AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ದೇವರಲ್ಲ; ರಾಜೀನಾಮೆ ನೀಡಿದ ನಂತರ ಅರವಿಂದ್ ಕೇಜ್ರಿವಾಲ್ ಮೊದಲ ವಿಧಾನಸಭಾ ಭಾಷಣ

Arvind Kejriwal: ದೆಹಲಿ ವಿಧಾನಸಭೆಯ 2 ದಿನಗಳ ಅಧಿವೇಶನವು ಇಂದು ಪ್ರಾರಂಭವಾಯಿತು. ಇಂದಿನ ಅಧಿವೇಶನದಲ್ಲಿ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕರು ಪರಸ್ಪರರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಸ್ಪೀಕರ್ ಕಲಾಪವನ್ನು ಕೆಲಕಾಲ ಮುಂದೂಡಬೇಕಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ದೆಹಲಿ ಮಾಜಿ ಸಿಎಂ ಇಂದು ಸದನದಲ್ಲಿ ಭಾಷಣ ಮಾಡಿದ್ದಾರೆ.

ಮೋದಿ ದೇವರಲ್ಲ; ರಾಜೀನಾಮೆ ನೀಡಿದ ನಂತರ ಅರವಿಂದ್ ಕೇಜ್ರಿವಾಲ್ ಮೊದಲ ವಿಧಾನಸಭಾ ಭಾಷಣ
ಕೇಜ್ರಿವಾಲ್
ಸುಷ್ಮಾ ಚಕ್ರೆ
|

Updated on: Sep 26, 2024 | 6:40 PM

Share

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ದೆಹಲಿ ವಿಧಾನಸಭೆ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ದೆಹಲಿ ವಿಧಾನಸಭೆಯಲ್ಲಿ ಮಾಡಿದ ಮೊದಲ ಭಾಷಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಮಂತ್ರಿ ತುಂಬಾ ಶಕ್ತಿಶಾಲಿಯಾಗಿರಬಹುದು, ಆದರೆ ಅವರು ದೇವರಲ್ಲ ಎಂದು ಟೀಕಿಸಿದ್ದಾರೆ.

ವಿರೋಧ ಪಕ್ಷದಲ್ಲಿರುವ ನನ್ನ ಸಹೋದ್ಯೋಗಿಗಳಿಗೆ ಸದನದಲ್ಲಿ ಮನೀಷ್ ಸಿಸೋಡಿಯಾ ಮತ್ತು ನನ್ನನ್ನು ನೋಡಿ ಬೇಸರವಾಗಿರಬೇಕು. ಪಿಎಂ ಮೋದಿ ತುಂಬಾ ಶಕ್ತಿಶಾಲಿ ಮತ್ತು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದ್ದಾರೆ. ಆದರೆ ಮೋದಿ ದೇವರಲ್ಲ. ಆದರೆ ದೇವರು ನಮ್ಮೊಂದಿಗಿದ್ದಾನೆ ಎಂದು ನಾನು ಯಾವಾಗಲೂ ಹೇಳುತ್ತಿರುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಅವರ ಕುರ್ಚಿಯಲ್ಲಿ ಕೂರದೆ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅತಿಶಿ

“ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ, ಇಂದು ನಾನು ಮುಖ್ಯಮಂತ್ರಿಯೊಂದಿಗೆ ರಸ್ತೆ ತಪಾಸಣೆಗೆ ಹೋಗಿದ್ದೆ. ನಾನು ಜೈಲಿಗೆ ಹೋಗುವ ಮೊದಲು ದೆಹಲಿ ವಿಶ್ವವಿದ್ಯಾಲಯದ ರಸ್ತೆಗಳು ಉತ್ತಮವಾಗಿದ್ದವು. ಅಲ್ಲಿನ ರಸ್ತೆಗಳನ್ನು ದುರಸ್ತಿ ಮಾಡಲು ಆದೇಶವನ್ನು ನೀಡುವಂತೆ ನಾನು ಕೇಳಿದೆ. 3-4 ದಿನಗಳ ಹಿಂದೆ ಬಿಜೆಪಿ ನಾಯಕರೊಬ್ಬರನ್ನು ಭೇಟಿಯಾಗಿದ್ದೆ. ನನ್ನನ್ನು ಜೈಲಿಗೆ ಕಳುಹಿಸುವುದರಿಂದ ಏನಾದರೂ ಪ್ರಯೋಜನವಿದೆಯೇ? ಎಂದು ಕೇಳಿದ್ದೆ. ಆಗ ಅವರು ನಾವು ಇಡೀ ದೆಹಲಿ ಸರ್ಕಾರವನ್ನು ಹಳಿತಪ್ಪಿಸಿದೆವು ಎಂದು ಒಪ್ಪಿಕೊಂಡಿದ್ದರು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ನಿವೃತ್ತಿ ನಿಯಮ ಮೋದಿಗೆ ಅನ್ವಯಿಸುವುದಿಲ್ಲವೇ?; ಆರ್​ಎಸ್​ಎಸ್​ಗೆ ಪತ್ರ ಬರೆದ ಕೇಜ್ರಿವಾಲ್

“ದೆಹಲಿಯಲ್ಲಿ ಯಾರೂ ಕೇಜ್ರಿವಾಲ್ ಅಪ್ರಾಮಾಣಿಕ ಎಂದು ಹೇಳುವುದಿಲ್ಲ. ಕೇಜ್ರಿವಾಲ್ ಅವರ ವಿರುದ್ಧ ನಕಲಿ ಪ್ರಕರಣಗಳು ದಾಖಲಾಗಿವೆ. ಬಿಜೆಪಿ ನಾಯಕರು ಎಎಪಿ ನಾಯಕರನ್ನು ಜೈಲಿಗೆ ಹಾಕಿದ್ದಾರೆ ಎಂದು ಜನರು ಹೇಳುತ್ತಾರೆ. ನಾನು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿದ್ದೇನೆಯೇ ವಿನಃ ತಪ್ಪಿತಸ್ಥನೆಂಬ ಕಾರಣಕ್ಕಲ್ಲ” ಎಂದು ದೆಹಲಿ ಮಾಜಿ ಸಿಎಂ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ