AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ವಿಶೇಷ ತಳಿಯ ಬೆಳೆಗಳ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ; ಅಪೌಷ್ಟಿಕತೆ, ಹವಾಮಾನ ಬದಲಾವಣೆ ಸವಾಲು ಎದುರಿಸಲು ನೂತನ ಯತ್ನ

PM Modi: ಜನರಲ್ಲಿ ಅಪೌಷ್ಟಿಕತೆ ಬಗ್ಗೆ ತಿಳಿವಳಿಕೆ ಮೂಡಿಸಲು ಮುಂದಾಗಿ ಎಂದು ಪ್ರಧಾನಿ ಮೋದಿ ಒಲಿಂಪಿಕ್ಸ್​ ಚಾಂಪಿಯನ್​ಗಳಲ್ಲಿ ಮನವಿ ಮಾಡಿದ್ದಾರೆ. ಇದಕ್ಕಾಗಿ ಪ್ರತಿಯೊಬ್ಬರೂ 75 ಶಾಲೆಗಳನ್ನು ದತ್ತು ಪಡೆಯುವಂತೆ ಹೇಳಿದ್ದಾರೆ.

35 ವಿಶೇಷ ತಳಿಯ ಬೆಳೆಗಳ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ; ಅಪೌಷ್ಟಿಕತೆ, ಹವಾಮಾನ ಬದಲಾವಣೆ ಸವಾಲು ಎದುರಿಸಲು ನೂತನ ಯತ್ನ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on:Sep 28, 2021 | 4:50 PM

Share

ರೈತರು ಕೃಷಿಗೆ ದೊಡ್ಡ ತೊಡಕಾಗಿರುವ ಎರಡು ಪ್ರಮುಖ ಸವಾಲುಗಳಾದ ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆ.  ರೈತರು ಈ ಎರಡೂ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿ ಬೇಸಾಯ ನಡೆಸಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಭಾರತೀಯ ಕೃಷಿ ಸಂಶೋಧನಾ  ಮಂಡಳಿ (ICAR) ಅಭಿವೃದ್ಧಿಪಡಿಸಿರುವ, ವಿಶೇಷ ಗುಣಲಕ್ಷಣಗಳುಳ್ಳ 35 ತಳಿಯ ಬೆಳೆಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.  ಬಳಿಕ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಬೆಳೆಗಳ ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ರೈತರಲ್ಲಿ ಅರಿವು ಮೂಡಿಸುವಂತೆ  ಶಿಕ್ಷಣ ತಜ್ಞರು, ಕೃಷಿ ವಿಜ್ಞಾನಿಗಳು ಮತ್ತು ಎನ್​​ಜಿಒಗಳಿಗೆ ಕರೆ ನೀಡಿದರು. 

ವಿಶೇಷ ಗುಣಲಕ್ಷಣಗಳನ್ನು ಹೊಂದಿರುವ ಒಟ್ಟು 35 ಬೆಳೆ ತಳಿಗಳನ್ನು ವಿಡಿಯೋ ಕಾನ್ಫರೆನ್ಸ್​ ಮೂಲಕ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ, ಇಡೀ ಪರಿಸರ ವ್ಯವಸ್ಥೆ ಮೇಲೆ ಹವಾಮಾನ ಬದಲಾಣೆ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಅದರಲ್ಲಿ ಕೃಷಿಕ್ಷೇತ್ರವೂ ಹೊರತಾಗಿಲ್ಲ. ಆ ಸವಾಲನ್ನು ಎದುರಿಸಿ, ಕೃಷಿ ಸುಸೂತ್ರವಾಗಿ ನಡೆಯಬೇಕು. ಹಾಗಾಗಬೇಕು ಎಂದರೆ ರೈತರಲ್ಲಿ ಅರಿವು ಮೂಡಬೇಕು. ಇದೀಗ ಲೋಕಾರ್ಪಣೆಗೊಂಡ ಹೊಸ ಬೆಳೆಗಳ ಬಗ್ಗೆ ರೈತರಲ್ಲಿ ತಿಳಿವಳಿಕೆ ಮೂಡಿಸಲು ಅಭಿಯಾನಗಳು ನಡೆಯಬೇಕು. ಶಿಕ್ಷಣ ತಜ್ಞರು, ಕೃಷಿ ವಿಜ್ಞಾನಿಗಳು ಮುಂದಾಗಿ ಅದನ್ನು ಮಾಡಬೇಕು. ಬಲವರ್ಧಿತ ಬೀಜಗಳ ಬಗ್ಗೆ ಅವರಿಗೆ ಸರಿಯಾಗಿ ಮಾಹಿತಿ ನೀಡಬೇಕು. ನಾವೆಲ್ಲರೂ ಒಂದಾಗಿ ಈ ಪ್ರಯತ್ನದಲ್ಲಿ ತೊಡಗಿಕೊಂಡಾಗ ಮಾತ್ರ ಹವಾಮಾನ ವೈಪರೀತ್ಯದಿಂದ  ನಮ್ಮ ದೇಶದ ಕೃಷಿ ಕ್ಷೇತ್ರವನ್ನು ರಕ್ಷಿಸಬಹುದು ಎಂದು ಹೇಳಿದರು. ಈ ಮೂಲಕ ರೈತರು ಸಮೃದ್ಧ ಜೀವನ ನಡೆಸುವ ಜತೆಗೆ ದೇಶದ ಆರೋಗ್ಯ ಭದ್ರತೆಗೂ ಪೂರಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಒಲಿಂಪಿಕ್ಸ್​ ಚಾಂಪಿಯನ್​​ಗಳಲ್ಲಿ ಒಂದು ಮನವಿ ದೇಶಕ್ಕೆ ಹವಾಮಾನ ವೈಪರೀತ್ಯದೊಂದಿಗೆ ಎದುರಾಗಿರುವ ಇನ್ನೊಂದು ಬಹುದೊಡ್ಡ ಸವಾಲು ಅಪೌಷ್ಟಿಕತೆ. ಈ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಿ, ಅಪೌಷ್ಟಿಕತೆ ಕೊನೆಗೊಳಿಸಲು ಸಹಾಯ ಮಾಡಿ ಎಂದು ಪ್ರಧಾನಿ ಮೋದಿ ಒಲಿಂಪಿಕ್ಸ್​ ಚಾಂಪಿಯನ್​ಗಳಲ್ಲಿ ಮನವಿ ಮಾಡಿದ್ದಾರೆ. ಪ್ರತಿ ಅಥ್ಲೀಟ್​​ ಬರುವ ವರ್ಷಗಳಲ್ಲಿ 75 ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು. ಅವರಿಗೆ ಪೌಷ್ಟಿಕಾಂಶದ ಮಹತ್ವ ತಿಳಿಸಬೇಕು. ಕ್ರೀಡೆ, ದೈಹಿಕ ವ್ಯಾಯಾಮಗಳ ಬಗ್ಗೆಯೂ ಅವರಲ್ಲಿ ಅರಿವು ಮೂಡಿಸಬೇಕು. ಅಪೌಷ್ಟಿಕತೆಯಿಂದ ಎದುರಾಗುವ ಆರೋಗ್ಯ ಸಮಸ್ಯೆಯ ತಿಳಿವಳಿಕೆಯನ್ನು ಮೂಡಿಸಬೇಕು ಎಂದು ಮೋದಿ ಹೇಳಿದ್ದಾರೆ.

ಹವಾಮಾನ ಬದಲಾವಣೆಯಿಂದ ಹೊಸಹೊಸ ಕಾಯಿಲೆಗಳು ಉದ್ಭವಿಸುತ್ತಿವೆ. ಸಾಂಕ್ರಾಮಿಕ ರೋಗಗಳಿಗೂ ಇದೇ ಮುಖ್ಯ ಕಾರಣ. ಬದಲಾಗುತ್ತಿರುವ ಹವಾಮಾನ ಮನುಕುಲದ ಮತ್ತು ಇತರ ಜೀವಿಗಳ ಆರೋಗ್ಯಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಿದೆ.  ಈ ಬಗ್ಗೆ ನಿರಂತರವಾದ ಸಂಶೋಧನೆ ಅಗತ್ಯವಿದ್ದು, ವಿಜ್ಞಾನ, ಸರ್ಕಾರಗಳು ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಬೇಕು. ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಸವಾಲುಗಳನ್ನು ಎದುರಿಸಲು ರೈತ ಮತ್ತು ವಿಜ್ಞಾನಿಗಳ ಸಮುದಾಯ ಒಗ್ಗಟ್ಟಾಗಬೇಕು ಎಂದು ತಿಳಿಸಿದರು.

ಏನಿದು 35 ವಿಶೇಷ ತಳಿಗಳ ಬೆಳೆಗಳು ವಿಶೇಷ ಗುಣಲಕ್ಷಣಗಳಿರುವ 35 ತಳಿಗಳ ಬೆಳೆಗಳ ಬಗ್ಗೆ ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದೆ. ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಹೆಚ್ಚಿನ ಪೋಷಕಾಂಶಹೊಂದಿರುವ ಈ 35 ತಳಿಗಳನ್ನು 2021ರಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬರಪರಿಸ್ಥಿತಿಯಲ್ಲೂ ಬೆಳೆಯಬಹುದಾದಂತ ಕಡಲೆ, ಮುದುಡುವ ಮತ್ತು ಬರಡು ನಿರೋಧಕ ಬಟಾಣಿ, ಬೇಗನೇ ಕೊಯ್ಲಿಗೆ ಬರುವ ಸೊಯಾಬಿನ್​, ಕಾಯಿಲೆ ನಿರೋಧಕ ಗುಣಹೊಂದಿರುವ ಅಕ್ಕಿ, ಜೈವಿಕ ಬಲವರ್ಧಿತ ತಳಿಗಳ ಗೋಧಿ, ಮುತ್ತು ರಾಗಿ, ಜೋಳ, ಕಡಲೆ, ನವಣೆ ಅಕ್ಕಿ, ಹುರುಳಿ ಇತರ ತಳಿಗಳನ್ನು ಒಳಗೊಂಡಿದೆ.  ಹಾಗೇ, ಇದನ್ನು ಅಪೌಷ್ಟಿಕತೆ ನಿವಾರಣೆಯನ್ನೂ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಿದ್ದಾಗಿ ಪಿಎಂಒ ಮಾಹಿತಿ ನೀಡಿದೆ.  ಇಂದಿನ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್​ ಕೂಡ ಪಾಲ್ಗೊಂಡಿದ್ದರು.

ಇದನ್ನೂ ಓದಿ:9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೈಲು ಶಿಕ್ಷೆಗೊಳಗಾಗಿದ್ದ ಅಪರಾಧಿ ಬಂಧನ

ಟ್ರಾಫಿಕ್ ಜಾಮ್​ನಿಂದ ಸಿಗಲಿದೆ ಇನ್ನು ಮುಕ್ತಿ, ಕೆಲವೇ ದಿನಗಳಲ್ಲಿ ಲಾಂಚ್ ಆಗುತ್ತಿದೆ ಹೈಬ್ರಿಡ್ ಹಾರುವ ಕಾರು!

(PM Modi launches 35 crop varieties through Video Conference)

Published On - 4:25 pm, Tue, 28 September 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!