AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudarshan Setu: ಗುಜರಾತ್​ನಲ್ಲಿ ದೇಶದ ಅತಿ ಉದ್ದದ ಸುದರ್ಶನ ಕೇಬಲ್ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಈಗ ತಮ್ಮ ತವರು ರಾಜ್ಯ ಗುಜರಾತ್‌ನಲ್ಲಿ ಎರಡು ದಿನಗಳ ಪ್ರವಾಸದಲ್ಲಿದ್ದಾರೆ. ಈ ಅವಧಿಯಲ್ಲಿ ಪ್ರಧಾನಿಯವರು ರಾಜ್ಯಕ್ಕೆ 52 ಸಾವಿರ ಕೋಟಿಗೂ ಹೆಚ್ಚು ಹೊಸ ಯೋಜನೆಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ. ಇಲ್ಲಿ ಸುದರ್ಶನ ಸೇತುವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಈ ಸೇತುವೆಯನ್ನು ಗುಜರಾತ್‌ನ ದ್ವಾರಕಾ ಜಿಲ್ಲೆಯಲ್ಲಿ ನಿರ್ಮಿಸಲಾಗಿದೆ. ಇದಕ್ಕೂ ಮುನ್ನ ವಾರಣಾಸಿಯ ಜನತೆಗೆ ಸಾವಿರಾರು ಕೋಟಿ ಮೌಲ್ಯದ ಉಡುಗೊರೆಯನ್ನೂ ನೀಡಿದ್ದಾರೆ.

Sudarshan Setu: ಗುಜರಾತ್​ನಲ್ಲಿ ದೇಶದ ಅತಿ ಉದ್ದದ ಸುದರ್ಶನ ಕೇಬಲ್ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಸುದರ್ಶನ ಸೇತು
ನಯನಾ ರಾಜೀವ್
|

Updated on:Feb 25, 2024 | 10:24 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಗುಜರಾತ್​ನಲ್ಲಿ ಅತಿ ಉದ್ದದ ಸುದರ್ಶನ ಕೇಬಲ್ ಸೇತು(Sudarshan Setu) ವೆಯನ್ನು ಉದ್ಘಾಟಿಸಿದರು. ಪ್ರಧಾನಿ ಮೋದಿ ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿದ್ದಾರೆ. ಈ 2.5 ಕಿ.ಮೀ ಉದ್ದದ ಸೇತುವೆಯು ಭಾರತದ ಅತಿ ಉದ್ದದ ಕೇಬಲ್ ಸೇತುವೆಯಾಗಿದೆ. ಸುದರ್ಶನ ಸೇತು ಸೇತುವೆಯನ್ನು ಸುಮಾರು 980 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ, ಇದನ್ನು ಓಖಾ-ಬೆಟ್ ದ್ವಾರಕಾ ಸಿಗ್ನೇಚರ್ ಸೇತುವೆ ಎಂದೂ ಕರೆಯಲಾಗುತ್ತದೆ. ಈ ಸೇತುವೆಯು ದ್ವಾರಕಾಧೀಶ ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ಬಹಳ ಮುಖ್ಯವಾದುದು ಎಂದು ಸಾಬೀತುಪಡಿಸುತ್ತದೆ. ಈ ಅವಧಿಯಲ್ಲಿ ಪ್ರಧಾನಿಯವರು ರಾಜ್ಯಕ್ಕೆ 52 ಸಾವಿರ ಕೋಟಿಗೂ ಹೆಚ್ಚು ಹೊಸ ಯೋಜನೆಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ.

ಸುದರ್ಶನ ಸೇತುವೆಗೆ ಸಂಬಂಧಿಸಿದ ವಿಶೇಷ ಸಂಗತಿಗಳು ಓಖಾ ಮುಖ್ಯ ಭೂಭಾಗವನ್ನು ಬೆಟ್ ದ್ವಾರಕಾ ದ್ವೀಪಕ್ಕೆ ಸಂಪರ್ಕಿಸುವ ಸುದರ್ಶನ್ ಸೇತುವೆಯು ಈ ಪ್ರದೇಶದ ಸಂಪರ್ಕಕ್ಕೆ ಹೊಸ ದಿಕ್ಕನ್ನು ನೀಡುತ್ತದೆ. ಸುದರ್ಶನ್ ಸೇತು ಭಾರತದ ಅತಿ ಉದ್ದದ ಕೇಬಲ್ ಸೇತುವೆಯಾಗಿದೆ. ಇದರಲ್ಲಿ ಫುಟ್‌ಪಾತ್‌ನ ಮೇಲ್ಭಾಗದಲ್ಲಿ ಸೌರ ಫಲಕಗಳನ್ನು ಅಳವಡಿಸಲಾಗಿದ್ದು, ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತದೆ.

ಮತ್ತಷ್ಟು ಓದಿ: ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

-ಚತುಷ್ಪಥ ಸೇತುವೆಯ ಎರಡೂ ಬದಿಯಲ್ಲಿ 50 ಮೀಟರ್ ಅಗಲದ ಫುಟ್ ಪಾತ್​ಗಳಿವೆ -ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 2017 ರಲ್ಲಿ ಸೇತುವೆಯ ಅಡಿಪಾಯ ಹಾಕಿದರು -ಸುದರ್ಶನ ಸೇತುವೆ ನಿರ್ಮಾಣಕ್ಕೆ 978 ಕೋಟಿ ರೂ. -ಸುದರ್ಶನ ಸೇತುವು ಭಗವದ್ಗೀತೆಯ ಶ್ಲೋಕಗಳು ಮತ್ತು ಎರಡೂ ಬದಿಗಳಲ್ಲಿ ಶ್ರೀಕೃಷ್ಣನ ಚಿತ್ರಗಳಿಂದ ಅಲಂಕರಿಸಲ್ಪಟ್ಟ ಕಾಲುದಾರಿಯನ್ನು ಹೊಂದಿದೆ. -ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಮೊದಲ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಅನ್ನು ರಾಜ್‌ಕೋಟ್‌ನಲ್ಲಿ ಉದ್ಘಾಟಿಸಿದರು. -ಎನ್‌ಎಚ್‌ಎಐ, ರೈಲ್ವೆ, ಇಂಧನ, ಪೆಟ್ರೋಕೆಮಿಕಲ್ಸ್, ರಸ್ತೆಗಳು ಮತ್ತು ಕಟ್ಟಡಗಳಂತಹ ವಿವಿಧ ರಾಜ್ಯ ಮತ್ತು ಕೇಂದ್ರ ಇಲಾಖೆಗಳ 48,000 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:14 am, Sun, 25 February 24

Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು