AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ

ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ
ಪ್ರಧಾನಿ ಮೋದಿ
TV9 Web
| Edited By: |

Updated on: Dec 29, 2021 | 4:28 PM

Share

ನವದೆಹಲಿ; ವಿಶ್ವಾದ್ಯಂತ ಒಮಿಕ್ರಾನ್ (Omicron) ಭೀತಿ ಹೆಚ್ಚಾಗಿದ್ದು, ಕೆಲವು ದೇಶಗಳಲ್ಲಿ ಒಮಿಕ್ರಾನ್ ರೂಪಾಂತರಿ (Omicron Variant) ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಯುಎಇ ಮತ್ತು ಕುವೈತ್ ಪ್ರವಾಸವನ್ನು ಮುಂದೂಡಲಾಗಿದೆ. ಈ ಮೊದಲು ಜನವರಿ 6ರಂದು ಪ್ರಧಾನಿ ಮೋದಿ ಯುಎಇ ಮತ್ತು ಕುವೈತ್​ಗೆ ಭೇಟಿ ನೀಡುವುದು ನಿಗದಿಯಾಗಿತ್ತು.

ಸೌತ್ ಬ್ಲಾಕ್ ಮೂಲಗಳ ಪ್ರಕಾರ, ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ. ಕೊರೊನಾವೈರಸ್​ನ ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಉಲ್ಬಣಗೊಂಡಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ಈ ವೈರಸ್ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಅಮೆರಿಕದಲ್ಲಿ ಒಮಿಕ್ರಾನ್ ಈಗ ಡೆಲ್ಟಾಗಿಂತಲೂ ಪ್ರಬಲ ವೈರಸ್ ಆಗಿ ಬದಲಾಗಿದೆ.

ಇಂಗ್ಲೆಂಡ್​ನಲ್ಲಿ ಒಮಿಕ್ರಾನ್‌ ಸೋಂಕಿನ ವೇಗದ ಹರಡುವಿಕೆಯಿಂದಾಗಿ ಕೊವಿಡ್-19 ಪ್ರಕರಣಗಳು ಪ್ರತಿದಿನ ಏರಿಕೆಯಾಗುತ್ತಲೇ ಇದೆ. ಭಾರತದಲ್ಲಿ ಕೊವಿಡ್ ಪರಿಸ್ಥಿತಿ ಇಲ್ಲಿಯವರೆಗೆ ನಿಯಂತ್ರಣದಲ್ಲಿದೆ. ಏಳು ಎಮಿರೇಟ್‌ಗಳ ಒಕ್ಕೂಟವಾದ ಯುಎಇಯಲ್ಲಿ ಸೋಮವಾರ 1,732 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ, ಯುಎಇಯಲ್ಲಿ 7,55,000 ಕೊವಿಡ್ ಪ್ರಕರಣಗಳು ಮತ್ತು 2,160 ಸಾವುಗಳನ್ನು ವರದಿಯಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಳ; ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ

ಹೊಸ ವರ್ಷಕ್ಕೆ ಗೋವಾದಲ್ಲಿ ಪಾರ್ಟಿ ಮಾಡೋ ಪ್ಲಾನ್ ಇದೆಯಾ?; ಹೊಸ ಕೊವಿಡ್ ನಿಯಮಗಳು ಹೀಗಿವೆ

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ