AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Interview: ಪಶ್ಚಿಮ ಬಂಗಾಳ ಬಿಜೆಪಿಗೆ ಮಾತ್ರವಲ್ಲ ದೇಶಕ್ಕೇ ಸವಾಲಾಗಿದೆ; ಮೋದಿ ಟೀಕೆ

ಟಿವಿ9 ಸಮೂಹದ 6 ಸಂಪಾದಕರ ಜೊತೆ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ರಾಜಕಾರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅವುಗಳಲ್ಲಿ ಕೆಲವು ಮುಖ್ಯಾಂಶಗಳು ಇಲ್ಲಿವೆ.

ಸುಷ್ಮಾ ಚಕ್ರೆ
| Edited By: |

Updated on:May 02, 2024 | 10:31 PM

Share

ನವದೆಹಲಿ: ಟಿವಿ9 ನೆಟ್​ವರ್ಕ್ (TV9 Network) ಸಂಪಾದಕರು ನಡೆಸಿರುವ ದುಂಡು ಮೇಜಿನ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi Interview) ಪಶ್ಚಿಮ ಬಂಗಾಳದ ರಾಜಕಾರಣದ ವಿರುದ್ಧ ಕಿಡಿ ಕಾರಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಜನ ಬಿಜೆಪಿಯನ್ನು ಮೆಚ್ಚುತ್ತಿದ್ದಾರೆ. ಬಂಗಾಳ ಬಿಜೆಪಿಯನ್ನು ಮನಃಪೂರ್ವಕವಾಗಿ ಒಪ್ಪಿಕೊಂಡಿದೆ. ಚುನಾವಣಾ ಸಮಯದಲ್ಲಿ ಅಮಾನವೀಯ ಘಟನೆಗಳು ಬಂಗಾಳ (West Bengal) ಅಥವಾ ಕೇರಳದಲ್ಲಿ (Kerala) ನಡೆಯುತ್ತವೆ. ಅಲ್ಲಿ ನಡೆಯುವ ರೀತಿಯ ಘಟನೆಗಳು ಬೇರೆಲ್ಲಿಯೂ ನಡೆಯುವುದಿಲ್ಲ. ಪಶ್ಚಿಮ ಬಂಗಾಳ ಬಿಜೆಪಿಗೆ ಮಾತ್ರವಲ್ಲ ಇಡೀ ದೇಶಕ್ಕೆ ಸವಾಲಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭದ್ರತೆಯೇ ದೊಡ್ಡ ಸಮಸ್ಯೆಯಾಗಿದೆ. ಸಂದೇಶಖಾಲಿಯ ಮಹಿಳೆಯರ ಮಾತು ಕೇಳಿ ನನಗೆ ಕಣ್ಣಲ್ಲಿ ನೀರು ಬಂದಿತು. ಯಾವ ಸಂದರ್ಭದಲ್ಲೂ ಸರ್ಕಾರ ಅವರ ಮಾತು ಕೇಳೋಕೆ ತಯಾರಿಲ್ಲ. ಬಂಗಾಳದಲ್ಲಿ ಮಹಿಳೆಯರ ದಬ್ಬಾಳಿಕೆ ದೊಡ್ಡ ವಿಷಯವಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi Interview: 25 ವರ್ಷದ ರಾಜಕೀಯದಲ್ಲಿ ನನಗೆ ಒಂದೂ ಕಪ್ಪು ಚುಕ್ಕಿ ಅಂಟಿಲ್ಲ; ಪ್ರಧಾನಿ ಮೋದಿ

ಭಾರತವನ್ನು ಅಭಿವೃದ್ಧಿ ಮಾಡಲು ಕೆಲವು ರಾಜ್ಯಗಳು ಸಾಕಷ್ಟು ಸಾಮರ್ಥ್ಯವನ್ನು ಹೊಂದಿವೆ. ಪಶ್ಚಿಮ ಬಂಗಾಳವು ಅವುಗಳಲ್ಲಿ ಪ್ರಮುಖವಾಗಿದೆ. ನಾವು ಭಾರತದ ಇತಿಹಾಸವನ್ನು ನೋಡಿದರೆ, ಸಾಮಾಜಿಕವಾಗಿ ಸೈದ್ಧಾಂತಿಕ ಕ್ರಾಂತಿ, ಸ್ವಾತಂತ್ರ್ಯ, ಜಾಗತಿಕ ಅಸ್ಮಿತೆಗಾಗಿ ಪಶ್ಚಿಮ ಬಂಗಾಳದಲ್ಲಿ ಹಲವು ಕ್ರಾಂತಿ ನಡೆದಿದೆ. ಟಿಎಂಸಿ ಜನರು ಕಳೆದ 50 ವರ್ಷಗಳಲ್ಲಿ ಈ ಸಂಪ್ರದಾಯವನ್ನು ನಾಶಪಡಿಸಿದರು. ದೇಶ ಮುನ್ನಡೆಯಬೇಕಾದರೆ ಬಂಗಾಳದ ಪುನರುತ್ಥಾನ ಅಗತ್ಯ ಎಂದು ಮೋದಿ ಭವಿಷ್ಯ ನುಡಿದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ಕಿಡಿ ಕಾರಿದ ಮೋದಿ, ಇತ್ತೀಚಿನ ದಿನಗಳಲ್ಲಿ, ಅನೇಕ ಯುವ ನಾಯಕರು ಕಾಂಗ್ರೆಸ್ ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷವು ಮಾವೋವಾದಿಗಳ ವಶವಾಗಿದೆ. ಈಗ ಅವರು ಎಲ್ಲದರಲ್ಲೂ ಅದೇ ಸಿದ್ಧಾಂತವನ್ನು ತರಲು ಬಯಸುತ್ತಿದ್ದಾರೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 pm, Thu, 2 May 24

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್