AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Interview: ಪಶ್ಚಿಮ ಬಂಗಾಳ ಬಿಜೆಪಿಗೆ ಮಾತ್ರವಲ್ಲ ದೇಶಕ್ಕೇ ಸವಾಲಾಗಿದೆ; ಮೋದಿ ಟೀಕೆ

ಟಿವಿ9 ಸಮೂಹದ 6 ಸಂಪಾದಕರ ಜೊತೆ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ರಾಜಕಾರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅವುಗಳಲ್ಲಿ ಕೆಲವು ಮುಖ್ಯಾಂಶಗಳು ಇಲ್ಲಿವೆ.

ಸುಷ್ಮಾ ಚಕ್ರೆ
| Updated By: ರಮೇಶ್ ಬಿ. ಜವಳಗೇರಾ|

Updated on:May 02, 2024 | 10:31 PM

Share

ನವದೆಹಲಿ: ಟಿವಿ9 ನೆಟ್​ವರ್ಕ್ (TV9 Network) ಸಂಪಾದಕರು ನಡೆಸಿರುವ ದುಂಡು ಮೇಜಿನ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi Interview) ಪಶ್ಚಿಮ ಬಂಗಾಳದ ರಾಜಕಾರಣದ ವಿರುದ್ಧ ಕಿಡಿ ಕಾರಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಜನ ಬಿಜೆಪಿಯನ್ನು ಮೆಚ್ಚುತ್ತಿದ್ದಾರೆ. ಬಂಗಾಳ ಬಿಜೆಪಿಯನ್ನು ಮನಃಪೂರ್ವಕವಾಗಿ ಒಪ್ಪಿಕೊಂಡಿದೆ. ಚುನಾವಣಾ ಸಮಯದಲ್ಲಿ ಅಮಾನವೀಯ ಘಟನೆಗಳು ಬಂಗಾಳ (West Bengal) ಅಥವಾ ಕೇರಳದಲ್ಲಿ (Kerala) ನಡೆಯುತ್ತವೆ. ಅಲ್ಲಿ ನಡೆಯುವ ರೀತಿಯ ಘಟನೆಗಳು ಬೇರೆಲ್ಲಿಯೂ ನಡೆಯುವುದಿಲ್ಲ. ಪಶ್ಚಿಮ ಬಂಗಾಳ ಬಿಜೆಪಿಗೆ ಮಾತ್ರವಲ್ಲ ಇಡೀ ದೇಶಕ್ಕೆ ಸವಾಲಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭದ್ರತೆಯೇ ದೊಡ್ಡ ಸಮಸ್ಯೆಯಾಗಿದೆ. ಸಂದೇಶಖಾಲಿಯ ಮಹಿಳೆಯರ ಮಾತು ಕೇಳಿ ನನಗೆ ಕಣ್ಣಲ್ಲಿ ನೀರು ಬಂದಿತು. ಯಾವ ಸಂದರ್ಭದಲ್ಲೂ ಸರ್ಕಾರ ಅವರ ಮಾತು ಕೇಳೋಕೆ ತಯಾರಿಲ್ಲ. ಬಂಗಾಳದಲ್ಲಿ ಮಹಿಳೆಯರ ದಬ್ಬಾಳಿಕೆ ದೊಡ್ಡ ವಿಷಯವಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi Interview: 25 ವರ್ಷದ ರಾಜಕೀಯದಲ್ಲಿ ನನಗೆ ಒಂದೂ ಕಪ್ಪು ಚುಕ್ಕಿ ಅಂಟಿಲ್ಲ; ಪ್ರಧಾನಿ ಮೋದಿ

ಭಾರತವನ್ನು ಅಭಿವೃದ್ಧಿ ಮಾಡಲು ಕೆಲವು ರಾಜ್ಯಗಳು ಸಾಕಷ್ಟು ಸಾಮರ್ಥ್ಯವನ್ನು ಹೊಂದಿವೆ. ಪಶ್ಚಿಮ ಬಂಗಾಳವು ಅವುಗಳಲ್ಲಿ ಪ್ರಮುಖವಾಗಿದೆ. ನಾವು ಭಾರತದ ಇತಿಹಾಸವನ್ನು ನೋಡಿದರೆ, ಸಾಮಾಜಿಕವಾಗಿ ಸೈದ್ಧಾಂತಿಕ ಕ್ರಾಂತಿ, ಸ್ವಾತಂತ್ರ್ಯ, ಜಾಗತಿಕ ಅಸ್ಮಿತೆಗಾಗಿ ಪಶ್ಚಿಮ ಬಂಗಾಳದಲ್ಲಿ ಹಲವು ಕ್ರಾಂತಿ ನಡೆದಿದೆ. ಟಿಎಂಸಿ ಜನರು ಕಳೆದ 50 ವರ್ಷಗಳಲ್ಲಿ ಈ ಸಂಪ್ರದಾಯವನ್ನು ನಾಶಪಡಿಸಿದರು. ದೇಶ ಮುನ್ನಡೆಯಬೇಕಾದರೆ ಬಂಗಾಳದ ಪುನರುತ್ಥಾನ ಅಗತ್ಯ ಎಂದು ಮೋದಿ ಭವಿಷ್ಯ ನುಡಿದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ಕಿಡಿ ಕಾರಿದ ಮೋದಿ, ಇತ್ತೀಚಿನ ದಿನಗಳಲ್ಲಿ, ಅನೇಕ ಯುವ ನಾಯಕರು ಕಾಂಗ್ರೆಸ್ ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷವು ಮಾವೋವಾದಿಗಳ ವಶವಾಗಿದೆ. ಈಗ ಅವರು ಎಲ್ಲದರಲ್ಲೂ ಅದೇ ಸಿದ್ಧಾಂತವನ್ನು ತರಲು ಬಯಸುತ್ತಿದ್ದಾರೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 pm, Thu, 2 May 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ