AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಗತವಾದ ಕೊಚ್ಚಿ-ಮಂಗಳೂರು ಅನಿಲ ಪೈಪ್ ಲೈನ್.. ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

ನೈಸರ್ಗಿಕ ಅನಿಲ ಕೊಳವೆಯು, ಪರಿಸರ ಸ್ನೇಹಿ ಹಾಗೂ ಕೈಗೆಟಕುವ ದರದ ಇಂಧನವನ್ನು ಸರಬರಾಜು ಮಾಡಲಿದೆ. ಅನಿಲವು, ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ತಂತ್ರಜ್ಞಾನದ ಮೂಲಕ ಗೃಹಬಳಕೆಗೆ ಹಾಗೂ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (CNG) ಮೂಲಕ ಸಾರಿಗೆ ವಿಭಾಗಕ್ಕೆ ಲಭ್ಯವಾಗಲಿದೆ.

ಕಾರ್ಯಗತವಾದ ಕೊಚ್ಚಿ-ಮಂಗಳೂರು ಅನಿಲ ಪೈಪ್ ಲೈನ್.. ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ
ನೈಸರ್ಗಿಕ ಅನಿಲ ಕೊಳವೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Apr 06, 2022 | 10:57 PM

Share

ದೆಹಲಿ: ಕೆಲವು ವರ್ಷಗಳಿಂದ ದೇಶವು ಅಭಿವೃದ್ಧಿಯ ವೇಗ ಹೆಚ್ಚಿಸಿಕೊಂಡಿದೆ. ಅಭಿವೃದ್ಧಿಯ ಅವಕಾಶ ಹಾಗೂ ವಿಸ್ತಾರವನ್ನೂ ಬೆಳೆಸಿಕೊಂಡಿದೆ. 450 ಕಿ.ಮೀ. ಉದ್ದದ ನೈಸರ್ಗಿಕ ಅನಿಲ ಪೈಪ್ ಲೈನ್​ನ್ನು ದೇಶಕ್ಕೆ ಅರ್ಪಿಸಲು ಹೆಮ್ಮೆಯಾಗುತ್ತಿದೆ. ಇದು ಭಾರತಕ್ಕೆ ಮತ್ತು ಕರ್ನಾಟಕ-ಕೇರಳ ಜನತೆಗೆ ಬಹು ಮುಖ್ಯ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ನರೇಂದ್ರ ಮೋದಿ ಇಂದು (ಜ.5) ಬೆಳಗ್ಗೆ 11 ಗಂಟೆಗೆ, ಮಂಗಳೂರು-ಕೊಚ್ಚಿ ಅನಿಲ ಪೈಪ್ ಲೈನ್​ನ್ನು ಉದ್ಘಾಟಿಸಿ ಮಾತನಾಡಿದರು. ಕೇರಳದ ಕೊಚ್ಚಿ ಹಾಗೂ ಕರ್ನಾಟಕದ ಮಂಗಳೂರು ನಡುವಿನ ಅನಿಲ ಕೊಳವೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಅರ್ಪಿಸಿದರು.

ಈ ಬಗ್ಗೆ ಸೋಮವಾರ ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು. ಇದು ಭವಿಷ್ಯದ ಯೋಜನೆಯಾಗಿದೆ. ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಕೊಳವೆಯಿಂದ ಹಲವು ಜನರಿಗೆ ಧನಾತ್ಮಕ ಪರಿಣಾಮವಾಗಲಿದೆ. ಯೋಜನೆಯು #UrjaAatmanirbhartaಕ್ಕೆ ಮೈಲುಗಲ್ಲಾಗಲಿದೆ ಎಂದು ಹೇಳಿದ್ದರು. ಈ ಕಾರ್ಯವು, ‘ಒಂದು ದೇಶ ಒಂದು ಗ್ಯಾಸ್ ಗ್ರಿಡ್’ ಎಂಬ ಘೋಷ ವಾಕ್ಯಕ್ಕೆ ಮೈಲುಗಲ್ಲಾಗಲಿದೆ ಎಂದು ಪ್ರಧಾನಿ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು.

ನೈಸರ್ಗಿಕ ಅನಿಲ ಪೈಪ್ ಲೈನ್ ವಿವರಗಳು 450 ಕಿಲೋ ಮೀಟರ್ ಉದ್ದದ ನೈಸರ್ಗಿಕ ಅನಿಲ ಕೊಳವೆಯನ್ನು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ಸಂಸ್ಥೆ ನಿರ್ಮಿಸಿದೆ. ಈ ಕೊಳವೆಯು, ಪ್ರತಿನಿತ್ಯ 12 ದಶಲಕ್ಷ ಮೆಟ್ರಿಕ್ ಸ್ಟಾಂಡರ್ಡ್ ಕ್ಯೂಬಿಕ್ ಮೀಟರ್ ಅನಿಲವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಪೈಪ್ ಲೈನ್ ಮೂಲಕ ದ್ರವರೂಪದ ನೈಸರ್ಗಿಕ ಅನಿಲ (LNG) ಸರಬರಾಜು ಆಗಲಿದೆ. ಕೊಚ್ಚಿಯ ರಿಗ್ಯಾಸಿಫಿಕೇಷನ್ ಟರ್ಮಿನಲ್​ನಿಂದ ಮಂಗಳೂರಿಗೆ, ಎರ್ನಾಕುಲಮ್, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಯ ಮೂಲಕ ಅನಿಲ ಕೊಳವೆ ಹಾದುಹೋಗಲಿದೆ.

ಒಟ್ಟು ಅಂದಾಜು 3,000 ಕೋಟಿ ರೂಪಾಯಿಯ ಯೋಜನೆ ಇದಾಗಿದೆ. ಅನಿಲ ಕೊಳವೆಯು ನೂರಾರು ನದಿ, ತೊರೆಗಳನ್ನು ದಾಟಿಕೊಂಡು ಹೋಗಿದೆ. ಹಾಗಾಗಿ, ಪೈಪ್ ಲೈನ್ ಅಳವಡಿಕೆಯ ಈ ಯೋಜನೆಯು ಇಂಜಿನಿಯರಿಂಗ್ ಕ್ಷೇತ್ರದ ಸವಾಲಾಗಿತ್ತು. ಅದಕ್ಕಾಗಿ, ಹಾರಿಜಾಂಟಲ್ ಡೈರೆಕ್ಷನಲ್ ಡ್ರಿಲ್ಲಿಂಗ್ ಎಂಬ ತಂತ್ರಜ್ಞಾನ ಬಳಸಿ ಪೈಪ್ ಲೈನ್ ಅಳವಡಿಸಲಾಯಿತು ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ನೈಸರ್ಗಿಕ ಅನಿಲ ಕೊಳವೆಯಿಂದ ಏನು ಉಪಯೋಗ? ನೈಸರ್ಗಿಕ ಅನಿಲ ಕೊಳವೆಯು, ಪರಿಸರ ಸ್ನೇಹಿ ಹಾಗೂ ಕೈಗೆಟಕುವ ದರದ ಇಂಧನವನ್ನು ಸರಬರಾಜು ಮಾಡಲಿದೆ. ಅನಿಲವು, ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ತಂತ್ರಜ್ಞಾನದ ಮೂಲಕ ಗೃಹಬಳಕೆಗೆ ಲಭ್ಯವಾಗಲಿದೆ. ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (CNG) ಮೂಲಕ ಸಾರಿಗೆ ವಿಭಾಗಕ್ಕೆ ಲಭ್ಯವಾಗಲಿದೆ. ಈ ಯೋಜನೆಯಿಂದ ನೈಸರ್ಗಿಕ ಅನಿಲವು ವಾಣಿಜ್ಯ ಹಾಗೂ ಕೈಗಾರಿಕಾ ವಿಭಾಗಕ್ಕೂ ಸಿಗುವಂತಾಗಲಿದೆ. ಪೈಪ್ ಲೈನ್ ಹಾದುಹೋಗುವ ಜಿಲ್ಲೆಗಳಲ್ಲಿ, ಕೊಳವೆಯ ಮೂಲಕ ಅನಿಲ ಸರಬರಾಜು ಆಗಲಿದೆ ಎಂದು ತಿಳಿಸಲಾಗಿದೆ. ಇದರಿಂದ, ವಾಯುಮಾಲಿನ್ಯ ಕಡಿಮೆಯಾಗಿ, ವಾಯುಗುಣಮಟ್ಟ ಹೆಚ್ಚಲಿದೆ.

ನೈಸರ್ಗಿಕ ಅನಿಲ ಪೈಪ್ ಲೈನ್ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಹಾಗೂ ಕೇರಳದ ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಪೆಟ್ರೋಲಿಯಂ ಮತ್ತು ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಉದ್ಘಾಟನೆ

ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

Published On - 12:29 pm, Tue, 5 January 21

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?