AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​​ನಿಂದ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ; ಬಿಜೆಪಿ ನಾಯಕರಿಂದ ಭರ್ಜರಿ ಸ್ವಾಗತ

PM Narendra Modi: ಅಮೆರಿಕದಲ್ಲಿ ಜೋ ಬೈಡೆನ್​ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಯುಎಸ್​ಗೆ ಭೇಟಿ ನೀಡಿದ್ದರು.

ಯುಎಸ್​​ನಿಂದ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ; ಬಿಜೆಪಿ ನಾಯಕರಿಂದ ಭರ್ಜರಿ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Sep 26, 2021 | 1:21 PM

Share

ಸೆ.23ರಿಂದ ಮೂರು ದಿನಗಳ ಯುಎಸ್​ ಪ್ರವಾಸದಲ್ಲಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಇಂದು (ಭಾನುವಾರ-ಸೆ.26) ಭಾರತಕ್ಕೆ ಆಗಮಿಸಿದ್ದಾರೆ. ಇಂದು ದೆಹಲಿಯ ಪಾಲಂ ತಾಂತ್ರಿಕ ವಿಮಾನ ನಿಲ್ದಾಣಕ್ಕೆ ಬಂದಿಳಿದ ನರೇಂದ್ರ ಮೋದಿಯವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಸೇರಿ ಹಲವು ಮುಖಂಡರು ಸ್ವಾಗತಿಸಿದರು. ಬಹುದೊಡ್ಡ ಹೂವಿನ ಹಾರ ಹಾಕಿ, ಶಾಲು ಹೊದೆಸಿದರು. ಏರ್​ಪೋರ್ಟ್​​ನಲ್ಲಿ ತಮ್ಮನ್ನು ಸ್ವಾಗತಿಸಿದ ಬಿಜೆಪಿ ನಾಯಕರಿಗೆ ಧನ್ಯವಾದ ಸಲ್ಲಿಸಿದ ಅವರು, ಅಲ್ಲಿಂದ ತಮ್ಮ ನಿವಾಸದ ಕಡೆಗೆ ಹೊರಟರು. 

ಅಮೆರಿಕದಲ್ಲಿ ಜೋ ಬೈಡೆನ್​ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಯುಎಸ್​ಗೆ ಭೇಟಿ ನೀಡಿದ್ದರು. ಸೆಪ್ಟೆಂಬರ್​ 23ರಂದು ಅಮೆರಿಕಕ್ಕೆ ತೆರಳಿದ ಅವರು ಅಂದು ಯುಎಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​ ಮತ್ತು ಜಪಾನ್​ ಪ್ರಧಾನಿ  ಯೋಶಿಹಿದೆ ಸುಗಾರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಕಮಲಾ ಹ್ಯಾರಿಸ್​ಗೆ ಅವರ ತಾತ ಗೋಪಾಲನ್​​ ಅವರಿಗೆ ಸಂಬಂಧಪಟ್ಟ ಅಧಿಸೂಚನೆಯನ್ನು ಉಡುಗೊರೆಯಾಗಿ ಕೊಟ್ಟಿದ್ದರು.

ಇನ್ನು ಎರಡನೇ ದಿನ ಅಂದರೆ ಸೆಪ್ಟೆಂಬರ್​ 24ರಂದು ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಇದು ಅಮೆರಿಕ, ಭಾರತ, ಆಸ್ಟ್ರೇಲಿಯಾ, ಜಪಾನ್​ ದೇಶಗಳನ್ನೊಂಡ ಸಂಘಟನೆಯಾಗಿದ್ದು, ನಾಲ್ಕೂ ರಾಷ್ಟ್ರಗಳ ನಾಯಕರು ಭಾಗವಹಿಸಿ, ಜಾಗತಿಕ ಶಾಂತಿ ಸ್ಥಾಪನೆ ಬಗ್ಗೆ ಚರ್ಚಿಸಿದರು. ಅದರಲ್ಲೂ ಮುಖ್ಯವಾಗಿ ಇಂಡೋ-ಫೆಸಿಪಿಕ್​ ಪ್ರದೇಶದ ಅಭಿವೃದ್ಧಿ, ಶಾಂತಿ ಸ್ಥಾಪನೆಯ ಬಗ್ಗೆ ಮಾತುಕತೆ ನಡೆಸಿದರು.

ನಂತರ ಸೆಪ್ಟೆಂಬರ್​ 25ರಂದು ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದ್ದಾರೆ. ಪಾಕಿಸ್ತಾನ ಹಾಗೂ ಚೀನಾ ವಿರುದ್ಧ ಪರೋಕ್ಷವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಫ್ಘಾನಿಸ್ತಾನದ ಬೆಳವಣಿಗೆ ಬಗ್ಗೆ ಮಾತನಾಡಿ, ಅಫ್ಘಾನ್​ ನೆಲವನ್ನು ಭಯೋತ್ಪಾದನೆ ಕೃತ್ಯಗಳಿಗೆ ಬಳಸಿಕೊಳ್ಳಬೇಡಿ ಎಂದು ತಾಲಿಬಾನಿಗಳಿಗೆ ಸಂದೇಶ ನೀಡಿದ್ದರು.

ಇದನ್ನೂ ಓದಿ: PM Modi in UNGA Summit: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭ

Mann ki Baat: ವಿಶ್ವ ನದಿಗಳ ದಿನವನ್ನು ನೆನಪಿಸಿದ ಪ್ರಧಾನಿ ಮೋದಿ; ವರ್ಷಕ್ಕೊಮ್ಮೆಯಾದರೂ ನದಿಗಳ ಉತ್ಸವ ನಡೆಸಲು ಮನ್​ ಕೀ ಬಾತ್​​ನಲ್ಲಿ ಕರೆ

(PM Narendra Modi landed in India after concluding his three day visit to the US)

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?