AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ; ಒಟ್ಟಿಗೇ ಊಟ ಮಾಡಿದ ಅಮ್ಮ-ಮಗ

ಜನರು ನೀಡುತ್ತಿರುವ ಬೆಂಬಲ, ಸಹಕಾರಕ್ಕೆ ನಾನು ವಿಧೇಯನಾಗಿರುತ್ತೇನೆ. ಅಪಾರ ಸಂಖ್ಯೆಯ ಜನರು ಬೆಂಬಲ ನೀಡಿದಾಗ ನಮ್ಮಲ್ಲಿ ಕೆಲಸ ಮಾಡುವ ಉತ್ಸಾಹವೂ ಹೆಚ್ಚಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ಗುಜರಾತ್​​ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ; ಒಟ್ಟಿಗೇ ಊಟ ಮಾಡಿದ ಅಮ್ಮ-ಮಗ
ತಾಯಿಯೊಂದಿಗೆ ಊಟ ಮಾಡಿದ ಪ್ರಧಾನಿ ಮೋದಿ
TV9 Web
| Edited By: |

Updated on:Mar 12, 2022 | 10:23 AM

Share

ಗುಜರಾತ್​ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ನಿನ್ನೆ ತಮ್ಮ ತಾಯಿಯನ್ನು ಭೇಟಿಯಾಗಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದು, ಅದರಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಗುಜರಾತ್​ಗೆ ತೆರಳಿದ್ದಾರೆ. ಇದು ಅವರ ತವರು ರಾಜ್ಯವಾಗಿದ್ದು, ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನಿನ್ನೆ ಅಹ್ಮದಾಬಾದ್​ ಏರ್​​ಪೋರ್ಟ್​​ನಿಂದ ಗಾಂಧಿನಗರದಲ್ಲಿರುವ ಕಮಲಂ ಬಿಜೆಪಿ ಪ್ರಧಾನ ಕಚೇರಿಯವರೆಗೆ ರೋಡ್​ ಶೋ ನಡೆಸಿದ ಬಳಿಕ ಸಂಜೆ ವೇಳೆ ತಮ್ಮ ತಾಯಿ ಹೀರಾಬೆನ್ (Heeraben)​ ಇದ್ದ ಮನೆಗೆ ಹೋಗಿ, ಅವರ ಆಶೀರ್ವಾದ ಪಡೆದಿದ್ದಾರೆ. ಅಮ್ಮನೊಂದಿಗೆ ಕುಳಿತು ಊಟ ಮಾಡಿದ್ದಾರೆ. ಇತ್ತೀಚೆಗೆ ಸುಷ್ಮಾ ಸ್ವರಾಜ್​ ಜನ್ಮ ದಿನದಂದು ಪ್ರಧಾನಿ ಮೋದಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಹಳೇ ಘಟನೆಯೊಂದರ ಮೆಲುಕು ಹಾಕಿದ್ದರು.

ಅದಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅಹ್ಮದಾಬಾದ್​​ನಲ್ಲಿ ಗುಜರಾತ್​ ಪಂಚಾಯತ್​ ಮಹಾಸಮ್ಮೇಳನದಲ್ಲಿ ಭಾಷಣ ಮಾಡಿದರು. ಈ ವೇಳೆ ಮಹಾತ್ಮ ಗಾಂಧಿ ಮತ್ತು ಸರ್ದಾರ್​ ವಲ್ಲಭಬಾಯಿ ಪಟೇಲ್​ ಉಲ್ಲೇಖ ಮಾಡಿದ ಅವರು, ಮಹಾತ್ಮ ಗಾಂಧಿ ಯಾವಾಗಲೂ ಗ್ರಾಮೀಣ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದರು. ಹಳ್ಳಿಗಳು ಸ್ವಾವಲಂಬಿಯಾಗಬೇಕು ಎಂಬುದು ಅವರ ಪರಿಕಲ್ಪನೆಯಾಗಿತ್ತು. ನಾವಿಂದು ಗ್ರಾಮೀಣ ವಿಕಾಸದ ಮೂಲಕ ಬಾಪು ಕನಸನ್ನು ನನಸು ಮಾಡಿದ್ದೇವೆ ಎಂದು ಹೇಳಿದರು. ಅದಕ್ಕೂ ಮೊದಲು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದ ಪ್ರಧಾನಿ ಮೋದಿ, ಇನ್ನಷ್ಟು ಪರಿಣಾಮಕಾರಿಯಾಗಿ ಜನಸೇವೆ ಮಾಡುವ ವಿಧಾನಗಳ ಬಗ್ಗೆ ಚರ್ಚಿಸಿದರು.

ಜನರು ನೀಡುತ್ತಿರುವ ಬೆಂಬಲ, ಸಹಕಾರಕ್ಕೆ ನಾನು ವಿಧೇಯನಾಗಿರುತ್ತೇನೆ. ಅಪಾರ ಸಂಖ್ಯೆಯ ಜನರು ಬೆಂಬಲ ನೀಡಿದಾಗ ನಮ್ಮಲ್ಲಿ ಕೆಲಸ ಮಾಡುವ ಉತ್ಸಾಹವೂ ಹೆಚ್ಚಾಗುತ್ತದೆ ಎಂದು ಮೋದಿ ಹೇಳಿದ್ದಾರೆ. ಗುಜರಾತ್​ನಲ್ಲಿ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಭೇಟಿ ಅತ್ಯಂತ ಮಹತ್ವ ಎನ್ನಿಸಿದೆ. ಈಗಷ್ಟೇ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಉತ್ತರಪ್ರದೇಶ, ಉತ್ತರಾಖಂಡ್​, ಗೋವಾ, ಮಣಿಪುರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: ರಿಸರ್ವ್​ ಬ್ಯಾಂಕ್​ಲ್ಲಿ ಖಾತೆ ತೆರೆದು ಲಾಭ ಗಳಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಉಪಯುಕ್ತ ಮಾಹಿತಿ

Published On - 7:41 am, Sat, 12 March 22

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು