AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತದ 7 ಕೊವಿಡ್ ಲಸಿಕೆ ಉತ್ಪಾದಕರ ಜೊತೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತದ ವಯಸ್ಕರ ಜನಸಂಖ್ಯೆಯ ಶೇ. 75ಕ್ಕಿಂತ ಹೆಚ್ಚು ಜನರು ಈಗಾಗಲೇ ಕನಿಷ್ಠ ಒಂದು ಡೋಸ್ ಕೊವಿಡ್ ಲಸಿಕೆಯನ್ನು ಪಡೆದಿದ್ದಾರೆ.

Narendra Modi: ಭಾರತದ 7 ಕೊವಿಡ್ ಲಸಿಕೆ ಉತ್ಪಾದಕರ ಜೊತೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ
ಭಾರತದ ಕೊವಿಡ್ ಲಸಿಕೆ ಉತ್ಪಾದಕರ ಜೊತೆ ಸಭೆ ನಡೆಸಿದ ಮೋದಿ
TV9 Web
| Edited By: |

Updated on:Oct 23, 2021 | 5:51 PM

Share

ನವದೆಹಲಿ: ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್ ಲಸಿಕೆಗಳನ್ನು ನೀಡುವ ಮೂಲಕ ಹೊಸ ದಾಖಲೆ ಬರೆದ ಬೆನ್ನಲ್ಲೇ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಳು ಭಾರತೀಯ ಕೊವಿಡ್-19 ಲಸಿಕೆ ತಯಾರಕರನ್ನು ಭೇಟಿಯಾಗಿದ್ದಾರೆ. ಭಾರತೀಯ ಕೊರೊನಾ ಲಸಿಕೆ ಉತ್ಪಾದಕರೊಂದಿಗೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರೆಲ್ಲರ ಸಹಕಾರದಿಂದ ದೇಶದಲ್ಲಿ 100 ಕೋಟಿ ಡೋಸ್ ಕೊವಿಡ್ ಲಸಿಕೆಯ ಮೈಲುಗಲ್ಲನ್ನು ಸಾಧಿಸಿದ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಭಾರತ ಮೂಲದ ಸೀರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್, ಡಾ. ರೆಡ್ಡಿ ಲ್ಯಾಬೋರೇಟರೀಸ್, ಜೈಡಸ್ ಕ್ಯಾಡಿಲಾ, ಬಯೋಲಾಜಿಕಲ್ ಇ, ಗೆನ್ನೋವಾ ಬಯೋಫಾರ್ಮಾ ಮತ್ತು ಪ್ಯಾನೇಸಿಯ ಬಯೋಟೆಕ್ ಉತ್ಪಾದನಾ ಕಂಪನಿಗಳ ಪ್ರತಿನಿಧಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಉಪಸ್ಥಿತರಿದ್ದರು.

ಭಾರತದಲ್ಲಿ ಇನ್ನು ಉಳಿದ ಅರ್ಹ ಮಂದಿಗೆ ಸಾಧ್ಯವಾದಷ್ಟೂ ಬೇಗ ಲಸಿಕೆ ನೀಡುವ ಮಾರ್ಗಗಳ ಬಗ್ಗೆ ಹಾಗೂ ‘ಎಲ್ಲರಿಗೂ ಲಸಿಕೆ’ ಎಂಬ ಅಭಿಯಾನದ ಅಡಿಯಲ್ಲಿ ಇತರ ದೇಶಗಳಿಗೂ ಸಹಾಯ ಮಾಡುವ ಬಗ್ಗೆ ಮೋದಿ ಈ ಸಭೆಯಲ್ಲಿ ಚರ್ಚಿಸಿದ್ದಾರೆ.

ಭಾರತದ ವಯಸ್ಕರ ಜನಸಂಖ್ಯೆಯ ಶೇ. 75ಕ್ಕಿಂತ ಹೆಚ್ಚು ಜನರು ಈಗಾಗಲೇ ಕನಿಷ್ಠ ಒಂದು ಡೋಸ್ ಕೊವಿಡ್ ಲಸಿಕೆಯನ್ನು ಪಡೆದಿದ್ದಾರೆ. ಆರೋಗ್ಯ ಸಚಿವಾಲಯದ ಅಧಿಕಾರಿಗಳ ಪ್ರಕಾರ, ದೇಶದ ಸುಮಾರು 93 ಕೋಟಿ ವಯಸ್ಕರಲ್ಲಿ ಶೇ. ರಷ್ಟು ಜನರು ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: Police Commemoration Day 2021 ಕರ್ತವ್ಯದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದ ನರೇಂದ್ರ ಮೋದಿ

‘ಚುನಾವಣೆಯಲ್ಲಿ ಗೆದ್ದರೆ ಕೃಷಿ ಸಾಲ ಮನ್ನಾ, ಕೊವಿಡ್​ 19 ಸಂತ್ರಸ್ತರಿಗೆ 25 ಸಾವಿರ ರೂ.ಪರಿಹಾರ’-ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ

Published On - 5:47 pm, Sat, 23 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್