AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ

ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ
ಪ್ರಧಾನಿ ಮೋದಿ
TV9 Web
| Edited By: |

Updated on: Dec 29, 2021 | 4:28 PM

Share

ನವದೆಹಲಿ; ವಿಶ್ವಾದ್ಯಂತ ಒಮಿಕ್ರಾನ್ (Omicron) ಭೀತಿ ಹೆಚ್ಚಾಗಿದ್ದು, ಕೆಲವು ದೇಶಗಳಲ್ಲಿ ಒಮಿಕ್ರಾನ್ ರೂಪಾಂತರಿ (Omicron Variant) ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಯುಎಇ ಮತ್ತು ಕುವೈತ್ ಪ್ರವಾಸವನ್ನು ಮುಂದೂಡಲಾಗಿದೆ. ಈ ಮೊದಲು ಜನವರಿ 6ರಂದು ಪ್ರಧಾನಿ ಮೋದಿ ಯುಎಇ ಮತ್ತು ಕುವೈತ್​ಗೆ ಭೇಟಿ ನೀಡುವುದು ನಿಗದಿಯಾಗಿತ್ತು.

ಸೌತ್ ಬ್ಲಾಕ್ ಮೂಲಗಳ ಪ್ರಕಾರ, ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ. ಕೊರೊನಾವೈರಸ್​ನ ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಉಲ್ಬಣಗೊಂಡಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ಈ ವೈರಸ್ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಅಮೆರಿಕದಲ್ಲಿ ಒಮಿಕ್ರಾನ್ ಈಗ ಡೆಲ್ಟಾಗಿಂತಲೂ ಪ್ರಬಲ ವೈರಸ್ ಆಗಿ ಬದಲಾಗಿದೆ.

ಇಂಗ್ಲೆಂಡ್​ನಲ್ಲಿ ಒಮಿಕ್ರಾನ್‌ ಸೋಂಕಿನ ವೇಗದ ಹರಡುವಿಕೆಯಿಂದಾಗಿ ಕೊವಿಡ್-19 ಪ್ರಕರಣಗಳು ಪ್ರತಿದಿನ ಏರಿಕೆಯಾಗುತ್ತಲೇ ಇದೆ. ಭಾರತದಲ್ಲಿ ಕೊವಿಡ್ ಪರಿಸ್ಥಿತಿ ಇಲ್ಲಿಯವರೆಗೆ ನಿಯಂತ್ರಣದಲ್ಲಿದೆ. ಏಳು ಎಮಿರೇಟ್‌ಗಳ ಒಕ್ಕೂಟವಾದ ಯುಎಇಯಲ್ಲಿ ಸೋಮವಾರ 1,732 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ, ಯುಎಇಯಲ್ಲಿ 7,55,000 ಕೊವಿಡ್ ಪ್ರಕರಣಗಳು ಮತ್ತು 2,160 ಸಾವುಗಳನ್ನು ವರದಿಯಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಳ; ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ

ಹೊಸ ವರ್ಷಕ್ಕೆ ಗೋವಾದಲ್ಲಿ ಪಾರ್ಟಿ ಮಾಡೋ ಪ್ಲಾನ್ ಇದೆಯಾ?; ಹೊಸ ಕೊವಿಡ್ ನಿಯಮಗಳು ಹೀಗಿವೆ

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ