಳು ಸಮಾಗಮವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಇದೇ ವೇಳೆ ಅರುಣಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ಅವರು 600 ಮೆಗಾವ್ಯಾಟ್ ಕಮೆಂಗ್ ಜಲವಿದ್ಯುತ್ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ಅರುಣಾಚಲ ಪ್ರದೇಶವನ್ನು ವಿದ್ಯುತ್ ಹೆಚ್ಚುವರಿ ರಾಜ್ಯವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. 8,450 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್