AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಪ್ಟೊಕರೆನ್ಸಿ ಮೂಲಕ ಅಕ್ರಮ ವಹಿವಾಟು, ಉಗ್ರರಿಗೆ ಹಣ ಒದಗಿಸುವ ಮಾರ್ಗ ಬಂದ್ ಮಾಡುವ ಬಗ್ಗೆ ಪ್ರಧಾನಿ ಮೋದಿ ಚರ್ಚೆ

Narendra Modi: ಆರ್‌ಬಿಐ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಕೇಂದ್ರ ಗೃಹ ಇಲಾಖೆ ಹಿರಿಯ ಅಧಿಕಾರಿಗಳು, ತಜ್ಞರ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಕ್ರಿಪ್ಟೋ ಕರೆನ್ಸಿ ಸಂಬಂಧಿತ ಸಮಸ್ಯೆಗಳ ಬಗ್ಗೆ ಮೋದಿ ಸಭೆ ಮಾಡಿದ್ದಾರೆ.

ಕ್ರಿಪ್ಟೊಕರೆನ್ಸಿ ಮೂಲಕ ಅಕ್ರಮ ವಹಿವಾಟು, ಉಗ್ರರಿಗೆ ಹಣ ಒದಗಿಸುವ ಮಾರ್ಗ ಬಂದ್ ಮಾಡುವ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: ganapathi bhat|

Updated on: Nov 13, 2021 | 10:36 PM

Share

ದೆಹಲಿ: ಬಿಟ್ ​ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನವೆಂಬರ್ 13) ಮಹತ್ವದ ಸಭೆ ನಡೆಸಿದ್ದಾರೆ. ಅನಿಯಂತ್ರಿತ ಕ್ರಿಪ್ಟೋ ಕರೆನ್ಸಿ ಮಾರ್ಕೆಟ್‌ನಿಂದ ಆಗುವ ಪರಿಣಾಮ, ಕ್ರಿಪ್ಟೋ ಕರೆನ್ಸಿ ಮೂಲಕ ಅಕ್ರಮ ಹಣದ ವಹಿವಾಟು ಹಾಗೂ ಉಗ್ರರಿಗೆ ಹಣ ಒದಗಿಸುವ ಮಾರ್ಗ ಬಂದ್ ಬಗ್ಗೆ ಚರ್ಚೆ ನಡೆಸಲಾಗಿದೆ. ಕ್ರಿಪ್ಟೋ ಕರೆನ್ಸಿ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಸಂಬಂಧ ಅಪಾಯ ಎದುರಾಗುವ ಮುನ್ನ ಎಚ್ಚೆತ್ತುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ.

ಕ್ರಿಪ್ಟೋ ಕರೆನ್ಸಿ ವಹಿವಾಟು ಬಗ್ಗೆ ಕೇಂದ್ರ ಸರ್ಕಾರ ಹದ್ದಿನ ಕಣ್ಣಿಡಲಿದೆ. ತಜ್ಞರ ಜತೆ ನಿರಂತರ ಸಂಪರ್ಕದಲ್ಲಿದ್ದು ವಹಿವಾಟಿನ ಬಗ್ಗೆ ನಿಗಾ ವಹಿಸಲಾಗುವ ಬಗ್ಗೆ ಚರ್ಚೆ ಮಾಡಲಾಗಿದೆ. ಕ್ರಿಪ್ಟೋ ಕರೆನ್ಸಿ ವಹಿವಾಟು ದೇಶದ ಗಡಿ ಮೀರಿದ ವ್ಯವಸ್ಥೆ ಆಗಿದೆ. ಇದಕ್ಕೆ ಜಾಗತಿಕ, ಸಾಮೂಹಿಕ ಕಾರ್ಯತಂತ್ರಗಳ ಅಗತ್ಯ ಇದೆ. ಈ ಬಗ್ಗೆ ಪ್ರಧಾನಿ ನೇತೃತ್ವದ ಸಭೆಯಲ್ಲಿ ಮಹತ್ವದ ಚರ್ಚೆ ಮಾಡಲಾಗಿದೆ.

ಆರ್‌ಬಿಐ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಕೇಂದ್ರ ಗೃಹ ಇಲಾಖೆ ಹಿರಿಯ ಅಧಿಕಾರಿಗಳು, ತಜ್ಞರ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಕ್ರಿಪ್ಟೋ ಕರೆನ್ಸಿ ಸಂಬಂಧಿತ ಸಮಸ್ಯೆಗಳ ಬಗ್ಗೆ ಮೋದಿ ಸಭೆ ಮಾಡಿದ್ದಾರೆ.

ಮತ್ತೊಂದೆಡೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾರನ್ನು ಜಗದೀಶ್ ಶೆಟ್ಟರ್ ಭೇಟಿಯಾಗಿದ್ದಾರೆ. ದೆಹಲಿಯ ಜೆ.ಪಿ. ನಡ್ಡಾ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಗಿದೆ. ಬಿಟ್‌ ಕಾಯಿನ್ ಕೇಸ್‌, ಪ್ರಸಕ್ತ ರಾಜಕೀಯ ವಿಚಾರ ಬಗ್ಗೆ ಚರ್ಚೆ ಮಾಡಲಾಗಿದೆ. ನಿನ್ನೆಯೇ ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ನಡ್ಡಾ ಭೇಟಿ ಮಾಡಿದ್ದಾರೆ.

ಬಿಟ್ ಕಾಯಿನ್ ಹಗರಣದ ಬಗ್ಗೆ ರಾಹುಲ್ ಗಾಂಧಿ ಟೀಕೆ ಬಿಟ್‌ಕಾಯಿನ್ ಹಗರಣ ಬಹಳ ದೊಡ್ಡದು. ಹಗರಣ ಮುಚ್ಚಿಡುತ್ತಿರುವುದು ಇನ್ನೂ ದೊಡ್ಡದು. ಯಾರದೋ ಹುಸಿ ವರ್ಚಸ್ಸನ್ನು ಮುಚ್ಚಿಡುವಂಥದ್ದು ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ. ಟ್ವೀಟ್ ಮೂಲಕ ಪ್ರಕರಣದ ಬಗ್ಗೆ ಕುಟುಕಿದ್ದಾರೆ.

ಇದನ್ನೂ ಓದಿ: Bitcoin Case: ಡ್ರಗ್​ ಅಡಿಕ್ಟ್​​​ ಮಾತಿಗೆ ಇಷ್ಟು ಪ್ರಾಮುಖ್ಯತೆ ಬೇಕಾ? ಬಿಟ್​ಕಾಯಿನ್ ಪ್ರಕರಣದ ಬಗ್ಗೆ ಡಾ. ಸುಧಾಕರ್ ಸುದ್ದಿಗೋಷ್ಠಿ

ಇದನ್ನೂ ಓದಿ: ಬಿಟ್​ಕಾಯಿನ್ ಹಗರಣ ಆರೋಪದ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಸ್ಪಷ್ಟನೆ; ವಿವರ ಇಲ್ಲಿದೆ

ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ