AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ತ್ರಿವರ್ಣ ಧ್ವಜವನ್ನು ವಿಶ್ವದ ಅತ್ಯಂತ ಬಲಿಷ್ಠ ಧ್ವಜವನ್ನಾಗಿ ಮಾಡಿದ್ದಾರೆ: ಅನುರಾಗ್ ಠಾಕೂರ್

ಈ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಕರು ನಿರ್ಣಾಯಕ ಪಾತ್ರವನ್ನು ವಹಿಸಬೇಕು ಎಂದು ಪ್ರಧಾನಿ ಹೇಳಿರುವುದನ್ನು ಪುನರುಚ್ಚರಿಸಿದ ಸಚಿವರು ಈ ನಿಟ್ಟಿನಲ್ಲಿ, ಭಾರತವು ಇಂದು ಸುಮಾರು ಒಂದು ಲಕ್ಷ ಸ್ಟಾರ್ಟ್‌ಅಪ್‌ಗಳು ಮತ್ತು ನೂರಕ್ಕೂ ಹೆಚ್ಚು ಯುನಿಕಾರ್ನ್‌ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ತ್ರಿವರ್ಣ ಧ್ವಜವನ್ನು ವಿಶ್ವದ ಅತ್ಯಂತ ಬಲಿಷ್ಠ ಧ್ವಜವನ್ನಾಗಿ ಮಾಡಿದ್ದಾರೆ: ಅನುರಾಗ್  ಠಾಕೂರ್
ಅನುರಾಗ್ ಠಾಕೂರ್
ರಶ್ಮಿ ಕಲ್ಲಕಟ್ಟ
|

Updated on:May 27, 2023 | 6:12 PM

Share

9 ಸಾಲ್ (ಒಂಬತ್ತು ವರ್ಷ) – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ  ಸಚಿವ ಅನುರಾಗ್ ಠಾಕೂರ್ (Anurag Thakur) ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ಸಾಮಾನ್ಯ ಜನರ ಜೀವನ ನಾಟಕೀಯ ಬದಲಾವಣೆಯನ್ನು ಕಂಡಿದೆ. ಸರ್ಕಾರದ ಸಾಧನೆಗಳು ಜನರ ನಿರೀಕ್ಷೆಗಳನ್ನು ಮೀರಿದೆ ಎಂದು ಹೇಳಿದರು. ಭಾರತವು ಹಿಂದೆ ಭ್ರಷ್ಟಾಚಾರದಿಂದ ಕೂಡಿದ ದುರ್ಬಲ ಆರ್ಥಿಕತೆಯಿಂದ ಕೂಡಿತ್ತು.ಆದರೆ ಇಂದು ಅದು ವಿಶ್ವದ ಅಗ್ರ ಐದು ಆರ್ಥಿಕತೆಗಳಲ್ಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಕೆಲವರಿಗೆ ಮಾತ್ರ ತಲುಪುತ್ತಿದ್ದವು, ಇಂದು ಸರ್ಕಾರ ಅಂತ್ಯೋದಯ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಅಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಕಟ್ಟಕಡೆಯ ವ್ಯಕ್ತಿಯ ಉನ್ನತಿಗೆ ಸರ್ಕಾರ ಬದ್ಧವಾಗಿದೆ.ಶೇ 27 ಜನರನ್ನು ಬಡತನದಿಂದ ಮೇಲೆತ್ತಿರುವ ನಮ್ಮ ಪ್ರಯತ್ನಗಳ ರಹಸ್ಯ ಇಲ್ಲಿದೆ ಎಂದು ಅವರು ಹೇಳಿದರು. ಸೇವೆಯ ಪ್ರಜ್ಞೆ, ದೊಡ್ಡ ಆಲೋಚನೆಗಳು, ಉತ್ತಮ ಆಡಳಿತ, ತಂತ್ರಜ್ಞಾನದ ಒಳಹರಿವು, ಮತ್ತು ವಿತರಣಾ ಕಾರ್ಯವಿಧಾನದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ನಿರ್ಮಿಸುವುದು, ಸಾರ್ವಜನಿಕ ಸೇವೆಗಳನ್ನು ಕೊನೆಯ ಹಂತದವರೆಗೆ ತಲುಪುವಂತೆ ಮಾಡುವುದು ಖಾತ್ರಿಪಡಿಸುವ ವಿಷಯಗಳಾಗಿವೆ.

ಈ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಕರು ನಿರ್ಣಾಯಕ ಪಾತ್ರವನ್ನು ವಹಿಸಬೇಕು ಎಂದು ಪ್ರಧಾನಿ ಹೇಳಿರುವುದನ್ನು ಪುನರುಚ್ಚರಿಸಿದ ಸಚಿವರು ಈ ನಿಟ್ಟಿನಲ್ಲಿ, ಭಾರತವು ಇಂದು ಸುಮಾರು ಒಂದು ಲಕ್ಷ ಸ್ಟಾರ್ಟ್‌ಅಪ್‌ಗಳು ಮತ್ತು ನೂರಕ್ಕೂ ಹೆಚ್ಚು ಯುನಿಕಾರ್ನ್‌ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸುವ ವಿಪಕ್ಷಗಳ ನಿಲುವು ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವದ ನೀತಿಗೆ ಅವಮಾನ: ಅನುರಾಗ್ ಠಾಕೂರ್

ಒಂದು ಕಡೆ ಹರ್ ಘರ್ ತಿರಂಗಾಕ್ಕಾಗಿ ಪ್ರಧಾನಿಯವರ ಕರೆಗೆ ದೇಶವು ಉತ್ತರಿಸಿದರೆ, ಅದೇ ತ್ರಿವರ್ಣವನ್ನು ಇತರ ದೇಶಗಳ ವಿದ್ಯಾರ್ಥಿಗಳು ಆಪರೇಷನ್ ಗಂಗಾ ಕಾರ್ಯಾಚರಣೆಯ ಸಮಯದಲ್ಲಿ ಸಂಘರ್ಷದ ವಲಯದಿಂದ ಹೊರಬರಲು ಬಳಸಿದರು. ಸಮೀಕ್ಷೆಗಳು ಅವರನ್ನು ಅತ್ಯಂತ ಜನಪ್ರಿಯ ನಾಯಕ ಎಂದು ಕರೆದಿದ್ದರೂ, ಪ್ರಧಾನಿ ಮೋದಿ, ತ್ರಿವರ್ಣ ಧ್ವಜವನ್ನು ವಿಶ್ವದ ಪ್ರಬಲ ಧ್ವಜವನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:11 pm, Sat, 27 May 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?