AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಭಾರತದ ಡೆಂಗ್ ಕ್ಸಿಯಾಪಿಂಗ್; ಭಾರತದ ಪ್ರಧಾನಿ ಬಗ್ಗೆ ಹೂಡಿಕೆ ಗುರು ರೇ ಡಾಲಿಯೊ ಮೆಚ್ಚುಗೆ

ಹೂಡಿಕೆ ಗುರು ರೇ ಡಾಲಿಯೊ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೀನಾದ ಮಾಜಿ ಅಧ್ಯಕ್ಷ ಡೆಂಗ್ ಕ್ಸಿಯಾಪಿಂಗ್ ಜೊತೆ ಹೋಲಿಸಿದ್ದಾರೆ. 40 ವರ್ಷಗಳ ಹಿಂದೆ ಚೀನಾ ಇದ್ದ ಜಾಗದಲ್ಲಿ ಇದೀಗ ಭಾರತ ನಿಂತಿದೆ ಎಂದು ಹೇಳಿದ್ದಾರೆ. ಭಾರತ ಜಾಗತಿಕ ಆರ್ಥಿಕ ಪವರ್​ಹೌಸ್ ಆಗುವ ಎಲ್ಲ ಸಾಮರ್ಥ್ಯವನ್ನೂ ಹೊಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮೋದಿ ಭಾರತದ ಡೆಂಗ್ ಕ್ಸಿಯಾಪಿಂಗ್; ಭಾರತದ ಪ್ರಧಾನಿ ಬಗ್ಗೆ ಹೂಡಿಕೆ ಗುರು ರೇ ಡಾಲಿಯೊ ಮೆಚ್ಚುಗೆ
ರೇ ಡಾಲಿಯೊ
ಸುಷ್ಮಾ ಚಕ್ರೆ
|

Updated on:Oct 01, 2024 | 10:17 PM

Share

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ 3ನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ವಿವಿಧ ದೇಶಗಳಿಗೆ ಅಧಿಕೃತ ಭೇಟಿ ನೀಡುವ ಮೂಲಕ, ಜಾಗತಿಕ ನಾಯಕರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಂಡಿರುವ ಪ್ರಧಾನಿ ಮೋದಿಯತ್ತ ವಿಶ್ವದ ನಾಯಕರು ತಿರುಗಿ ನೋಡುವಂತಾಗಿದೆ. ಇದೀಗ ಹೂಡಿಕೆ ಗುರು, ಬ್ರಿಡ್ಜ್ ವಾಟರ್ ಅಸೋಸಿಯೇಟ್ಸ್ ಸಂಸ್ಥಾಪಕ ರೇ ಡಾಲಿಯೊ ಕೂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ್ದಾರೆ.

40 ವರ್ಷದ ಹಿಂದೆ ಚೀನಾಕ್ಕೆ ಭೇಟಿ ನೀಡಿದಾಗ ಅಧ್ಯಕ್ಷ ಡೆಂಗ್ ಕ್ಸಿಯೋಪಿಂಗ್ ಅವರಂತೆಯೇ ಈಗ ಪ್ರಧಾನಿ ನರೇಂದ್ರ ಮೋದಿ ಅವರಿದ್ದಾರೆ ಎಂದು ರೇ ಡಾಲಿಯೋ ನೆನಪಿಸಿಕೊಂಡಿದ್ದಾರೆ. ಬ್ರಿಡ್ಜ್ ವಾಟರ್ ಅಸೋಸಿಯೇಟ್ಸ್ ಸಂಸ್ಥಾಪಕ ರೇ ಡಾಲಿಯೊ ಈ ಬಗ್ಗೆ ಮಾತನಾಡಿದ್ದು, ಚೀನಾಕ್ಕೆ ಕ್ಸಿಯೋಪಿಂಗ್ ಹೇಗೋ ಅದೇ ರೀತಿ ಭಾರತಕ್ಕೆ ನರೇಂದ್ರ ಮೋದಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತೀಯತೆ ಮೂಲಕ ದೇಶಭಕ್ತಿಯನ್ನು ಹತ್ತಿಕ್ಕಲು ಕಾಂಗ್ರೆಸ್ ಪ್ರಯತ್ನ; ಹರಿಯಾಣ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ

ಚೀನಾ ಅಧ್ಯಕ್ಷ ಡೆಂಗ್ ಕ್ಸಿಯೋಪಿಂಗ್ ಅವರು 40 ವರ್ಷಗಳ ಹಿಂದೆ ಚೀನಾಕ್ಕಾಗಿ ಏನು ಮಾಡಿದ್ದಾರೋ ಅದನ್ನು ಭಾರತಕ್ಕೆ ಮೋದಿ ಈಗ ಮಾಡುತ್ತಿದ್ದಾರೆ. ಭಾರತವು ಬೆಳವಣಿಗೆಗೆ ಸಿದ್ಧವಾಗಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಚೀನಾ ಮತ್ತು ಅಮೆರಿಕದ ನಡುವೆ ಭಾರತವು ವಿಶಿಷ್ಟ ಸ್ಥಾನದಲ್ಲಿದೆ. ಭಾರತದ ತಟಸ್ಥತೆಯು ಅದನ್ನು ಸೂಕ್ತ ಸ್ಥಾನದಲ್ಲಿ ಇರಿಸುತ್ತದೆ. ದೇಶೀಯ ಮಟ್ಟದಲ್ಲಿ ಶಿಕ್ಷಣ ಮತ್ತು ಉತ್ಪಾದಕತೆಯನ್ನು ಸುಧಾರಿಸಲು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ತನ್ನ ಬೌದ್ಧಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಭಾರತವನ್ನು ಕೇಂದ್ರೀಕರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಮುಂದಿನ ದಶಕದಲ್ಲಿ ಭಾರತವು ಅತ್ಯಧಿಕ ನಿರೀಕ್ಷಿತ ಬೆಳವಣಿಗೆ ದರವನ್ನು ಹೊಂದಲಿದೆ. ಆದರೂ ದೇಶದಲ್ಲಿ ಗಮನಾರ್ಹ ಅಸಮಾನತೆ ಮುಂದುವರಿದಿದೆ. ಚೀನಾದ ಉತ್ಪಾದನೆಯೊಂದಿಗೆ ಸ್ಪರ್ಧಿಸಲು ಪ್ರಯತ್ನಿಸುವುದು ಮೂರ್ಖತನವಾಗುತ್ತದೆ. ಹೀಗಾಗಿ, ಭಾರತದ ಪ್ರಮುಖ ಗಮನವು ಆಂತರಿಕವಾಗಿ ದೇಶೀಯ ಶಿಕ್ಷಣ ಮತ್ತು ಉತ್ಪಾದಕತೆಯನ್ನು ಸುಧಾರಿಸುವತ್ತ ಇರಬೇಕು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Tue, 1 October 24

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?