AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ; ಒಟ್ಟಿಗೇ ಊಟ ಮಾಡಿದ ಅಮ್ಮ-ಮಗ

ಜನರು ನೀಡುತ್ತಿರುವ ಬೆಂಬಲ, ಸಹಕಾರಕ್ಕೆ ನಾನು ವಿಧೇಯನಾಗಿರುತ್ತೇನೆ. ಅಪಾರ ಸಂಖ್ಯೆಯ ಜನರು ಬೆಂಬಲ ನೀಡಿದಾಗ ನಮ್ಮಲ್ಲಿ ಕೆಲಸ ಮಾಡುವ ಉತ್ಸಾಹವೂ ಹೆಚ್ಚಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ಗುಜರಾತ್​​ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ; ಒಟ್ಟಿಗೇ ಊಟ ಮಾಡಿದ ಅಮ್ಮ-ಮಗ
ತಾಯಿಯೊಂದಿಗೆ ಊಟ ಮಾಡಿದ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Mar 12, 2022 | 10:23 AM

ಗುಜರಾತ್​ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ನಿನ್ನೆ ತಮ್ಮ ತಾಯಿಯನ್ನು ಭೇಟಿಯಾಗಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದು, ಅದರಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಗುಜರಾತ್​ಗೆ ತೆರಳಿದ್ದಾರೆ. ಇದು ಅವರ ತವರು ರಾಜ್ಯವಾಗಿದ್ದು, ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನಿನ್ನೆ ಅಹ್ಮದಾಬಾದ್​ ಏರ್​​ಪೋರ್ಟ್​​ನಿಂದ ಗಾಂಧಿನಗರದಲ್ಲಿರುವ ಕಮಲಂ ಬಿಜೆಪಿ ಪ್ರಧಾನ ಕಚೇರಿಯವರೆಗೆ ರೋಡ್​ ಶೋ ನಡೆಸಿದ ಬಳಿಕ ಸಂಜೆ ವೇಳೆ ತಮ್ಮ ತಾಯಿ ಹೀರಾಬೆನ್ (Heeraben)​ ಇದ್ದ ಮನೆಗೆ ಹೋಗಿ, ಅವರ ಆಶೀರ್ವಾದ ಪಡೆದಿದ್ದಾರೆ. ಅಮ್ಮನೊಂದಿಗೆ ಕುಳಿತು ಊಟ ಮಾಡಿದ್ದಾರೆ. ಇತ್ತೀಚೆಗೆ ಸುಷ್ಮಾ ಸ್ವರಾಜ್​ ಜನ್ಮ ದಿನದಂದು ಪ್ರಧಾನಿ ಮೋದಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಹಳೇ ಘಟನೆಯೊಂದರ ಮೆಲುಕು ಹಾಕಿದ್ದರು.

ಅದಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅಹ್ಮದಾಬಾದ್​​ನಲ್ಲಿ ಗುಜರಾತ್​ ಪಂಚಾಯತ್​ ಮಹಾಸಮ್ಮೇಳನದಲ್ಲಿ ಭಾಷಣ ಮಾಡಿದರು. ಈ ವೇಳೆ ಮಹಾತ್ಮ ಗಾಂಧಿ ಮತ್ತು ಸರ್ದಾರ್​ ವಲ್ಲಭಬಾಯಿ ಪಟೇಲ್​ ಉಲ್ಲೇಖ ಮಾಡಿದ ಅವರು, ಮಹಾತ್ಮ ಗಾಂಧಿ ಯಾವಾಗಲೂ ಗ್ರಾಮೀಣ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದರು. ಹಳ್ಳಿಗಳು ಸ್ವಾವಲಂಬಿಯಾಗಬೇಕು ಎಂಬುದು ಅವರ ಪರಿಕಲ್ಪನೆಯಾಗಿತ್ತು. ನಾವಿಂದು ಗ್ರಾಮೀಣ ವಿಕಾಸದ ಮೂಲಕ ಬಾಪು ಕನಸನ್ನು ನನಸು ಮಾಡಿದ್ದೇವೆ ಎಂದು ಹೇಳಿದರು. ಅದಕ್ಕೂ ಮೊದಲು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದ ಪ್ರಧಾನಿ ಮೋದಿ, ಇನ್ನಷ್ಟು ಪರಿಣಾಮಕಾರಿಯಾಗಿ ಜನಸೇವೆ ಮಾಡುವ ವಿಧಾನಗಳ ಬಗ್ಗೆ ಚರ್ಚಿಸಿದರು.

ಜನರು ನೀಡುತ್ತಿರುವ ಬೆಂಬಲ, ಸಹಕಾರಕ್ಕೆ ನಾನು ವಿಧೇಯನಾಗಿರುತ್ತೇನೆ. ಅಪಾರ ಸಂಖ್ಯೆಯ ಜನರು ಬೆಂಬಲ ನೀಡಿದಾಗ ನಮ್ಮಲ್ಲಿ ಕೆಲಸ ಮಾಡುವ ಉತ್ಸಾಹವೂ ಹೆಚ್ಚಾಗುತ್ತದೆ ಎಂದು ಮೋದಿ ಹೇಳಿದ್ದಾರೆ. ಗುಜರಾತ್​ನಲ್ಲಿ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಭೇಟಿ ಅತ್ಯಂತ ಮಹತ್ವ ಎನ್ನಿಸಿದೆ. ಈಗಷ್ಟೇ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಉತ್ತರಪ್ರದೇಶ, ಉತ್ತರಾಖಂಡ್​, ಗೋವಾ, ಮಣಿಪುರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: ರಿಸರ್ವ್​ ಬ್ಯಾಂಕ್​ಲ್ಲಿ ಖಾತೆ ತೆರೆದು ಲಾಭ ಗಳಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಉಪಯುಕ್ತ ಮಾಹಿತಿ

Published On - 7:41 am, Sat, 12 March 22

ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್