AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ಮೋದಿ ಮಾತುಕತೆ

ಸಿಲ್ಕ್ಯಾರಾ ಸುರಂಗ(Tunnel)ದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತುಕತೆ ನಡೆಸಿದರು. ಒಂದೇ ಕಡೆಯಿದ್ದ ಎಲ್ಲಾ ಕಾರ್ಮಿಕರ ಬಳಿ ಮಾತನಾಡಿ, ಆರೋಗ್ಯ ವಿಚಾರಿಸಿದರು. ನವೆಂಬರ್ 12 ರಂದು ಉತ್ತರ ಕಾಶಿಯ ಸಿಲ್ಕ್ಯಾರಾ ಸುರಂಗದ ಒಂದು ಭಾಗ ಕುಸಿದಿತ್ತು, ಅದರೊಳಗೆ 41 ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಸತತ ಪ್ರಯತ್ನದ ಬಳಿಕ 17 ದಿನಗಳ ನಂತರ ಈ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ಮೋದಿ ಮಾತುಕತೆ
ನರೇಂದ್ರ ಮೋದಿImage Credit source: India TV
ನಯನಾ ರಾಜೀವ್
|

Updated on:Nov 29, 2023 | 9:44 AM

Share

ಸಿಲ್ಕ್ಯಾರಾ ಸುರಂಗ(Tunnel)ದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತುಕತೆ ನಡೆಸಿದರು. ಒಂದೇ ಕಡೆಯಿದ್ದ ಎಲ್ಲಾ ಕಾರ್ಮಿಕರ ಬಳಿ ಮಾತನಾಡಿ, ಆರೋಗ್ಯ ವಿಚಾರಿಸಿದರು. ನವೆಂಬರ್ 12 ರಂದು ಉತ್ತರ ಕಾಶಿಯ ಸಿಲ್ಕ್ಯಾರಾ ಸುರಂಗದ ಒಂದು ಭಾಗ ಕುಸಿದಿತ್ತು, ಅದರೊಳಗೆ 41 ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಸತತ ಪ್ರಯತ್ನದ ಬಳಿಕ 17 ದಿನಗಳ ನಂತರ ಈ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಕಾರ್ಮಿಕರನ್ನು ಸ್ಥಳಾಂತರಿಸಿದ ಕೂಡಲೇ ಪ್ರಧಾನಿ ಮೋದಿ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ, ಉತ್ತರಕಾಶಿಯಲ್ಲಿ ಕಾರ್ಮಿಕ ಸಹೋದರರ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನು ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಹಾಗೂ ತಾಳ್ಮೆ ಎಲ್ಲರಿಗೂ ಸ್ಫೂರ್ತಿ, ನೀವೆಲ್ಲರೂ ದೀರ್ಘಕಾಲ ಆರೋಗ್ಯವಾಗಿರಿ. ದೀರ್ಘಾವಧಿಯ ಕಾಯುವಿಕೆಯ ಬಳಿಕ ನೀವು ನಿಮ್ಮ ಪ್ರೀತಿ ಪಾತ್ರರನ್ನು ಭೇಟಿಯಾಗಿರುವುದು ತುಂಬಾ ತೃಪ್ತಿದಾಯಕ ಸಂಗತಿ ಎಂದು ಬರೆದಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಅವರು 41 ಕಾರ್ಮಿಕರಿಗೆ ಹೂಮಾಲೆಯೊಂದಿಗೆ ಸ್ವಾಗತಿಸಿದರು, ಕೈಕುಲುಕಿದರು ಮತ್ತು ಅವರನ್ನು ಅಪ್ಪಿಕೊಂಡರು, ಆದರೆ ರಕ್ಷಣಾ ತಂಡಗಳು ಮತ್ತು ಅಧಿಕಾರಿಗಳು ಚಪ್ಪಾಳೆ ತಟ್ಟಿದರು.

ಮತ್ತಷ್ಟು ಓದಿ: ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿಯ ರಕ್ಷಣೆ: ಪ್ರಧಾನಿ ಮೋದಿ, ಸಚಿವ ನಿತಿನ್ ಗಡ್ಕರಿ ಅಭಿನಂದನೆ

ಸುರಂಗದಲ್ಲಿ ಸಿಲುಕಿದ್ದವರಿಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ 1 ಲಕ್ಷ ರೂ. ನೆರವು ಘೋಷಿಸಿದ್ದಾರೆ. ಈ ಮಧ್ಯೆ, ಕಾರ್ಮಿಕರ ರಕ್ಷಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹರ್ಷ ವ್ಯಕ್ತಪಡಿಸಿದ್ದು, ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕ ಬಂಧುಗಳು ಸುರಕ್ಷಿತವಾಗಿ ವಾಪಸ್ ಬಂದಿರುವುದು ಸಂತಸದ ಸುದ್ದಿ. ಅವರಿಗೆ ಮತ್ತು ಅವರ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:09 am, Wed, 29 November 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ