ಜೂನ್​ 18ರಂದು ವಾರಾಣಸಿಯಲ್ಲಿ ನಡೆಯಲಿರುವ ರೈತರ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ

ವಾರಾಣಸಿಯಲ್ಲಿ ಜೂನ್ 18ರಂದು ನಡೆಯಲಿರುವ ರೈತರ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ಮೋದಿಯವರ ಸಂಸದೀಯ ಕ್ಷೇತ್ರವಾಗಿದ್ದು, ಸಂದರ್ಭದಲ್ಲಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಜೂನ್​ 18ರಂದು ವಾರಾಣಸಿಯಲ್ಲಿ ನಡೆಯಲಿರುವ ರೈತರ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ
ನರೇಂದ್ರ ಮೋದಿImage Credit source: Aljazeera
Follow us
|

Updated on: Jun 11, 2024 | 8:46 AM

ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಸಂಸದೀಯ ಕ್ಷೇತ್ರವಾದ ವಾರಾಣಸಿಯಲ್ಲಿ ಜೂನ್ 18ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಭಾನುವಾರ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿಯವರು ವಾರಾಣಸಿಗೆ ನೀಡಿದ ಮೊದಲ ಭೇಟಿ ಇದಾಗಿದೆ.

ರೊಹಾನಿಯಾ ಅಥವಾ ಸೇವಾಪುರಿ ವಿಧಾನಸಭಾ ಕ್ಷೇತ್ರದಲ್ಲಿ ರೈತರ ಸಮಾವೇಶಕ್ಕೆ ಸ್ಥಳವನ್ನು ಆಯ್ಕೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಮುಂಬರುವ ವಾರಾಣಸಿ ಭೇಟಿಗೆ ಸಂಬಂಧಿಸಿದಂತೆ ಗುಲಾಬ್ ಬಾಗ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಮಹಾನಗರ ಮತ್ತು ಜಿಲ್ಲಾ ಅಧಿಕಾರಿಗಳ ಸಭೆ ನಡೆಯಿತು.

ಬಿಜೆಪಿ ಕಾಶಿ ವಲಯದ ಅಧ್ಯಕ್ಷ ದಿಲೀಪ್ ಪಟೇಲ್ ಮಾತನಾಡಿ, ಪ್ರಧಾನಿ ಮೋದಿ ಅವರು ವಾರಾಣಸಿಗೆ ಭೇಟಿ ನೀಡುವ ಸಂದರ್ಭದಲ್ಲಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಮತ್ತು ಅದಕ್ಕಾಗಿ ಸಿದ್ಧತೆಗಳು ಪ್ರಾರಂಭವಾಗಿವೆ ಎಂದು ತಿಳಿಸಿದರು.

ಮತ್ತಷ್ಟು ಓದಿ: ಅಧಿಕಾರ ಅಥವಾ ಹುದ್ದೆಗಾಗಿ ಇಲ್ಲಿ ಇರುವುದು ನನ್ನ ಅಜೆಂಡಾ ಅಲ್ಲ: ಪಿಎಂ ನರೇಂದ್ರ ಮೋದಿ

ವಾರಾಣಸಿಗೆ ಪ್ರಧಾನಿ ಮೋದಿಯವರ ಭವ್ಯ ಸ್ವಾಗತಕ್ಕೆ ಸಿದ್ಧರಾಗುವಂತೆ ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ಕೇಳಲಾಗಿದೆ ಎಂದು ಪಟೇಲ್ ಹೇಳಿದರು. ರೈತ ಸಮಾವೇಶಕ್ಕೆ ಪಕ್ಷದ ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸುವ ಪ್ರಕ್ರಿಯೆಯೂ ಆರಂಭವಾಗಿದೆ ಎಂದು ತಿಳಿಸಿದರು.

2024 ರ ಲೋಕಸಭಾ ಚುನಾವಣೆಯಲ್ಲಿ, ಪಿಎಂ ಮೋದಿ ಸತತ ಮೂರನೇ ಬಾರಿಗೆ ತಮ್ಮ ವಾರಣಾಸಿ ಸ್ಥಾನವನ್ನು ಉಳಿಸಿಕೊಂಡರು ಮತ್ತು ಕಾಂಗ್ರೆಸ್‌ನ ಅಜಯ್ ರೈ ಅವರನ್ನು 1.5 ಲಕ್ಷ ಮತಗಳ ಅಂತರದಿಂದ ಸೋಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ