AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಭಾರತದ ಡೆಂಗ್ ಕ್ಸಿಯಾಪಿಂಗ್; ಭಾರತದ ಪ್ರಧಾನಿ ಬಗ್ಗೆ ಹೂಡಿಕೆ ಗುರು ರೇ ಡಾಲಿಯೊ ಮೆಚ್ಚುಗೆ

ಹೂಡಿಕೆ ಗುರು ರೇ ಡಾಲಿಯೊ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೀನಾದ ಮಾಜಿ ಅಧ್ಯಕ್ಷ ಡೆಂಗ್ ಕ್ಸಿಯಾಪಿಂಗ್ ಜೊತೆ ಹೋಲಿಸಿದ್ದಾರೆ. 40 ವರ್ಷಗಳ ಹಿಂದೆ ಚೀನಾ ಇದ್ದ ಜಾಗದಲ್ಲಿ ಇದೀಗ ಭಾರತ ನಿಂತಿದೆ ಎಂದು ಹೇಳಿದ್ದಾರೆ. ಭಾರತ ಜಾಗತಿಕ ಆರ್ಥಿಕ ಪವರ್​ಹೌಸ್ ಆಗುವ ಎಲ್ಲ ಸಾಮರ್ಥ್ಯವನ್ನೂ ಹೊಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮೋದಿ ಭಾರತದ ಡೆಂಗ್ ಕ್ಸಿಯಾಪಿಂಗ್; ಭಾರತದ ಪ್ರಧಾನಿ ಬಗ್ಗೆ ಹೂಡಿಕೆ ಗುರು ರೇ ಡಾಲಿಯೊ ಮೆಚ್ಚುಗೆ
ರೇ ಡಾಲಿಯೊ
Follow us
ಸುಷ್ಮಾ ಚಕ್ರೆ
|

Updated on:Oct 01, 2024 | 10:17 PM

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ 3ನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ವಿವಿಧ ದೇಶಗಳಿಗೆ ಅಧಿಕೃತ ಭೇಟಿ ನೀಡುವ ಮೂಲಕ, ಜಾಗತಿಕ ನಾಯಕರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಂಡಿರುವ ಪ್ರಧಾನಿ ಮೋದಿಯತ್ತ ವಿಶ್ವದ ನಾಯಕರು ತಿರುಗಿ ನೋಡುವಂತಾಗಿದೆ. ಇದೀಗ ಹೂಡಿಕೆ ಗುರು, ಬ್ರಿಡ್ಜ್ ವಾಟರ್ ಅಸೋಸಿಯೇಟ್ಸ್ ಸಂಸ್ಥಾಪಕ ರೇ ಡಾಲಿಯೊ ಕೂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ್ದಾರೆ.

40 ವರ್ಷದ ಹಿಂದೆ ಚೀನಾಕ್ಕೆ ಭೇಟಿ ನೀಡಿದಾಗ ಅಧ್ಯಕ್ಷ ಡೆಂಗ್ ಕ್ಸಿಯೋಪಿಂಗ್ ಅವರಂತೆಯೇ ಈಗ ಪ್ರಧಾನಿ ನರೇಂದ್ರ ಮೋದಿ ಅವರಿದ್ದಾರೆ ಎಂದು ರೇ ಡಾಲಿಯೋ ನೆನಪಿಸಿಕೊಂಡಿದ್ದಾರೆ. ಬ್ರಿಡ್ಜ್ ವಾಟರ್ ಅಸೋಸಿಯೇಟ್ಸ್ ಸಂಸ್ಥಾಪಕ ರೇ ಡಾಲಿಯೊ ಈ ಬಗ್ಗೆ ಮಾತನಾಡಿದ್ದು, ಚೀನಾಕ್ಕೆ ಕ್ಸಿಯೋಪಿಂಗ್ ಹೇಗೋ ಅದೇ ರೀತಿ ಭಾರತಕ್ಕೆ ನರೇಂದ್ರ ಮೋದಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತೀಯತೆ ಮೂಲಕ ದೇಶಭಕ್ತಿಯನ್ನು ಹತ್ತಿಕ್ಕಲು ಕಾಂಗ್ರೆಸ್ ಪ್ರಯತ್ನ; ಹರಿಯಾಣ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ

ಚೀನಾ ಅಧ್ಯಕ್ಷ ಡೆಂಗ್ ಕ್ಸಿಯೋಪಿಂಗ್ ಅವರು 40 ವರ್ಷಗಳ ಹಿಂದೆ ಚೀನಾಕ್ಕಾಗಿ ಏನು ಮಾಡಿದ್ದಾರೋ ಅದನ್ನು ಭಾರತಕ್ಕೆ ಮೋದಿ ಈಗ ಮಾಡುತ್ತಿದ್ದಾರೆ. ಭಾರತವು ಬೆಳವಣಿಗೆಗೆ ಸಿದ್ಧವಾಗಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಚೀನಾ ಮತ್ತು ಅಮೆರಿಕದ ನಡುವೆ ಭಾರತವು ವಿಶಿಷ್ಟ ಸ್ಥಾನದಲ್ಲಿದೆ. ಭಾರತದ ತಟಸ್ಥತೆಯು ಅದನ್ನು ಸೂಕ್ತ ಸ್ಥಾನದಲ್ಲಿ ಇರಿಸುತ್ತದೆ. ದೇಶೀಯ ಮಟ್ಟದಲ್ಲಿ ಶಿಕ್ಷಣ ಮತ್ತು ಉತ್ಪಾದಕತೆಯನ್ನು ಸುಧಾರಿಸಲು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ತನ್ನ ಬೌದ್ಧಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಭಾರತವನ್ನು ಕೇಂದ್ರೀಕರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಮುಂದಿನ ದಶಕದಲ್ಲಿ ಭಾರತವು ಅತ್ಯಧಿಕ ನಿರೀಕ್ಷಿತ ಬೆಳವಣಿಗೆ ದರವನ್ನು ಹೊಂದಲಿದೆ. ಆದರೂ ದೇಶದಲ್ಲಿ ಗಮನಾರ್ಹ ಅಸಮಾನತೆ ಮುಂದುವರಿದಿದೆ. ಚೀನಾದ ಉತ್ಪಾದನೆಯೊಂದಿಗೆ ಸ್ಪರ್ಧಿಸಲು ಪ್ರಯತ್ನಿಸುವುದು ಮೂರ್ಖತನವಾಗುತ್ತದೆ. ಹೀಗಾಗಿ, ಭಾರತದ ಪ್ರಮುಖ ಗಮನವು ಆಂತರಿಕವಾಗಿ ದೇಶೀಯ ಶಿಕ್ಷಣ ಮತ್ತು ಉತ್ಪಾದಕತೆಯನ್ನು ಸುಧಾರಿಸುವತ್ತ ಇರಬೇಕು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Tue, 1 October 24

ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ