AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi in Kerala: ಕೊಚ್ಚಿ ವಾಟರ್ ಮೆಟ್ರೊ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Kochi's water metro: ಮೋದಿ ಇಂದು ತಿರುವನಂತಪುರಂ- ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ತಿರುವನಂತಪುರಂನಲ್ಲಿ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿತ್ತು. ಅವರು 1,500 ಕೋಟಿ ವೆಚ್ಚದ ಡಿಜಿಟಲ್ ಸಯನ್ಸ್ ಪಾರ್ಕ್ ಗೆ ಅಡಿಗಲ್ಲು ಹಾಕಿದ್ದು, ಕೊಚ್ಚಿ ವಾಟರ್ ಮೆಟ್ರೊಗೆ ಚಾಲನೆ ನೀಡಿದ್ದಾರೆ.

Modi in Kerala: ಕೊಚ್ಚಿ ವಾಟರ್ ಮೆಟ್ರೊ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಕೊಚ್ಚಿ ವಾಟರ್ ಮೆಟ್ರೊಗೆ ಚಾಲನೆ ನೀಡಿದ ಪ್ರಧಾನಿ
ರಶ್ಮಿ ಕಲ್ಲಕಟ್ಟ
|

Updated on:Apr 25, 2023 | 2:05 PM

Share

ತಿರುವನಂತಪುರಂ: ಕೇರಳದಲ್ಲಿ (Kerala)ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಸರ್ಕಾರ ಕೇಂದ್ರವು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಒತ್ತು ನೀಡುತ್ತದೆ ಎಂದಿದ್ದಾರೆ. ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಿರ್ವಹಿಸಿದ ಪ್ರಧಾನಿ ಮೋದಿ ಕೇರಳ ಅಭಿವೃದ್ಧಿ ಆದರೆ ದೇಶ ವೇಗವಾಗಿ ಅಭಿವೃದ್ದಿ ಹೊಂದುತ್ತದೆ ಎಂದು ಹೇಳಿದ್ದಾರೆ. ಮೋದಿ ಇಂದು ತಿರುವನಂತಪುರಂ- ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ತಿರುವನಂತಪುರಂನಲ್ಲಿ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿತ್ತು. ಅವರು 1,500 ಕೋಟಿ ವೆಚ್ಚದ ಡಿಜಿಟಲ್ ಸಯನ್ಸ್ ಪಾರ್ಕ್ ಗೆ ಅಡಿಗಲ್ಲು ಹಾಕಿದ್ದು, ಕೊಚ್ಚಿ ವಾಟರ್ ಮೆಟ್ರೊಗೆ (water metro) ಚಾಲನೆ ನೀಡಿದ್ದಾರೆ.

ಕೇರಳವು ಜಾಗೃತ ಮತ್ತು ವಿದ್ಯಾವಂತ ಜನರ ರಾಜ್ಯವಾಗಿದೆ, ಇಲ್ಲಿನ ಜನರ ಕಠಿಣ ಪರಿಶ್ರಮ ಮತ್ತು ನಮ್ರತೆ ಅವರ ಗುರುತಿನ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ತಿರುವನಂತಪುರಂನಲ್ಲಿ ಡಿಜಿಟಲ್ ಸೈನ್ಸ್ ಪಾರ್ಕ್‌ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಮೋದಿ

ಇದನ್ನೂ ಓದಿ: Kerala Vande Bharat Express : ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಚಾಲನೆ

ಸೋಮವಾರ ಸಂಜೆ ಕೊಚ್ಚಿಗೆ ಬಂದಿಳಿದ ಮೋದಿಯವರು ಮೆಗಾ ರೋಡ್ ಶೋ ನಡೆಸಿದ್ದರು.ರಾಜ್ಯದಲ್ಲಿ ಆಡಳಿತಾರೂಢ ಸಿಪಿಐ(ಎಂ) ಹಾಗೂ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್‌ನ ವಿರುದ್ಧ ಟೀಕಾಪ್ರಹಾರ ನಡೆಸಿದ ಮೋದಿ ಈ ಪಕ್ಷಗಳು ಜನರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಯುವಂ 2023ರ ಸಮಾವೇಶದಲ್ಲಿ ಮಾತನಾಡಿದ ಮೋದಿ, ಬಿಜೆಪಿಯ ಕೆಲಸ,ಸರ್ಕಾರದ ಕಾರ್ಯ ವೈಖರಿಯನ್ನು ನೋಡಿ ಈಶಾನ್ಯ ರಾಜ್ಯಗಳು ಮತ್ತು ಗೋವಾ ಬಿಜೆಪಿಯನ್ನು ಒಪ್ಪಿಕೊಂಡಿತು. ಕೇರಳವೂ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ವೀಕರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಯುವಜನತೆಯೊಂದಿಗೆ ಕೆಲಸ ಮಾಡುತ್ತಿದೆ ಮತ್ತು ಅಭಿವೃದ್ಧಿಯನ್ನು ಸಾಕಾರಗೊಳಿಸುತ್ತಿದೆ. ಹಿಂದಿನ ಸರ್ಕಾರಗಳು ಹಗರಣಗಳಿಗೆ ಹೆಸರಾಗಿದ್ದರೆ, ಕಳೆದ ಒಂಬತ್ತು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು. ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಒಂದು ಪಕ್ಷ ರಾಜ್ಯದ ಹಿತಾಸಕ್ತಿಗಿಂತ ತನ್ನ ರಾಜಕೀಯ ಹಿತಾಸಕ್ತಿಯನ್ನು ಉತ್ತೇಜಿಸಲು ಕೆಲಸ ಮಾಡುತ್ತಿದ್ದರೆ, ಇನ್ನೊಂದು ಕುಟುಂಬದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಈ ಎರಡು ರಾಜಕೀಯ ಸಿದ್ಧಾಂತಗಳನ್ನು ಸೋಲಿಸುವ ಸಮಯ ಬಂದಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:45 pm, Tue, 25 April 23

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ