AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಪ್ರಧಾನಿ ಮೋದಿ ರೋಡ್​ ಶೋ, 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂಜೆ ಅಸ್ಸಾಂ ತಲುಪಿದ್ದು, ಎರಡು ದಿನಗಳ ಪ್ರವಾಸದಲ್ಲಿದ್ದಾರೆ. ಇದಂಉ ಅವರು 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ನರೇಂದ್ರ ಮೋದಿ ಅಸ್ಸಾಂ ಭೇಟಿ ಮಹತ್ವ ಪಡೆದುಕೊಂಡಿದೆ.

ಅಸ್ಸಾಂನಲ್ಲಿ ಪ್ರಧಾನಿ ಮೋದಿ ರೋಡ್​ ಶೋ, 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ನರೇಂದ್ರ ಮೋದಿImage Credit source: Times Of India
ನಯನಾ ರಾಜೀವ್
|

Updated on:Feb 04, 2024 | 1:30 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಗುವಾಹಟಿಯಲ್ಲಿ ರೋಡ್​ ಶೋ ನಡೆಸಿದ್ದಾರೆ, ಅಷ್ಟೇ ಅಲ್ಲದೆ 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.  ಗುವಾಹಟಿಯ ಖಾನಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಒಂದು ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಿದರು.

ಪ್ರಧಾನಿ ಶನಿವಾರ ಸಂಜೆ 6.30 ರ ಸುಮಾರಿಗೆ ಒಡಿಶಾದಿಂದ ಗುವಾಹಟಿಯ ಪ್ರಸಿದ್ಧ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿದರು. ಇಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಜ್ಯ ಸಚಿವರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಮೋದಿ ಅವರನ್ನು ಸ್ವಾಗತಿಸಿದರು.

ಇದಾದ ನಂತರ ಕೊಯಿನಾಧೋರಾ ರಾಜ್ಯ ಅತಿಥಿ ಗೃಹಕ್ಕೆ ತೆರಳಿದರು. ಅಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿಯನ್ನು ಭೇಟಿಯಾದ ಮೋದಿ ಪಕ್ಷದ ವಿಷಯಗಳ ಬಗ್ಗೆ ಚರ್ಚಿಸಿದರು.

11 ಸಾವಿರ ಕೋಟಿ ರೂ. ಯೋಜನೆಗಳ ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಅಸ್ಸಾಂ ಹಾಗೂ ಈಶಾನ್ಯ ದಕ್ಷಿಣ ಏಷ್ಯಾದ ಇತರೆ ದೇಶಗಳೊಂದಿಗೆ ಸಂಪರ್ಕವನ್ನು ಬಲಪಡಿಸುತ್ತದೆ. ತಾಯಿ ಕಾಮಾಕ್ಯ ಆಶೀರ್ವಾದಿಂದ ಮತ್ತೊಮ್ಮೆ ಅಸ್ಸಾಂ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಚಾಲನೆ ನೀಡುವ ಅವಕಾಶ ಸಿಕ್ಕಿದೆ ಎಂದರು.

-ಕಾಮಾಕ್ಯ ದೇವಸ್ಥಾನ ಕಾರಿಡಾರ್ – 498 ಕೋಟಿ ರೂ -ಗುವಾಹಟಿಯ ಹೊಸ ವಿಮಾನ ನಿಲ್ದಾಣದಿಂದ ಆರು ಪಥದ ರಸ್ತೆ – 358 ಕೋಟಿ ರೂ -ನೆಹರು ಸ್ಟೇಡಿಯಂ ಅನ್ನು ಫಿಫಾ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವುದು – 831 ಕೋಟಿ ರೂ -ಚಂದ್ರಾಪುರದಲ್ಲಿ ಹೊಸ ಕ್ರೀಡಾ ಸಂಕೀರ್ಣ – 300 ಕೋಟಿ ರೂ -ಅಸೋಮ್ ಮಾಲಾ ರಸ್ತೆಗಳ ಎರಡನೇ ಆವೃತ್ತಿಗೂ ಪ್ರಧಾನಿ ಚಾಲನೆ ನೀಡಿದ್ದಾರೆ. ಈ ಹಂತದಲ್ಲಿ 43 ಹೊಸ ರಸ್ತೆಗಳು ಮತ್ತು 38 ಕಾಂಕ್ರೀಟ್ ಸೇತುವೆಗಳು ಸೇರಿದಂತೆ ಒಟ್ಟು 3,444 ಕೋಟಿ ರೂ. -3,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಮಗ್ರ ನೂತನ ಕಟ್ಟಡಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. -ಪ್ರಧಾನಿಯವರು ಉದ್ದೇಶಿತ ಕರೀಂಗಂಜ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ. 578 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. -ಗುವಾಹಟಿಯಲ್ಲಿ 297 ಕೋಟಿ ರೂಪಾಯಿ ಮೌಲ್ಯದ ಯೂನಿಟಿ ಮಾಲ್ ಅನ್ನು ಸ್ಥಾಪಿಸಲಿದೆ. -1,451 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಬಿಸ್ವನಾಥ್ ಚರಿಯಾಲಿಯಿಂದ ಗೋಪುರದವರೆಗೆ ಹೊಸದಾಗಿ ನಿರ್ಮಿಸಲಾದ ಚತುಷ್ಪಥ ರಸ್ತೆ ಮತ್ತು 592 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಡೋಲಬರಿಯಿಂದ ಜಮುಗುರಿವರೆಗಿನ ಮತ್ತೊಂದು ಚತುಷ್ಪಥ ರಸ್ತೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:01 pm, Sun, 4 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ