AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮೋದಿಯಿಂದ 64ನೇ ಮನ್ ಕಿ ಬಾತ್, ವಿಶೇಷತೆ ಏನು ಗೊತ್ತಾ?

ನವದೆಹಲಿ: ಕೊರೊನಾ ತಾಯ್ನಾಡು ಚೀನಾದಿಂದ ಇದೀಗ ಇಡೀ ಜಗತ್ತೇ ಸಂಕಷ್ಟದಲ್ಲಿ ಸಿಲುಕಿ ಒದ್ದಾಡುತ್ತಿದೆ. ಅದರಲ್ಲೂ ಭಾರತದ ಪರಿಸ್ಥಿತಿ ದಿನೇ ದಿನೆ ಬಿಗಡಾಯಿಸುತ್ತಿದ್ದು, ಮತ್ತೆ ಲಾಕ್​ಡೌನ್ ಮುಂದುವರಿದರೆ ಬಡವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ದೇಶದ ದೊರೆ ಪಿಎಂ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ‘ಮನ್ ಕಿ ಬಾತ್’ನ 64ನೇ ಎಪಿಸೋಡ್​ಗೆ ಕೌಂಟ್​ಡೌನ್ ಶುರುವಾಗಿದೆ. ಇಂದು ಮತ್ತೆ ಪ್ರಜೆಗಳ ಎದುರು ಪ್ರಧಾನಿ ಹಾಜರ್: ಯೆಸ್, ದೇಶದಲ್ಲಿ ಲಾಕ್​ಡೌನ್ ಘೋಷಣೆಯಾಗಿ ಬರೋಬ್ಬರಿ 1 ತಿಂಗಳೇ […]

ಇಂದು ಮೋದಿಯಿಂದ 64ನೇ ಮನ್ ಕಿ ಬಾತ್, ವಿಶೇಷತೆ ಏನು ಗೊತ್ತಾ?
ಸಾಧು ಶ್ರೀನಾಥ್​
|

Updated on: Apr 26, 2020 | 6:38 AM

Share

ನವದೆಹಲಿ: ಕೊರೊನಾ ತಾಯ್ನಾಡು ಚೀನಾದಿಂದ ಇದೀಗ ಇಡೀ ಜಗತ್ತೇ ಸಂಕಷ್ಟದಲ್ಲಿ ಸಿಲುಕಿ ಒದ್ದಾಡುತ್ತಿದೆ. ಅದರಲ್ಲೂ ಭಾರತದ ಪರಿಸ್ಥಿತಿ ದಿನೇ ದಿನೆ ಬಿಗಡಾಯಿಸುತ್ತಿದ್ದು, ಮತ್ತೆ ಲಾಕ್​ಡೌನ್ ಮುಂದುವರಿದರೆ ಬಡವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ದೇಶದ ದೊರೆ ಪಿಎಂ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ‘ಮನ್ ಕಿ ಬಾತ್’ನ 64ನೇ ಎಪಿಸೋಡ್​ಗೆ ಕೌಂಟ್​ಡೌನ್ ಶುರುವಾಗಿದೆ.

ಇಂದು ಮತ್ತೆ ಪ್ರಜೆಗಳ ಎದುರು ಪ್ರಧಾನಿ ಹಾಜರ್: ಯೆಸ್, ದೇಶದಲ್ಲಿ ಲಾಕ್​ಡೌನ್ ಘೋಷಣೆಯಾಗಿ ಬರೋಬ್ಬರಿ 1 ತಿಂಗಳೇ ಕಳೆದಿದೆ. ಒಂದ್ಕಡೆ ಆರ್ಥಿಕ ಸ್ಥಿತಿ ಮೇಲೆ ಇದು ಭಾರಿ ಪರಿಣಾಮ ಬೀರಿದ್ರೆ, ಮತ್ತೊಂದ್ಕಡೆ ಜನ ಲಾಕ್​ಡೌನ್ ವಿಸ್ತರಣೆ ಆತಂಕದಲ್ಲೇ ದಿನದೂಡ್ತಿದ್ದಾರೆ. ಇಷ್ಟೆಲ್ಲದರ ಮಧ್ಯೆ ಪ್ರಧಾನಿ ಮೋದಿ ದೇಶದ ಜನರಲ್ಲಿ ಆಶಾಭಾವನೆ ಹಾಗೂ ಭರವಸೆ ತುಂಬುವ ಕೆಲಸ ಮಾಡ್ತಾನೇ ಬಂದಿದ್ದಾರೆ.

ಲಾಕ್​ಡೌನ್ ಘೋಷಣೆಯಾದ ನಂತರ ಹಲವಾರು ಬಾರಿ ದೇಶದ ಜನತೆಯನ್ನುದ್ದೇಶಿಸಿ ಚರ್ಚಿಸಿದ್ದಾರೆ. ಇದು ಪ್ರಧಾನಿ ಮೋದಿ ಮನ್‌ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ‘ಮನ್ ಕಿ ಬಾತ್’ನ 64ನೇ ಎಪಿಸೋಡ್ ಆಗಿದ್ದು, ಲಾಕ್‌ಡೌನ್ ಬಳಿಕ ಇದು ಎರಡನೇಯದ್ದಾಗಿದೆ. ಹಾಗಾದ್ರೆ ಇಂದು ಪ್ರಧಾನಿ ಚರ್ಚಿಸಬಹುದಾದ ವಿಚಾರಗಳನ್ನ ನೋಡೋದಾದ್ರೆ.

ಲಾಕ್​ಡೌನ್ ಮುಂದುವರಿಕೆ? ಲಾಕ್​ಡೌನ್ ಹಿನ್ನೆಲೆಯಲ್ಲಿ ಜನರಿಗೆ ಎದುರಾಗುತ್ತಿರುವ ಕಷ್ಟಗಳ ಬಗ್ಗೆ ಬೆಳಕು ಚೆಲ್ಲುವ ಸಾಧ್ಯತೆಯಿದೆ. ಹಾಗೇ ಮತ್ತೊಂದು ಅವಧಿಗೂ ಲಾಕ್​ಡೌನ್ ಮುಂದುವರಿಯುತ್ತಾ ಅನ್ನೋದರ ಬಗ್ಗೆ ಪ್ರಧಾನಿ ಮಾತನಾಡಬಹುದು. ಇನ್ನೊಂದು ಕಡೆ ಲಾಕ್​ಡೌನ್ ಹಿನ್ನೆಲೆ ಜಾರಿಯಲ್ಲಿರುವ ನಿಯಮಗಳಲ್ಲಿ ಮತ್ತಷ್ಟು ಸಡಿಲಿಕೆ ಮಾಡುವ ಸಾಧ್ಯತೆ ಇದೆ.

ಅಕಸ್ಮಾತ್ ಇವತ್ತು ಲಾಕ್​ಡೌನ್ ಭವಿಷ್ಯ ನಿರ್ಧಾರವಾಗದಿದ್ದರೂ, ನಾಳಿನ ಸಿಎಂಗಳ ಸಭೆಯಲ್ಲಿ ಪಕ್ಕಾ ಆಗಲಿದೆ. ಈ ಮಧ್ಯೆ ‘ಕೊರೊನಾ ವಾರಿಯರ್ಸ್’ ಬಗ್ಗೆಯೂ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಒಟ್ನಲ್ಲಿ ಇಡೀ ದೇಶದ ಗಮನ ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ‘ಮನ್ ಕಿ ಬಾತ್’ ಮೇಲೆ ನೆಟ್ಟಿದೆ. ಪ್ರಧಾನಿ ಯಾವೆಲ್ಲಾ ವಿಚಾರ ಪ್ರಸ್ತಾಪಿಸಲಿದ್ದಾರೆ. ಮತ್ತೆ ಲಾಕ್​ಡೌನ್ ಮುಂದುವರಿಸುತ್ತಾರಾ..? ಇಲ್ಲ ಲಾಕ್​ಡೌನ್​ಗೆ ಅಂತ್ಯ ಹಾಡಲಿದ್ದಾರಾ ಅನ್ನೋದನ್ನ ಕಾದು ನೋಡಬೇಕಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ