AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ವಿರುದ್ಧದ ಪಿತೂರಿಗಳನ್ನು ಗೆಲ್ಲಲು ಬಿಡುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ಮೋದಿಯವರು ಇಂದು ಬಿಸ್ವನಾಥ್ ಮತ್ತು ಚರೈಡೊದಲ್ಲಿ ಎರಡು ವೈದ್ಯಕೀಯ ಕಾಲೇಜಿಗೆ ಶಂಕು ಸ್ಥಾಪನೆ ಮಾಡಿದ್ದು ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಯೋಜನೆ ಅಸೋಮ್ ಮಾಲಾಗೆ ಚಾಲನೆ ನೀಡಿದ್ದಾರೆ

ದೇಶದ ವಿರುದ್ಧದ ಪಿತೂರಿಗಳನ್ನು ಗೆಲ್ಲಲು ಬಿಡುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
| Edited By: |

Updated on: Feb 07, 2021 | 2:57 PM

Share

ಗುವಾಹಟಿ: ನಮ್ಮ ದೇಶದ ವಿರುದ್ಧ ಪಿತೂರಿಗಳು ನಡೆಯುತ್ತಿವೆ. ಭಾರತದ ಚಹಾ ಮತ್ತು ದೇಶದ ಪ್ರತಿಷ್ಠೆಗೆ ಸಂಬಂಧಿತ ವಿಷಯಗಳ ಬಗ್ಗೆ ಪಿತೂರಿ ನಡೆಸಲು ಭಾರತದಿಂದ ಹೊರಗಿನವರು ಪ್ರಯತ್ನಿಸುತ್ತಿದ್ದಾರೆ ಎಂದು ಮಾಹಿತಿಯಿರುವ ಕೆಲವು ದಾಖಲೆಗಳು ಸಿಕ್ಕಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾನುವಾರ ಅಸ್ಸಾಂನ ಸೋನಿತ್ಪು​ರ್ ಜಿಲ್ಲೆಯಲ್ಲಿ ಮಾತನಾಡಿದ ಮೋದಿ, ಈ ರೀತಿ ಪಿತೂರಿ ನಡೆಸುವ ರಾಜಕೀಯ ಪಕ್ಷಗಳಿಂದ ಪ್ರತಿ ಚಹಾ ತೋಟದ ಕಾರ್ಮಿಕರು ಉತ್ತರ ಕೇಳಬೇಕು ಎಂದಿದ್ದಾರೆ. ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕಾಗಿ ₹1,000 ಕೋಟಿ ಬಜೆಟ್ ಅನುದಾನಕ್ಕೆ ಸಂಬಂಧಿಸಿ ಪಿತೂರಿ ನಡೆಯುತ್ತಿದೆ ಎಂದು ಮೋದಿ ಉಲ್ಲೇಖಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಶಾನ್ಯ ರಾಜ್ಯಗಳಲ್ಲಿ ರಸ್ತೆ ಯೋಜನೆಗಾಗಿ ₹ 34,000 ಕೋಟಿ ಅನುದಾನ ನೀಡಿದ್ದರು.

ಮೋದಿಯವರು ಇಂದು ಬಿಸ್ವನಾಥ್ ಮತ್ತು ಚರೈಡೊದಲ್ಲಿ ಎರಡು ವೈದ್ಯಕೀಯ ಕಾಲೇಜಿಗೆ ಶಂಕು ಸ್ಥಾಪನೆ ಮಾಡಿದ್ದು ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಯೋಜನೆ ಅಸೋಮ್ ಮಾಲಾಗೆ ಚಾಲನೆ ನೀಡಿದ್ದಾರೆ. ದೇಶದ 500ಕ್ಕೂ ಹೆಚ್ಚು ಜಿಲ್ಲೆಗಳನ್ನು ನಾಲ್ಕು ಪಥದ ಹೆದ್ದಾರಿಗಳೊಂದಿಗೆ ಸಂಪರ್ಕಿಸುವ ರಾಷ್ಟ್ರೀಯ ಭಾರತಮಾಲಾ ಯೋಜನೆಯೊಂದಿಗೆ ಅಸೋಮ್ ಮಾಲಾ ಕೂಡಾ ಸೇರಲಿದೆ.

ಸ್ವಾತಂತ್ರ್ಯ ಸಿಕ್ಕಿ ಏಳು ದಶಕಗಳಲ್ಲಿ ಅಸ್ಸಾಂನಲ್ಲಿ 6 ವೈದ್ಯಕೀಯ ಕಾಲೇಜುಗಳಷ್ಟೇ ಇದ್ದಿದ್ದು. ಆದರೆ ಕಳೆದ 5 ವರ್ಷಗಳಲ್ಲಿ ನಾವು 6 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಿದ್ದೇವೆ. ಪ್ರತಿವರ್ಷ ಅಸ್ಸಾಂನಿಂದ 1,600 ಎಂಬಿಬಿಎಸ್ ಪದವಿ ಪಡೆದ ವೈದ್ಯರು ಸಿಗುತ್ತಾರೆ  ಎಂದಿದ್ದಾರೆ.

‘ಸೋನಿತ್‌ಪುರದ ಧೇಕಿಯಾಜುಲಿಯಲ್ಲಿ ಇಂದಿನ ಸಭೆ ನಡೆದಿದ್ದು ಈ ಸ್ಥಳವು ಐತಿಹಾಸಿಕ ಹಿನ್ನೆಲೆಯುಳ್ಳದ್ದಾಗಿದೆ. ಯಾವುದೇ ಪ್ರಧಾನ ಮಂತ್ರಿಗಳು ಇಲ್ಲಿಯವರಿಗೆ ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿಲ್ಲ, ಬ್ರಿಟಿಷ್ ಆಡಳಿತದ ವಿರುದ್ಧ ನಡೆದ, ಕ್ವಿಟ್ ಇಂಡಿಯಾ ಚಳವಳಿಯ ವೇಳೆ ಇಲ್ಲಿ 13 ಜನರು ಹುತಾತ್ಮರಾಗಿದ್ದರು. ಅವರ ತ್ಯಾಗವನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, ‘ಈ ಭೂಮಿಯಲ್ಲಿ, ಅಸ್ಸಾಂನ ಜನರು ಆಕ್ರಮಣಕಾರರನ್ನು ಸೋಲಿಸಿದರು. ಇಂದು ಈ ಐತಿಹಾಸಿಕ ಧೇಕಿಯಾಜುಲಿ ಭೂಮಿಗೆ ಗೌರವ ಸಲ್ಲಿಸಲು ನನಗೆ ಅವಕಾಶ ಸಿಕ್ಕಿತು’ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಖ್ಯಾತ ಅಸ್ಸಾಮಿ ಸಂಯೋಜಕ ಮತ್ತು ಗಾಯಕ ಭೂಪೆನ್ ಹಜಾರಿಕಾ ಅವರನ್ನು ನೆನಪಿಸಿಕೊಂಡ ಅವರು ‘ಇಂದು ಭಾರತದ ಸಿಂಹಗಳು ಜಾಗೃತಗೊಳ್ಳುತ್ತಿವೆ’ ಎಂದಿದ್ದಾರೆ.

ದೇಶವನ್ನು ಮಾರುವುದು ನಿಮ್ಮ ಕೆಲಸವಲ್ಲ: ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ