AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇಮ್ಸ್ ಬಾಂಡ್ 007 ಮೀಮ್ ಮೂಲಕ ಮೋದಿ ವಿರುದ್ಧ ತೃಣಮೂಲ ಕಾಂಗ್ರೆಸ್ ವಾಗ್ದಾಳಿ

PM Narendra Modi "They call me 007" ಎಂದು ಶೀರ್ಷಿಕೆಯಲ್ಲಿ ಶೇರ್ ಆಗಿರುವ ಮೀಮ್ ನಲ್ಲಿ  "0 ಅಭಿವೃದ್ಧಿ, 0 ಆರ್ಥಿಕ ಬೆಳವಣಿಗೆ, 7 ವರ್ಷಗಳ ಆರ್ಥಿಕ ದುರಾಡಳಿತ" ಎಂದು ಬರೆಯಲಾಗಿದೆ.

ಜೇಮ್ಸ್ ಬಾಂಡ್ 007 ಮೀಮ್ ಮೂಲಕ ಮೋದಿ ವಿರುದ್ಧ ತೃಣಮೂಲ ಕಾಂಗ್ರೆಸ್ ವಾಗ್ದಾಳಿ
ಟಿಎಂಸಿ ಶೇರ್ ಮಾಡಿರುವ ಮೀಮ್
TV9 Web
| Edited By: |

Updated on: Oct 19, 2021 | 7:21 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಕಾಂಗ್ರೆಸ್‌ನ ಹಿರಯ ನಾಯಕ ಡೆರೆಕ್ ಒಬ್ರೈನ್ (Derek O’Brien )ಫೇಸ್​​ಬುಕ್​ನಲ್ಲಿ ಮೀಮ್ ಶೇರ್ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು “ಬಾಂಡ್ ಪೋಸ್” ನಲ್ಲಿ ಚಿತ್ರಿಸಿದ್ದಾರೆ. “They call me 007” ಎಂದು ಶೀರ್ಷಿಕೆಯಲ್ಲಿ ಶೇರ್ ಆಗಿರುವ ಮೀಮ್ ನಲ್ಲಿ  “0 ಅಭಿವೃದ್ಧಿ, 0 ಆರ್ಥಿಕ ಬೆಳವಣಿಗೆ, 7 ವರ್ಷಗಳ ಆರ್ಥಿಕ ದುರಾಡಳಿತ” ಎಂದು ಬರೆಯಲಾಗಿದೆ. ಚಲನಚಿತ್ರಗಳಲ್ಲಿ ಜೇಮ್ಸ್ ಬಾಂಡ್ “00” ಸಂಖ್ಯೆ ಹೊಂದಿದ್ದು “ಕೊಲ್ಲಲು ಪರವಾನಗಿ” ಇರುವ ಏಜೆಂಟ್ ಆಗಿದ್ದಾರೆ. ಆದಾಗ್ಯೂ ತೃಣಮೂಲದ ಕಾಂಗ್ರೆಸ್ ಆ ಸಂಖ್ಯೆಯನ್ನು “ಏಳು ವರ್ಷಗಳಲ್ಲಿ ಶೂನ್ಯ ಅಭಿವೃದ್ಧಿ ಮತ್ತು ಬೆಳವಣಿಗೆ” ಎಂದು ಹೇಳಿ ಪ್ರಧಾನಿ ಮೋದಿಯವರನ್ನು ಟೀಕಿಸಿದೆ. ಈ ವರ್ಷದ ಆರಂಭದಲ್ಲಿ ಪ್ರಧಾನಿ ಅಧಿಕಾರದಲ್ಲಿ ಏಳು ವರ್ಷಗಳನ್ನು ಪೂರೈಸಿದರು. ತೃಣಮೂಲವು ಯಾವುದೇ ಉದಾಹರಣೆಗಳನ್ನು ನೀಡದಿದ್ದರೂ, ನೋಟುಗಳ ನಿಷೇಧ ಮತ್ತು ಸರಕು ಮತ್ತು ಸೇವಾ ತೆರಿಗೆಯನ್ನು ಈ ಹಿಂದೆ ತೀವ್ರವಾಗಿ ಟೀಕಿಸಿತ್ತು. ಪ್ರಸ್ತುತ ದೇಶವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಎದುರಿಸುತ್ತಿದೆ. ಬಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: ಪಾಕಿಸ್ತಾನದಿಂದ ನಮ್ಮ ಸೈನಿಕರು ಸತ್ತಿದ್ದಾರೆ, ನೀವು ಟಿ20 ಆಡುತ್ತೀರಾ?; ಪ್ರಧಾನಿ ಮೋದಿ ವಿರುದ್ಧ ಓವೈಸಿ ವಾಗ್ದಾಳಿ

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ