AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಬೇಕೆಂದ ಸಿಜೆಐ ಚಂದ್ರಚೂಡ್​​ ಮಾತು ಶ್ಲಾಘಿಸಿದ ಮೋದಿ

ಪ್ರಾದೇಶಿಕ ಭಾಷೆಗಳಲ್ಲಿ ನ್ಯಾಯಾಂಗ ತೀರ್ಪುಗಳನ್ನು ಲಭ್ಯವಾಗುವಂತೆ ಮಾಡುವ ಮೂಲಕ ಸಾಮಾನ್ಯ ಜನರಿಗೆ ಸಿಗುವಂತೆ ಮಾಡಬೇಕು ಎಂದು ಈ ಹಿಂದೆಯೂ ಮೋದಿ ಹೇಳಿದ್ದರು.

ಸುಪ್ರೀಂಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಬೇಕೆಂದ ಸಿಜೆಐ ಚಂದ್ರಚೂಡ್​​ ಮಾತು ಶ್ಲಾಘಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 22, 2023 | 7:52 PM

ದೆಹಲಿ: ಸುಪ್ರೀಂಕೋರ್ಟ್ (Supreme Court) ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಕೆಲಸ ಮಾಡುವ ಅಗತ್ಯತೆಯ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ (D Y Chandrachud) ಭಾನುವಾರ ಮಾತನಾಡಿದ್ದಾರೆ. ನಮ್ಮ ಧ್ಯೇಯದ ಮುಂದಿನ ಹಂತವೆಂದರೆ ಪ್ರತಿ ಭಾರತೀಯ ಭಾಷೆಯಲ್ಲಿ ಸುಪ್ರೀಂಕೋರ್ಟ್ ತೀರ್ಪುಗಳ ಅನುವಾದ ಪ್ರತಿಗಳನ್ನು ಒದಗಿಸುವುದು. ನಾವು ನಮ್ಮ ನಾಗರಿಕರಿಗೆ ಅರ್ಥವಾಗುವ ಭಾಷೆಯಲ್ಲಿ ತಲುಪದ ಹೊರತು, ನಾವು ಮಾಡುತ್ತಿರುವ ಕೆಲಸವು ಶೇ99 ಜನರನ್ನು ತಲುಪುವುದಿಲ್ಲ ಎಂದು ಡಿವೈ ಚಂದ್ರಚೂಡ್ ಹೇಳಿದ್ದಾರೆ.ಏತನ್ಮಧ್ಯೆ, ತಂತ್ರಜ್ಞಾನವನ್ನು ಬಳಸಿಕೊಂಡು ಪ್ರಾದೇಶಿಕ ಭಾಷೆಗಳಲ್ಲಿ ಸುಪ್ರೀಂಕೋರ್ಟ್ ತೀರ್ಪುಗಳು ಲಭ್ಯವಾಗುವಂತೆ ಮಾಡುವ ಚಂದ್ರಚೂಡ್ ಅವರ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಶ್ಲಾಘಿಸಿದ್ದಾರೆ.

ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಗೌರವಾನ್ವಿತ ಸಿಜೆಐ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಾದೇಶಿಕ ಭಾಷೆಗಳಲ್ಲಿ ಸುಪ್ರೀಂಕೋರ್ಟ್ ತೀರ್ಪುಗಳು ಲಭ್ಯವಾಗುವಂತೆ ಕೆಲಸ ಮಾಡುವ ಅಗತ್ಯತೆಯ ಕುರಿತು ಮಾತನಾಡಿದರು. ಅದಕ್ಕೆ ತಂತ್ರಜ್ಞಾನವನ್ನೂ ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಇದು ಶ್ಲಾಘನೀಯ ಚಿಂತನೆಯಾಗಿದೆ, ಇದು ಅನೇಕ ಜನರಿಗೆ, ವಿಶೇಷವಾಗಿ ಯುವಕರಿಗೆ ಸಹಾಯ ಮಾಡುತ್ತದೆ ಎಂದು ಮೋದಿ ಸಿಜೆಐ ಭಾಷಣದ ತುಣುಕನ್ನು ಶೇರ್ ಮಾಡಿ ಟ್ವೀಟ್ ಮಾಡಿದ್ದಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಮತ್ತು ಗೋವಾದ ಬಾರ್ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಜೆಐ ಈ ಭಾಷಣ ಮಾಡಿದ್ದರು.

ಪ್ರಾದೇಶಿಕ ಭಾಷೆಗಳಲ್ಲಿ ನ್ಯಾಯಾಂಗ ತೀರ್ಪುಗಳನ್ನು ಲಭ್ಯವಾಗುವಂತೆ ಮಾಡುವ ಮೂಲಕ ಸಾಮಾನ್ಯ ಜನರಿಗೆ ಸಿಗುವಂತೆ ಮಾಡಬೇಕು ಎಂದು ಈ ಹಿಂದೆಯೂ ಮೋದಿ ಹೇಳಿದ್ದರು.

ಭಾರತವು ಹಲವಾರು ಭಾಷೆಗಳನ್ನು ಹೊಂದಿದೆ, ಅದು ನಮ್ಮ ಸಾಂಸ್ಕೃತಿಕ ಕಂಪನ್ನು ಹೆಚ್ಚಿಸುತ್ತದೆ. ಇಂಜಿನಿಯರಿಂಗ್ ಮತ್ತು ಮೆಡಿಸಿನ್‌ನಂತಹ ವಿಷಯಗಳನ್ನು ಮಾತೃ ಭಾಷೆಯಲ್ಲಿ (ಮಾತೃಭಾಷೆ) ಕಲಿಯುವ ಆಯ್ಕೆಯನ್ನು ನೀಡುವುದು ಸೇರಿದಂತೆ ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಹಲವಾರು ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮೋದಿ ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಶನಿವಾರದಂದು, ಸಿಜೆಐ ಚಂದ್ರಚೂಡ್ ಅವರು ಹೆಚ್ಚುತ್ತಿರುವ ಡಿಜಿಟಲೀಕರಣದ ಜಗತ್ತಿನಲ್ಲಿ, ಭಾರತೀಯ ನ್ಯಾಯಾಂಗದ ಮುಂದಿನ ಹಂತವೆಂದರೆ ಸುಪ್ರೀಂಕೋರ್ಟ್ ನಿರ್ಧಾರಗಳನ್ನು ಎಲ್ಲಾ ಭಾರತೀಯ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡುವುದು. ಇದಕ್ಕೆ AI  ಬಳಸಲಾಗುವುದು.

ನಾನು AI ನಲ್ಲಿ ಕೆಲಸ ಮಾಡುವ ಮದ್ರಾಸ್‌ನ ಪ್ರಾಧ್ಯಾಪಕರನ್ನು ಭೇಟಿ ಮಾಡಿದ್ದೇನೆ. ಮುಂದಿನ ಹಂತವೆಂದರೆ ಸುಪ್ರೀಂಕೋರ್ಟ್ ತೀರ್ಪುಗಳ ಪ್ರತಿಗಳನ್ನು ಪ್ರತಿ ಭಾರತೀಯ ಭಾಷೆಯಲ್ಲಿ ಅನುವಾದಿಸುವುದು” ಎಂದು ಹೇಳಿದ್ದಾರೆ. ಇಂಗ್ಲಿಷ್‌ನ ಅವಧಿ ಅಥವಾ ವಿವರಗಳನ್ನು ಅರ್ಥಮಾಡಿಕೊಳ್ಳದ ಗ್ರಾಮೀಣ ಜನರಿಗೆ ಇಂಗ್ಲಿಷ್ ತೀರ್ಪುಗಳು ಸಹಾಯಕವಾಗುವುದಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:39 pm, Sun, 22 January 23

ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!
ಪೊಲೀಸ್ ಆಯುಕ್ತ ಡಾ ಎಸ್ ಡಿ ಶರಣಪ್ಪರಿಂದ ಆರೋಪಿಗಳ ವಿಚಾರಣೆ
ಪೊಲೀಸ್ ಆಯುಕ್ತ ಡಾ ಎಸ್ ಡಿ ಶರಣಪ್ಪರಿಂದ ಆರೋಪಿಗಳ ವಿಚಾರಣೆ