AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ

ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ
ಪ್ರಧಾನಿ ಮೋದಿ
TV9 Web
| Edited By: |

Updated on: Dec 29, 2021 | 4:28 PM

Share

ನವದೆಹಲಿ; ವಿಶ್ವಾದ್ಯಂತ ಒಮಿಕ್ರಾನ್ (Omicron) ಭೀತಿ ಹೆಚ್ಚಾಗಿದ್ದು, ಕೆಲವು ದೇಶಗಳಲ್ಲಿ ಒಮಿಕ್ರಾನ್ ರೂಪಾಂತರಿ (Omicron Variant) ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಯುಎಇ ಮತ್ತು ಕುವೈತ್ ಪ್ರವಾಸವನ್ನು ಮುಂದೂಡಲಾಗಿದೆ. ಈ ಮೊದಲು ಜನವರಿ 6ರಂದು ಪ್ರಧಾನಿ ಮೋದಿ ಯುಎಇ ಮತ್ತು ಕುವೈತ್​ಗೆ ಭೇಟಿ ನೀಡುವುದು ನಿಗದಿಯಾಗಿತ್ತು.

ಸೌತ್ ಬ್ಲಾಕ್ ಮೂಲಗಳ ಪ್ರಕಾರ, ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ. ಕೊರೊನಾವೈರಸ್​ನ ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಉಲ್ಬಣಗೊಂಡಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ಈ ವೈರಸ್ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಅಮೆರಿಕದಲ್ಲಿ ಒಮಿಕ್ರಾನ್ ಈಗ ಡೆಲ್ಟಾಗಿಂತಲೂ ಪ್ರಬಲ ವೈರಸ್ ಆಗಿ ಬದಲಾಗಿದೆ.

ಇಂಗ್ಲೆಂಡ್​ನಲ್ಲಿ ಒಮಿಕ್ರಾನ್‌ ಸೋಂಕಿನ ವೇಗದ ಹರಡುವಿಕೆಯಿಂದಾಗಿ ಕೊವಿಡ್-19 ಪ್ರಕರಣಗಳು ಪ್ರತಿದಿನ ಏರಿಕೆಯಾಗುತ್ತಲೇ ಇದೆ. ಭಾರತದಲ್ಲಿ ಕೊವಿಡ್ ಪರಿಸ್ಥಿತಿ ಇಲ್ಲಿಯವರೆಗೆ ನಿಯಂತ್ರಣದಲ್ಲಿದೆ. ಏಳು ಎಮಿರೇಟ್‌ಗಳ ಒಕ್ಕೂಟವಾದ ಯುಎಇಯಲ್ಲಿ ಸೋಮವಾರ 1,732 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ, ಯುಎಇಯಲ್ಲಿ 7,55,000 ಕೊವಿಡ್ ಪ್ರಕರಣಗಳು ಮತ್ತು 2,160 ಸಾವುಗಳನ್ನು ವರದಿಯಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಳ; ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ

ಹೊಸ ವರ್ಷಕ್ಕೆ ಗೋವಾದಲ್ಲಿ ಪಾರ್ಟಿ ಮಾಡೋ ಪ್ಲಾನ್ ಇದೆಯಾ?; ಹೊಸ ಕೊವಿಡ್ ನಿಯಮಗಳು ಹೀಗಿವೆ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ