AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhi Jayanti: ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ; ಬಾಪು ಆದರ್ಶಗಳನ್ನು ಸ್ಮರಿಸಿದ ರಾಷ್ಟ್ರಪತಿ

ಅಹಿಂಸೆಯನ್ನು ಪ್ರತಿಪಾದಿಸಿದ್ದ ಗಾಂಧಿಯವರ ಜನ್ಮದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವಾಗಿ ಆಚರಿಸಲಾಗುತ್ತದೆ.

Gandhi Jayanti: ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ; ಬಾಪು ಆದರ್ಶಗಳನ್ನು ಸ್ಮರಿಸಿದ ರಾಷ್ಟ್ರಪತಿ
ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಾತ್ಮ ಗಾಂಧಿ
TV9 Web
| Edited By: |

Updated on:Oct 02, 2022 | 9:15 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾನುವಾರ ಗಾಂಧಿ ಜಯಂತಿ ಪ್ರಯುಕ್ತ ರಾಜಘಾಟ್​ನಲ್ಲಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ (Mahatma Gandhi) ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹಾತ್ಮಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅಹಿಂಸೆಯನ್ನು ಪ್ರತಿಪಾದಿಸಿದ್ದ ಗಾಂಧಿಯವರ ಜನ್ಮದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವಾಗಿ ಆಚರಿಸಲಾಗುತ್ತದೆ. 2007ರಲ್ಲಿ ವಿಶ್ವಸಂಸ್ಥೆಯ ಮಹಾಧಿವೇಶನವು ‘ಅಹಿಂಸಾ ದಿನ’ದ ನಿರ್ಣಯವನ್ನು ಅಂಗೀಕರಿಸಿತ್ತು.

ಗಾಂಧಿ ಜಯಂತಿ ಪ್ರಯುಕ್ತ ಟ್ವೀಟ್ ಮಾಡಿರುವ ಮೋದಿ, ‘ಗಾಂಧಿ ಜಯಂತಿಯಂದು ಮಹಾತ್ಮಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಈ ಬಾರಿಯ ಗಾಂಧಿ ಜಯಂತಿ ಇನ್ನೂ ವಿಶೇಷವಾದುದು. ಏಕೆಂದರೆ ಭಾರತವು ಈ ವರ್ಷ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ನಾವು ಬಾಪು ಅವರ ಆದರ್ಶಗಳಿಗೆ ಅನುಗುಣವಾಗಿ ಬದುಕಬೇಕಿದೆ’ ಎಂದು ಹೇಳಿದರು. ಮಹಾತ್ಮಾ ಗಾಂಧಿ ಅವರಿಗೆ ಗೌರವ ಸಲ್ಲಿಸಲು ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸುವಂತೆ ಕರೆ ನೀಡಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಸಹ ಗಾಂಧಿ ಅವರನ್ನು ಸ್ಮರಿಸಿದ್ದಾರೆ. ‘ಶಾಂತಿ, ಸಮಾನತೆ ಮತ್ತು ಕೋಮು ಸೌಹಾರ್ದತೆಯ ಮೌಲ್ಯಗಳಿಗೆ ತಮ್ಮನ್ನು ತಾವು ಮರುರೂಪಿಸಿಕೊಳ್ಳಬೇಕಾದ ಸಂದರ್ಭ ಇದು’ ಎಂದು ಮುರ್ಮು ಹೇಳಿದ್ದಾರೆ. ಈ ಕುರಿತು ಪತ್ರವೊಂದನ್ನು ಟ್ವೀಟ್ ಮಾಡಿರುವ ಅವರು, ‘ಮಹಾತ್ಮಾ ಗಾಂಧಿ ಅವರ 153ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, ನಾನು ಎಲ್ಲಾ ನಾಗರಿಕರ ಪರವಾಗಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸುತ್ತೇನೆ. ಗಾಂಧಿ ಅವರ ಸ್ಫೂರ್ತಿದಾಯಕ ಜೀವನದ ಮೌಲ್ಯಗಳಾದ ಶಾಂತಿ, ಸಮಾನತೆ ಮತ್ತು ಕೋಮು ಸೌಹಾರ್ದತೆಯನ್ನು ನಾವು ಅಳವಡಿಸಿಕೊಳ್ಳೋಣ’ ಎಂದು ಹೇಳಿದರು.

ರಾಜಘಾಟ್​​ನಲ್ಲಿ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನು ಸ್ಮರಿಸಿ ಟ್ವೀಟ್ ಮಾಡಿ, ಗಾಂಧಿ ಅವರ ಸಂದೇಶಗಳನ್ನು ಸ್ಮರಿಸಿದ್ದಾರೆ. ‘ಮಹಾತ್ಮಾ ಗಾಂಧಿ ಜನ್ಮದಿನದ ಪ್ರಯುಕ್ತ ವಿಶ್ವ ಅಹಿಂಸಾ ದಿನ ಆಚರಿಸಲಾಗುತ್ತಿದೆ. ಶಾಂತಿ, ಗೌರವ ಮತ್ತು ಘನತೆಯ ಬದುಕು ಎಲ್ಲರಿಗೂ ಸಿಗಬೇಕಿದೆ. ಇಂದು ಜಗತ್ತಿನ ಎದುರು ಇರುವ ಹಲವು ಸವಾಲುಗಳನ್ನು ಗಾಂಧಿ ಅವರ ಸಂದೇಶದ ಮೂಲಕ ಮಣಿಸಬಹುದಾಗಿದೆ’ ಎಂದು ಹೇಳಿದರು.

ಅಕ್ಟೋಬರ್ 2, 1869 ರಂದು ಗುಜರಾತಿನ ಪೋರ್ ಬಂದರ್​ನಲ್ಲಿ ಜನಿಸಿದ ಮಹಾತ್ಮಾ ಗಾಂಧಿ ಬ್ರಿಟಿಷ್ ವಸಾಹತುಶಾಹಿ ಆಡಳಿತದ ವಿರುದ್ಧದ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದರು. ಸ್ವರಾಜ್ಯ ಮತ್ತು ಅಹಿಂಸೆಯಲ್ಲಿ ಅಚಲ ನಂಬಿಕೆ ಇರಿಸಿದ್ದರು. ಅದು ಅವರಿಗೆ ವಿಶ್ವದಾದ್ಯಂತ ಪ್ರಶಂಸೆ ತಂದುಕೊಟ್ಟಿತು.

Published On - 9:09 am, Sun, 2 October 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ