AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರ ದಿನಾಚರಣೆ 2023: ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ

ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ವಿಜೇತರ ಜತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಸಂವಾದ ನಡೆಸಿದರು. ನವದೆಹಲಿಯ 7 ಲೋಕ್ ಕಲ್ಯಾಣ್ ಮಾರ್ಗ್‌ದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದರು ಮತ್ತು ಅವರೊಂದಿಗೆ ಅದ್ಭುತ ಕ್ಷಣಗಳನ್ನು ಕಳೆದರು. ಸಭೆಯಲ್ಲಿ ಶಿಕ್ಷಕರೊಬ್ಬರು ಪ್ರಧಾನಿ ಮೋದಿ ಅವರ ಬಳಿ ಮಾತನಾಡಿ, ದೇಶದ ಎಲ್ಲಾ ಕೆಲಸಗಳನ್ನು ನೀವು ತುಂಬಾ ಸುಲಭವಾಗಿ ಮಾಡುತ್ತಿದ್ದೀರಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಭಾರತದ ಹೆಸರು ತುಂಬಾ ಎತ್ತರದಲ್ಲಿದೆ.

ಶಿಕ್ಷಕರ ದಿನಾಚರಣೆ 2023: ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Sep 05, 2023 | 11:16 AM

Share

ಶಿಕ್ಷಕರ ದಿನಾಚರಣೆ(Teacher’s Day) ಅಂಗವಾಗಿ ನೀಡುವ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ವಿಜೇತರ ಜತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಸಂವಾದ ನಡೆಸಿದರು. ನವದೆಹಲಿಯ 7 ಲೋಕ್ ಕಲ್ಯಾಣ್ ಮಾರ್ಗ್‌ದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದರು ಮತ್ತು ಅವರೊಂದಿಗೆ ಅದ್ಭುತ ಕ್ಷಣಗಳನ್ನು ಕಳೆದರು. ಸಭೆಯಲ್ಲಿ ಶಿಕ್ಷಕರೊಬ್ಬರು ಪ್ರಧಾನಿ ಮೋದಿ ಅವರ ಬಳಿ ಮಾತನಾಡಿ, ದೇಶದ ಎಲ್ಲಾ ಕೆಲಸಗಳನ್ನು ನೀವು ತುಂಬಾ ಸುಲಭವಾಗಿ ಮಾಡುತ್ತಿದ್ದೀರಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಭಾರತದ ಹೆಸರು ತುಂಬಾ ಎತ್ತರದಲ್ಲಿದೆ.

ನೀವು ಪ್ರತಿದಿನ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದೀರಿ, ಆದರೂ ನೀವು ಇನ್ನೂ ಪ್ರಕಾಶಮಾನವಾದ ಮತ್ತು ಹರ್ಷಚಿತ್ತದಿಂದ ಮುಖವನ್ನು ಹೊಂದಿದ್ದೀರಿ. ನೀವು ಈಗ ನಮಗೆ ಮನರಂಜನೆ ನೀಡುತ್ತಿರುವ ರೀತಿ, ನಾವು ಈಗ ನಿಮ್ಮನ್ನು ನೋಡುತ್ತಿರುವಂತೆಯೇ ನಮ್ಮ ತರಗತಿಯ ಮಕ್ಕಳೂ ನಮ್ಮನ್ನು ನೋಡಬೇಕು ಎಂದು ನಮಗೆ ಅನಿಸುತ್ತದೆ ಎಂದರು.

ಶಿಕ್ಷಕರ ಈ ಮಾತಿಗೆ ಅಲ್ಲಿದ್ದ ಜನರೆಲ್ಲರೂ ಮತ್ತು ಪ್ರಧಾನಿ ಮೋದಿ ನಕ್ಕರು ಮತ್ತು ಚಪ್ಪಾಳೆಗಳು ಪ್ರತಿಧ್ವನಿಸಲು ಪ್ರಾರಂಭಿಸಿದವು. ಈ ಕುರಿತು ಪ್ರಧಾನಿ ಮೋದಿ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ಪಡೆದ ನಮ್ಮ ರಾಷ್ಟ್ರದ ಆದರ್ಶ ಶಿಕ್ಷಕರನ್ನು ಭೇಟಿ ಮಾಡಿದೆ. ಯುವ ಮನಸ್ಸುಗಳನ್ನು ರೂಪಿಸುವಲ್ಲಿ ಅವರ ಸಮರ್ಪಣೆ ಮತ್ತು ಶಿಕ್ಷಣದಲ್ಲಿ ಉತ್ಕೃಷ್ಟತೆಯ ಕಡೆಗೆ ಅವರ ಅಚಲ ಬದ್ಧತೆ ಬಹಳ ಸ್ಪೂರ್ತಿದಾಯಕವಾಗಿದೆ. ತಮ್ಮ ತರಗತಿಗಳಲ್ಲಿ, ಅವರು ಭಾರತದ ಯುವಕರಿಗೆ ಉಜ್ವಲ ಭವಿಷ್ಯವನ್ನು ಬರೆಯುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ತಮ್ಮ ಪ್ರದೇಶದ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಕಲಿಯಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುವಂತೆ ಶಿಕ್ಷಕರನ್ನು ಒತ್ತಾಯಿಸಿದರು. ದೇಶದಲ್ಲಿನ ವೈವಿಧ್ಯತೆಯ ಶಕ್ತಿಯನ್ನು ಎತ್ತಿ ಹಿಡಿದ ಅವರು, ಶಿಕ್ಷಕರು ತಮ್ಮ ಶಾಲೆಗಳಲ್ಲಿ ದೇಶದ ವಿವಿಧ ಭಾಗಗಳ ಸಂಸ್ಕೃತಿ ಮತ್ತು ವೈವಿಧ್ಯತೆಯನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.

ಮತ್ತಷ್ಟು ಓದಿ: Teachers Day 2023: ಶಿಕ್ಷಕರ ದಿನದಂದು ನಿಮ್ಮ ಗುರುಗಳಿಗೆ ಈ ರೀತಿ ಶುಭಾಶಯಗಳನ್ನು ತಿಳಿಸಿ

ಚಂದ್ರಯಾನ-3ರ ಇತ್ತೀಚಿನ ಯಶಸ್ಸಿನ ಕುರಿತು ಚರ್ಚಿಸಿದ ಪ್ರಧಾನಮಂತ್ರಿಯವರು, 21ನೇ ಶತಮಾನವು ತಂತ್ರಜ್ಞಾನ ಆಧಾರಿತ ಶತಮಾನವಾಗಿರುವುದರಿಂದ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಕುತೂಹಲವನ್ನು ಉತ್ತೇಜಿಸುವ ಮಹತ್ವವನ್ನು ಒತ್ತಿ ಹೇಳಿದರು. ಯುವಕರನ್ನು ಕೌಶಲ ಹೆಚ್ಚಿಸಿ ಭವಿಷ್ಯ ಸಿದ್ಧಗೊಳಿಸುವ ಮಹತ್ವದ ಬಗ್ಗೆಯೂ ಮಾತನಾಡಿದರು.

ತಮ್ಮ ವೃತ್ತಿಜೀವನದುದ್ದಕ್ಕೂ ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಕಲಿಯಲು ಮತ್ತು ಉನ್ನತೀಕರಿಸಲು ಶಿಕ್ಷಕರಿಗೆ ಪ್ರಧಾನಿ ಸಲಹೆ ನೀಡಿದರು. ಇಂದು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ವಿಜೇತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪಶಸ್ತಿ ಪ್ರದಾನ ಮಾಡಲಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಶಿಕ್ಷಣ ಸಚಿವಾಲಯವು ಜಂಟಿಯಾಗಿ ಆಯೋಜಿಸಿರುವ ಸಮಾರಂಭದಲ್ಲಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತರಲ್ಲಿ ಕರ್ನಾಟಕದ 6 ಮಂದಿ ಸೇರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!