AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಯುಎಸ್​ ಪ್ರವಾಸ: ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ

Quad Summit: ಮಾರ್ಚ್​ನಲ್ಲಿ ಜೋ ಬೈಡನ್​ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದರು. ಇದೀಗ ನಾಲ್ಕೂ ರಾಷ್ಟ್ರಗಳ ನಾಯಕರು ಮುಖತಃ ಭೇಟಿಯಾಗಿ ಸಭೆ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿ ಯುಎಸ್​ ಪ್ರವಾಸ: ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ
ಕಮಲಾ ಹ್ಯಾರಿಸ್​
TV9 Web
| Updated By: Lakshmi Hegde|

Updated on: Sep 19, 2021 | 11:42 AM

Share

ದೆಹಲಿ: ಸೆಪ್ಟೆಂಬರ್​ 23ರಿಂದ 25ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಯುಎಸ್​ ಪ್ರವಾಸ ಹಮ್ಮಿಕೊಂಡಿದ್ದಾರೆ.  ಅವರು ಸೆಪ್ಟೆಂಬರ್​ 24ರಂದು ವಾಷಿಂಗ್ಟನ್​​ನ ಶ್ವೇತಭವನದಲ್ಲಿ ನಡೆಯಲಿರುವ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಳ್ಳುವರು ಮತ್ತು ಸೆಪ್ಟೆಂಬರ್​ 25ರಂದು ವಾಷಿಂಗ್ಟನ್​​ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂರು ದಿನಗಳ ಪ್ರವಾಸದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್​​ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಹಾಗೇ, ಪ್ರಧಾನಿ ಮೋದಿ ಯುಎಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ಅಮೆರಿಕದಲ್ಲಿ ಜೋ ಬೈಡನ್​ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಪ್ರಧಾನಿ ಮೋದಿ ಮತ್ತು ಬೈಡನ್​ ನಡುವೆ ಫೋನ್​ನಲ್ಲಿ ಮಾತುಕತೆ ನಡೆದಿದ್ದು ಬಿಟ್ಟರೆ ಮುಖತಃ ಭೇಟಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಇವರಿಬ್ಬರ ಭೇಟಿ ಆಗಲಿದೆ. ಹಾಗೇ, ಭಾರತ ಮೂಲದ ಕಮಲಾ ಹ್ಯಾರಿಸ್​ ಜತೆಗೂ ಕೂಡ ಮೋದಿಯವರು ಇದೇ ಮೊದಲ ಸಲ ದ್ವಿಪಕ್ಷೀಯ ಸಭೆ ಹಮ್ಮಿಕೊಂಡಿದ್ದಾರೆ.

ಇನ್ನು ಕ್ವಾಡ್​ ಶೃಂಗಸಭೆಯಲ್ಲಿ ಅಫ್ಘಾನಿಸ್ತಾನದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗುತ್ತದೆ. ಹಾಗೇ, ಇಂಡೋ-ಪ್ಯಾಸಿಫಿಕ್​, ಕೊವಿಡ್​ 19 ಸಾಂಕ್ರಾಮಿಕ ಮತ್ತು ಹವಾಮಾನ ಬಿಕ್ಕಟ್ಟಿನ ಬಗ್ಗೆ ಕೂಡ ಮಾತುಕತೆ ನಡೆಯಲಿದೆ.  ಇನ್ನು ಸೆಪ್ಟೆಂಬರ್​ 23ರಂದು ಪ್ರಧಾನಿ ಮೋದಿಯವರು ಜಪಾನ್​ ಮತ್ತು ಆಸ್ಟ್ರೇಲಿಯಾ ನಾಯಕರೊಂದಿಗೆ ಕೂಡ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ದೆಹಲಿ ಮೂಲಗಳು ತಿಳಿಸಿವೆ. ಯುಎಸ್​, ಇಂಡಿಯಾ, ಜಪಾನ್​ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳನ್ನು ಈ ಕ್ವಾಡ್​ ಶೃಂಗಸಭೆ ಒಳಗೊಳ್ಳಲಿದೆ.

ಈ ಬಾರಿ ಮಾರ್ಚ್​ನಲ್ಲಿ ಜೋ ಬೈಡನ್​ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದರು. ಇದೀಗ ನಾಲ್ಕೂ ರಾಷ್ಟ್ರಗಳ ನಾಯಕರು ಮುಖತಃ ಭೇಟಿಯಾಗಿ ಸಭೆ ನಡೆಸುತ್ತಿದ್ದಾರೆ. ಈ ಶೃಂಗಸಭೆಯಲ್ಲಿ ನಾಯಕರು ಜಾಗತಿಕ ಸಮಸ್ಯೆಗಳಾದ,  ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಸಂಪರ್ಕ ಮತ್ತು ಮೂಲಸೌಕರ್ಯ, ಸೈಬರ್ ಭದ್ರತೆ, ಸಮುದ್ರ ಭದ್ರತೆ, ಮಾನವೀಯ ನೆರವು/ವಿಪತ್ತು ಪರಿಹಾರ, ಹವಾಮಾನ ಬದಲಾವಣೆ ಮತ್ತು ಶಿಕ್ಷಣದ ಬಗ್ಗೆ ಚರ್ಚಿಸಲಿದ್ದಾರೆ. ಪರಸ್ಪರ ದೃಷ್ಟಿಕೋನ, ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.  ಅದರೊಂದಿಗೆ ಪ್ರಮುಖವಾಗಿ ಕೊವಿಡ್​ 19 ಹೋರಾಟದ ಬಗ್ಗೆಯೂ ವ್ಯಾಪಕ ವಿಮರ್ಶೆ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 30,773 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3.32 ಲಕ್ಷಕ್ಕೆ ಇಳಿಕೆ

Rohit Sharma: ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!