AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಏರುತ್ತಿರುವ ಒಮಿಕ್ರಾನ್​ ಪ್ರಕರಣ, 3ನೇ ಅಲೆ ಆತಂಕ; ನಾಳೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ದೇಶದಲ್ಲಿ ದಿನದಿನವೂ ಒಮಿಕ್ರಾನ್​ ಪ್ರಕರಣಗಳು ಏರಿಕೆಯಾಗುತ್ತಿವೆ. ಹೀಗಿರುವಾಗ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್​ ಭೂಷಣ್​ ಅವರು ಈಗಾಗಲೇ ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಪತ್ರ ಬರೆದಿದ್ದು, ನಿಯಂತ್ರಣಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಭಾರತದಲ್ಲಿ ಏರುತ್ತಿರುವ ಒಮಿಕ್ರಾನ್​ ಪ್ರಕರಣ, 3ನೇ ಅಲೆ ಆತಂಕ; ನಾಳೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Lakshmi Hegde

Updated on:Dec 22, 2021 | 1:28 PM

ದೇಶದಲ್ಲಿ ಒಮಿಕ್ರಾನ್​ ಸೋಂಕಿನ (Omicron Variant) ಪ್ರಮಾಣ ಒಂದೇ ಸಮನೆ ಏರಿಕೆಯಾಗುತ್ತಿರುವ ಬೆನ್ನಲ್ಲೇ  ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಡಿ.23) ಉನ್ನತ ಮಟ್ಟದ ನಿರ್ಣಾಯಕ ಸಭೆ (High Level Meeting)ಯೊಂದನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತದಲ್ಲಿ ಸದ್ಯ 214 ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿವೆ. ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಸಭೆ ನಡೆಸಿ, ಅದರಲ್ಲಿ ನಿಯಂತ್ರಣಾ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.  

ದೇಶದಲ್ಲಿ ದಿನದಿನವೂ ಒಮಿಕ್ರಾನ್​ ಪ್ರಕರಣಗಳು ಏರಿಕೆಯಾಗುತ್ತಿವೆ. ಹೀಗಿರುವಾಗ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್​ ಭೂಷಣ್​ ಅವರು ಈಗಾಗಲೇ ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಪತ್ರ ಬರೆದಿದ್ದು, ಒಮಿಕ್ರಾನ್​ ವೈರಾಣು ಡೆಲ್ಟಾಕ್ಕಿಂತ ಮೂರು ಪಟ್ಟು ವೇಗವಾಗಿ ಹರಡುತ್ತದೆ. ಹೀಗಾಗಿ ಮತ್ತೆ ಹೋರಾಟ ಶುರುವಾಗಬೇಕು. ನಿಮ್ಮ ನಿಮ್ಮ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿರುವ  ವಾರ್​ ರೂಂಗಳನ್ನು ಮತ್ತೆ ಸಕ್ರಿಯಗೊಳಿಸಿ ಎಂದು ಹೇಳಿದ್ದಾರೆ.  ಹಾಗೇ, ಕೊವಿಡ್​ 19 ತಪಾಸಣೆ ಮತ್ತು ಟ್ರ್ಯಾಕಿಂಗ್​ನ್ನು ವೇಗಗೊಳಿಸುವ ಜತೆಗೆ ದೊಡ್ಡ ಸಮಾರಂಭಗಳು, ಜನರ ಗುಂಪುಗೂಡುವಿಕೆ ನಿಷೇಧ, ರಾತ್ರಿ ಕರ್ಫ್ಯೂ  ಹೇರುವಿಕೆಯಂಥ ಕೊರೊನಾ ನಿಯಂತ್ರಣ ಕಾರ್ಯತಂತ್ರಗಳನ್ನು ಮತ್ತೆ ಜಾರಿಗೊಳಿಸಲು ಪ್ರಾರಂಭಿಸಿ ಎಂದು ಕೇಳಿ ಕೊಂಡಿದ್ದಾರೆ.

ನವೆಂಬರ್​ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಒಮಿಕ್ರಾನ್​ ಸೋಂಕು ಇದೀಗ 99ಕ್ಕೂ ಅಧಿಕ ರಾಷ್ಟ್ರಗಳಿಗೆ ವ್ಯಾಪಿಸಿದೆ. ಭಾರತದಲ್ಲಿ 214 ಮಂದಿಯಲ್ಲಿ ಒಮಿಕ್ರಾನ್ ದೃಢಪಟ್ಟಿದೆ.  ಈಗ ದೆಹಲಿಯಲ್ಲಿ 57 ಮಂದಿ ಒಮಿಕ್ರಾನ್​ ಸೋಂಕಿತರಿದ್ದಾರೆ. ಇದೀಗ ದೆಹಲಿ ಮಹಾರಾಷ್ಟ್ರವನ್ನೂ ಹಿಂದಿಕ್ಕಿದ್ದು, ಮಹಾರಾಷ್ಟ್ರದಲ್ಲಿ 54 ಸೋಂಕಿತರಿದ್ದಾರೆ. ಇನ್ನುಳಿದಂತೆ ತೆಲಂಗಾಣದಲ್ಲಿ 24,  ಕರ್ನಾಟಕ 19, ರಾಜಸ್ಥಾನ 18, ಕೇರಳ 15, ಗುಜರಾತ್ 14,  ಜಮ್ಮು-ಕಾಶ್ಮೀರ 3, ಒಡಿಶಾ 2, ಉತ್ತರ ಪ್ರದೇಶ 2, ಆಂಧ್ರ ಚಂಡೀಗಢದಲ್ಲಿ, ಲಡಾಖ್, ಹೈದರಾಬಾದ್, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ. ಈಗಿರುವ 214 ಮಂದಿಯಲ್ಲಿ 90 ಮಂದಿ ಚೇತರಿಸಿಕೊಂಡಿದ್ದಾರೆ ಎಂದೂ ಹೇಳಲಾಗಿದೆ. ಈ ಮಧ್ಯೆ ಫೆಬ್ರವರಿ ಹೊತ್ತಿಗೆ ಭಾರತದಲ್ಲಿ ಕೊವಿಡ್​ 19 ಮೂರನೇ ಅಲೆ ಉತ್ತುಂಗಕ್ಕೆ ಏರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹಾಗಿದ್ದಾಗ್ಯೂ ಕೂಡ ಈ ಮೂರನೇ ಅಲೆ, ಎರಡನೇ ಅಲೆಯಷ್ಟು ಭಯಂಕರವಾಗಿ ಇರಲಾದರು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Sankashti Chaturthi: ಇಂದು ಸಂಕಷ್ಟ ಚತುರ್ಥಿ; ಈ ದಿನದ ವಿಶೇಷತೆ ಜತೆಗೆ ಚಂದ್ರೋದಯದ ಸಮಯ ತಿಳಿಯಿರಿ

ಭಾರತದಲ್ಲಿ ಕೊವಿಡ್​ 19 ಮೂರನೇ ಅಲೆ ಫೆಬ್ರವರಿಯಲ್ಲಿ ಉತ್ತುಂಗಕ್ಕೆ ಏರಿಕೆ; ಎಚ್ಚರಿಕೆ ನೀಡಿದ ವಿಜ್ಞಾನಿಗಳು

Published On - 1:27 pm, Wed, 22 December 21

ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ