AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಯಾಣ್​ ಸಿಂಗ್ ಅಂತಿಮ ದರ್ಶನ ಪಡೆಯಲು ಲಖನೌಗೆ ಬಂದ ಪ್ರಧಾನಿ ಮೋದಿ; ನಾಳೆ ಗಂಗಾನದಿ ತಟದಲ್ಲಿ ಅಂತ್ಯಕ್ರಿಯೆ

Kalyan Singh: ಕಲ್ಯಾಣ್​ ಸಿಂಗ್​ ಅನಾರೋಗ್ಯಕ್ಕೀಡಾಗಿ ಲಖನೌದ ಸಂಜಯ್ ಗಾಂಧಿ ಪೋಸ್ಟ್​ ಗ್ರಾಜುಯೇಟ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿದ್ದ ಅವರು ನಿನ್ನೆ ಮೃತಪಟ್ಟಿದ್ದಾರೆ.

ಕಲ್ಯಾಣ್​ ಸಿಂಗ್ ಅಂತಿಮ ದರ್ಶನ ಪಡೆಯಲು ಲಖನೌಗೆ ಬಂದ ಪ್ರಧಾನಿ ಮೋದಿ; ನಾಳೆ ಗಂಗಾನದಿ ತಟದಲ್ಲಿ ಅಂತ್ಯಕ್ರಿಯೆ
ಕಲ್ಯಾಣ್​ ಸಿಂಗ್​ ಅಂತಿಮ ದರ್ಶನಕ್ಕೆ ಲಖನೌಗೆ ಬಂದ ಪ್ರಧಾನಿ ಮೋದಿ
TV9 Web
| Edited By: |

Updated on:Aug 22, 2021 | 12:01 PM

Share

ಲಖನೌ: ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್​ ಸಿಂಗ್ (Kalyan Singh)​ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಲಖನೌಗೆ ಆಗಮಿಸಿದ್ದಾರೆ. ಏರ್​ಪೋರ್ಟ್​ಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಬರಮಾಡಿಕೊಂಡಿದ್ದಾರೆ. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಇದ್ದರು. ಇನ್ನು ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಗೃಹ ಸಚಿವ ಅಮಿತ್ ಶಾ ಮತ್ತಿತರ ಗಣ್ಯರೂ ಕೂಡ ಕಲ್ಯಾಣ್ ಸಿಂಗ್​ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.

ಕಲ್ಯಾಣ್​ ಸಿಂಗ್​ ಪಾರ್ಥಿವ ಶರೀರವನ್ನು ಇಟ್ಟಿರುವ ಲಖನೌದ ಅವರ ನಿವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ, ಅಂತಿಮವಾಗಿ ಗೌರವ ಸಲ್ಲಿಸಿದರು. ಕಲ್ಯಾಣ್​ ಸಿಂಗ್ ಅವರು ಜನಹಿತವನ್ನು ಮಂತ್ರವನ್ನಾಗಿಸಿಕೊಂಡಿದ್ದರು. ಉತ್ತರಪ್ರದೇಶ ಮತ್ತು ಇಡೀ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅವರು ಪ್ರಾಮಾಣಿಕತೆ ಮತ್ತು ಉತ್ತಮ ಆಡಳಿತಕ್ಕೆ ಇನ್ನೊಂದು ಹೆಸರಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನಾಳೆ ಅಂತ್ಯಕ್ರಿಯೆ ಕಲ್ಯಾಣ್​ ಸಿಂಗ್​ ಅನಾರೋಗ್ಯಕ್ಕೀಡಾಗಿ ಲಖನೌದ ಸಂಜಯ್ ಗಾಂಧಿ ಪೋಸ್ಟ್​ ಗ್ರಾಜುಯೇಟ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿದ್ದ ಅವರು ನಿನ್ನೆ ಮೃತಪಟ್ಟಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಲ್ಯಾಣ್​ ಸಿಂಗ್​ ಅಂತ್ಯಕ್ರಿಯೆ ನಾಳೆ (ಸೋಮವಾರ) ನರೋರಾದಲ್ಲಿರುವ ಗಂಗಾ ನದಿಯ ದಡದಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.  ಕಲ್ಯಾಣ್ ಸಿಂಗ್​ ಮೃತದೇಹವನ್ನು ಇಂದು ವಿಧಾನಸಭೆಗೆ ತೆಗೆದುಕೊಂಡು ಹೋಗಿ, ಅಲ್ಲೇ ಆವರಣದಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ಬಿಜೆಪಿ ಕಚೇರಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಅಲ್ಲಿ ಅಂತಿಮ ದರ್ಶನ ಪಡೆಯಲು 2.30ರವರೆಗೆ ಅವಕಾಶ ಇದೆ ಎಂದು ಉತ್ತರ ಪ್ರದೇಶ ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿ ಅವನೀಶ್​ ಕೆ. ಅವಸ್ಥಿ ತಿಳಿಸಿದ್ದಾರೆ.  ಅದಾದ ಮೇಲೆ ಪಾರ್ಥಿವ ಶರೀರವನ್ನು ಅಲಿಗಡ್​ನ ಸ್ಟೇಡಿಯಂಗೆ ಒಯ್ಯಲಾಗುವುದು. ಅಲ್ಲಿ ಸಾಮಾನ್ಯ ಜನರು ತಮ್ಮ ಅಂತಿಮ ಗೌರವ ಸಲ್ಲಿಸಬಹುದು. ಅಲ್ಲಿಂದ ಪಾರ್ಥಿವ ಶರೀರವನ್ನು ಅಟ್ರೌಲಿಗೆ ಕೊಂಡೊಯ್ಯಲಾಗುತ್ತದೆ. ನಾಳೆ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ನಾಯಕರಿಂದ ಸಂತಾಪ ನಿನ್ನೆ ಕಲ್ಯಾಣ್​ ಸಿಂಗ್​ ನಿಧನರಾಗುತ್ತಿದ್ದಂತೆ  ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕಲ್ಯಾಣ್​ ಸಿಂಗ್​ ಜೀ ನಿಧನದ ದುಃಖವನ್ನು ನನಗೆ ಶಬ್ದದಲ್ಲಿ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಅವರೊಬ್ಬ ಸಮರ್ಥ ರಾಜನೀತಿಜ್ಞ, ಹಿರಿಯ ಆಡಳಿತಗಾರ, ತಳಮಟ್ಟದಿಂದ ಪಕ್ಷಸಂಘಟನೆಗೆ ದುಡಿದ ನಾಯಕ, ಮಹಾನ್​ ವ್ಯಕ್ತಿ. ಉತ್ತರ ಪ್ರದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರ. ಕಲ್ಯಾಣ್​ ಸಿಂಗ್​ ಪುತ್ರ ರಾಜ್​ವೀರ್ ಸಿಂಗ್​ ಜತೆ ಮಾತುಕತೆ ನಡೆಸಿದ್ದೇನೆ ಎಂದು ಮೋದಿಯವರು ಟ್ವೀಟ್ ಮಾಡಿದ್ದರು.  ಗೃಹ ಸಚಿವ ಅಮಿತ್​ ಶಾ ಅವರು ಟ್ವೀಟ್​ ಮಾಡಿ, ಕಲ್ಯಾಣ್​ ಸಿಂಗ್​ ಅವರು ರಾಮ ಜನ್ಮಭೂಮಿ ಆಂದೋಲನದ ಹೀರೋ ಎಂದು ಬಣ್ಣಿಸಿದ್ದಾರೆ.  ಕಲ್ಯಾಣ್​ ಸಿಂಗ್​ ನೀಡಿದ ಕೊಡುಗೆಗಾಗಿ ಅವರನ್ನು ಇಡೀ ದೇಶ ಸದಾ ಸ್ಮರಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kalyan Singh: ಉತ್ತರ ಪ್ರದೇಶದ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ನಿಧನ

Haqqani Network: ಮನುಷ್ಯತ್ವದ ಮುಖ ನೋಡದ ಹಕ್ಕಾನಿಗಳು ಅಫ್ಘಾನಿಸ್ತಾನದಲ್ಲಿ ಓಡಾಡುತ್ತಿದ್ದಾರೆ; ಯಾರಿವರು?

Published On - 11:48 am, Sun, 22 August 21

Follow Us
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ