AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಯುಎಸ್​ ಪ್ರವಾಸ: ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ

Quad Summit: ಮಾರ್ಚ್​ನಲ್ಲಿ ಜೋ ಬೈಡನ್​ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದರು. ಇದೀಗ ನಾಲ್ಕೂ ರಾಷ್ಟ್ರಗಳ ನಾಯಕರು ಮುಖತಃ ಭೇಟಿಯಾಗಿ ಸಭೆ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿ ಯುಎಸ್​ ಪ್ರವಾಸ: ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ
ಕಮಲಾ ಹ್ಯಾರಿಸ್​
TV9 Web
| Edited By: |

Updated on: Sep 19, 2021 | 11:42 AM

Share

ದೆಹಲಿ: ಸೆಪ್ಟೆಂಬರ್​ 23ರಿಂದ 25ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಯುಎಸ್​ ಪ್ರವಾಸ ಹಮ್ಮಿಕೊಂಡಿದ್ದಾರೆ.  ಅವರು ಸೆಪ್ಟೆಂಬರ್​ 24ರಂದು ವಾಷಿಂಗ್ಟನ್​​ನ ಶ್ವೇತಭವನದಲ್ಲಿ ನಡೆಯಲಿರುವ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಳ್ಳುವರು ಮತ್ತು ಸೆಪ್ಟೆಂಬರ್​ 25ರಂದು ವಾಷಿಂಗ್ಟನ್​​ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂರು ದಿನಗಳ ಪ್ರವಾಸದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್​​ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಹಾಗೇ, ಪ್ರಧಾನಿ ಮೋದಿ ಯುಎಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ಅಮೆರಿಕದಲ್ಲಿ ಜೋ ಬೈಡನ್​ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಪ್ರಧಾನಿ ಮೋದಿ ಮತ್ತು ಬೈಡನ್​ ನಡುವೆ ಫೋನ್​ನಲ್ಲಿ ಮಾತುಕತೆ ನಡೆದಿದ್ದು ಬಿಟ್ಟರೆ ಮುಖತಃ ಭೇಟಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಇವರಿಬ್ಬರ ಭೇಟಿ ಆಗಲಿದೆ. ಹಾಗೇ, ಭಾರತ ಮೂಲದ ಕಮಲಾ ಹ್ಯಾರಿಸ್​ ಜತೆಗೂ ಕೂಡ ಮೋದಿಯವರು ಇದೇ ಮೊದಲ ಸಲ ದ್ವಿಪಕ್ಷೀಯ ಸಭೆ ಹಮ್ಮಿಕೊಂಡಿದ್ದಾರೆ.

ಇನ್ನು ಕ್ವಾಡ್​ ಶೃಂಗಸಭೆಯಲ್ಲಿ ಅಫ್ಘಾನಿಸ್ತಾನದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗುತ್ತದೆ. ಹಾಗೇ, ಇಂಡೋ-ಪ್ಯಾಸಿಫಿಕ್​, ಕೊವಿಡ್​ 19 ಸಾಂಕ್ರಾಮಿಕ ಮತ್ತು ಹವಾಮಾನ ಬಿಕ್ಕಟ್ಟಿನ ಬಗ್ಗೆ ಕೂಡ ಮಾತುಕತೆ ನಡೆಯಲಿದೆ.  ಇನ್ನು ಸೆಪ್ಟೆಂಬರ್​ 23ರಂದು ಪ್ರಧಾನಿ ಮೋದಿಯವರು ಜಪಾನ್​ ಮತ್ತು ಆಸ್ಟ್ರೇಲಿಯಾ ನಾಯಕರೊಂದಿಗೆ ಕೂಡ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ದೆಹಲಿ ಮೂಲಗಳು ತಿಳಿಸಿವೆ. ಯುಎಸ್​, ಇಂಡಿಯಾ, ಜಪಾನ್​ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳನ್ನು ಈ ಕ್ವಾಡ್​ ಶೃಂಗಸಭೆ ಒಳಗೊಳ್ಳಲಿದೆ.

ಈ ಬಾರಿ ಮಾರ್ಚ್​ನಲ್ಲಿ ಜೋ ಬೈಡನ್​ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದರು. ಇದೀಗ ನಾಲ್ಕೂ ರಾಷ್ಟ್ರಗಳ ನಾಯಕರು ಮುಖತಃ ಭೇಟಿಯಾಗಿ ಸಭೆ ನಡೆಸುತ್ತಿದ್ದಾರೆ. ಈ ಶೃಂಗಸಭೆಯಲ್ಲಿ ನಾಯಕರು ಜಾಗತಿಕ ಸಮಸ್ಯೆಗಳಾದ,  ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಸಂಪರ್ಕ ಮತ್ತು ಮೂಲಸೌಕರ್ಯ, ಸೈಬರ್ ಭದ್ರತೆ, ಸಮುದ್ರ ಭದ್ರತೆ, ಮಾನವೀಯ ನೆರವು/ವಿಪತ್ತು ಪರಿಹಾರ, ಹವಾಮಾನ ಬದಲಾವಣೆ ಮತ್ತು ಶಿಕ್ಷಣದ ಬಗ್ಗೆ ಚರ್ಚಿಸಲಿದ್ದಾರೆ. ಪರಸ್ಪರ ದೃಷ್ಟಿಕೋನ, ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.  ಅದರೊಂದಿಗೆ ಪ್ರಮುಖವಾಗಿ ಕೊವಿಡ್​ 19 ಹೋರಾಟದ ಬಗ್ಗೆಯೂ ವ್ಯಾಪಕ ವಿಮರ್ಶೆ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 30,773 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3.32 ಲಕ್ಷಕ್ಕೆ ಇಳಿಕೆ

Rohit Sharma: ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್ ರೋಹಿತ್ ಶರ್ಮಾ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ