AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಯುಎಸ್​ ಪ್ರವಾಸ: ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ

Quad Summit: ಮಾರ್ಚ್​ನಲ್ಲಿ ಜೋ ಬೈಡನ್​ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದರು. ಇದೀಗ ನಾಲ್ಕೂ ರಾಷ್ಟ್ರಗಳ ನಾಯಕರು ಮುಖತಃ ಭೇಟಿಯಾಗಿ ಸಭೆ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿ ಯುಎಸ್​ ಪ್ರವಾಸ: ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ
ಕಮಲಾ ಹ್ಯಾರಿಸ್​
TV9 Web
| Edited By: |

Updated on: Sep 19, 2021 | 11:42 AM

Share

ದೆಹಲಿ: ಸೆಪ್ಟೆಂಬರ್​ 23ರಿಂದ 25ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಯುಎಸ್​ ಪ್ರವಾಸ ಹಮ್ಮಿಕೊಂಡಿದ್ದಾರೆ.  ಅವರು ಸೆಪ್ಟೆಂಬರ್​ 24ರಂದು ವಾಷಿಂಗ್ಟನ್​​ನ ಶ್ವೇತಭವನದಲ್ಲಿ ನಡೆಯಲಿರುವ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಳ್ಳುವರು ಮತ್ತು ಸೆಪ್ಟೆಂಬರ್​ 25ರಂದು ವಾಷಿಂಗ್ಟನ್​​ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂರು ದಿನಗಳ ಪ್ರವಾಸದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್​​ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಹಾಗೇ, ಪ್ರಧಾನಿ ಮೋದಿ ಯುಎಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ಅಮೆರಿಕದಲ್ಲಿ ಜೋ ಬೈಡನ್​ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಪ್ರಧಾನಿ ಮೋದಿ ಮತ್ತು ಬೈಡನ್​ ನಡುವೆ ಫೋನ್​ನಲ್ಲಿ ಮಾತುಕತೆ ನಡೆದಿದ್ದು ಬಿಟ್ಟರೆ ಮುಖತಃ ಭೇಟಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಇವರಿಬ್ಬರ ಭೇಟಿ ಆಗಲಿದೆ. ಹಾಗೇ, ಭಾರತ ಮೂಲದ ಕಮಲಾ ಹ್ಯಾರಿಸ್​ ಜತೆಗೂ ಕೂಡ ಮೋದಿಯವರು ಇದೇ ಮೊದಲ ಸಲ ದ್ವಿಪಕ್ಷೀಯ ಸಭೆ ಹಮ್ಮಿಕೊಂಡಿದ್ದಾರೆ.

ಇನ್ನು ಕ್ವಾಡ್​ ಶೃಂಗಸಭೆಯಲ್ಲಿ ಅಫ್ಘಾನಿಸ್ತಾನದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗುತ್ತದೆ. ಹಾಗೇ, ಇಂಡೋ-ಪ್ಯಾಸಿಫಿಕ್​, ಕೊವಿಡ್​ 19 ಸಾಂಕ್ರಾಮಿಕ ಮತ್ತು ಹವಾಮಾನ ಬಿಕ್ಕಟ್ಟಿನ ಬಗ್ಗೆ ಕೂಡ ಮಾತುಕತೆ ನಡೆಯಲಿದೆ.  ಇನ್ನು ಸೆಪ್ಟೆಂಬರ್​ 23ರಂದು ಪ್ರಧಾನಿ ಮೋದಿಯವರು ಜಪಾನ್​ ಮತ್ತು ಆಸ್ಟ್ರೇಲಿಯಾ ನಾಯಕರೊಂದಿಗೆ ಕೂಡ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ದೆಹಲಿ ಮೂಲಗಳು ತಿಳಿಸಿವೆ. ಯುಎಸ್​, ಇಂಡಿಯಾ, ಜಪಾನ್​ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳನ್ನು ಈ ಕ್ವಾಡ್​ ಶೃಂಗಸಭೆ ಒಳಗೊಳ್ಳಲಿದೆ.

ಈ ಬಾರಿ ಮಾರ್ಚ್​ನಲ್ಲಿ ಜೋ ಬೈಡನ್​ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದರು. ಇದೀಗ ನಾಲ್ಕೂ ರಾಷ್ಟ್ರಗಳ ನಾಯಕರು ಮುಖತಃ ಭೇಟಿಯಾಗಿ ಸಭೆ ನಡೆಸುತ್ತಿದ್ದಾರೆ. ಈ ಶೃಂಗಸಭೆಯಲ್ಲಿ ನಾಯಕರು ಜಾಗತಿಕ ಸಮಸ್ಯೆಗಳಾದ,  ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಸಂಪರ್ಕ ಮತ್ತು ಮೂಲಸೌಕರ್ಯ, ಸೈಬರ್ ಭದ್ರತೆ, ಸಮುದ್ರ ಭದ್ರತೆ, ಮಾನವೀಯ ನೆರವು/ವಿಪತ್ತು ಪರಿಹಾರ, ಹವಾಮಾನ ಬದಲಾವಣೆ ಮತ್ತು ಶಿಕ್ಷಣದ ಬಗ್ಗೆ ಚರ್ಚಿಸಲಿದ್ದಾರೆ. ಪರಸ್ಪರ ದೃಷ್ಟಿಕೋನ, ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.  ಅದರೊಂದಿಗೆ ಪ್ರಮುಖವಾಗಿ ಕೊವಿಡ್​ 19 ಹೋರಾಟದ ಬಗ್ಗೆಯೂ ವ್ಯಾಪಕ ವಿಮರ್ಶೆ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 30,773 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3.32 ಲಕ್ಷಕ್ಕೆ ಇಳಿಕೆ

Rohit Sharma: ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್ ರೋಹಿತ್ ಶರ್ಮಾ

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ