AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ; ಒಟ್ಟಿಗೇ ಊಟ ಮಾಡಿದ ಅಮ್ಮ-ಮಗ

ಜನರು ನೀಡುತ್ತಿರುವ ಬೆಂಬಲ, ಸಹಕಾರಕ್ಕೆ ನಾನು ವಿಧೇಯನಾಗಿರುತ್ತೇನೆ. ಅಪಾರ ಸಂಖ್ಯೆಯ ಜನರು ಬೆಂಬಲ ನೀಡಿದಾಗ ನಮ್ಮಲ್ಲಿ ಕೆಲಸ ಮಾಡುವ ಉತ್ಸಾಹವೂ ಹೆಚ್ಚಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ಗುಜರಾತ್​​ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ; ಒಟ್ಟಿಗೇ ಊಟ ಮಾಡಿದ ಅಮ್ಮ-ಮಗ
ತಾಯಿಯೊಂದಿಗೆ ಊಟ ಮಾಡಿದ ಪ್ರಧಾನಿ ಮೋದಿ
TV9 Web
| Edited By: |

Updated on:Mar 12, 2022 | 10:23 AM

Share

ಗುಜರಾತ್​ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ನಿನ್ನೆ ತಮ್ಮ ತಾಯಿಯನ್ನು ಭೇಟಿಯಾಗಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದು, ಅದರಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಗುಜರಾತ್​ಗೆ ತೆರಳಿದ್ದಾರೆ. ಇದು ಅವರ ತವರು ರಾಜ್ಯವಾಗಿದ್ದು, ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನಿನ್ನೆ ಅಹ್ಮದಾಬಾದ್​ ಏರ್​​ಪೋರ್ಟ್​​ನಿಂದ ಗಾಂಧಿನಗರದಲ್ಲಿರುವ ಕಮಲಂ ಬಿಜೆಪಿ ಪ್ರಧಾನ ಕಚೇರಿಯವರೆಗೆ ರೋಡ್​ ಶೋ ನಡೆಸಿದ ಬಳಿಕ ಸಂಜೆ ವೇಳೆ ತಮ್ಮ ತಾಯಿ ಹೀರಾಬೆನ್ (Heeraben)​ ಇದ್ದ ಮನೆಗೆ ಹೋಗಿ, ಅವರ ಆಶೀರ್ವಾದ ಪಡೆದಿದ್ದಾರೆ. ಅಮ್ಮನೊಂದಿಗೆ ಕುಳಿತು ಊಟ ಮಾಡಿದ್ದಾರೆ. ಇತ್ತೀಚೆಗೆ ಸುಷ್ಮಾ ಸ್ವರಾಜ್​ ಜನ್ಮ ದಿನದಂದು ಪ್ರಧಾನಿ ಮೋದಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಹಳೇ ಘಟನೆಯೊಂದರ ಮೆಲುಕು ಹಾಕಿದ್ದರು.

ಅದಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅಹ್ಮದಾಬಾದ್​​ನಲ್ಲಿ ಗುಜರಾತ್​ ಪಂಚಾಯತ್​ ಮಹಾಸಮ್ಮೇಳನದಲ್ಲಿ ಭಾಷಣ ಮಾಡಿದರು. ಈ ವೇಳೆ ಮಹಾತ್ಮ ಗಾಂಧಿ ಮತ್ತು ಸರ್ದಾರ್​ ವಲ್ಲಭಬಾಯಿ ಪಟೇಲ್​ ಉಲ್ಲೇಖ ಮಾಡಿದ ಅವರು, ಮಹಾತ್ಮ ಗಾಂಧಿ ಯಾವಾಗಲೂ ಗ್ರಾಮೀಣ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದರು. ಹಳ್ಳಿಗಳು ಸ್ವಾವಲಂಬಿಯಾಗಬೇಕು ಎಂಬುದು ಅವರ ಪರಿಕಲ್ಪನೆಯಾಗಿತ್ತು. ನಾವಿಂದು ಗ್ರಾಮೀಣ ವಿಕಾಸದ ಮೂಲಕ ಬಾಪು ಕನಸನ್ನು ನನಸು ಮಾಡಿದ್ದೇವೆ ಎಂದು ಹೇಳಿದರು. ಅದಕ್ಕೂ ಮೊದಲು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದ ಪ್ರಧಾನಿ ಮೋದಿ, ಇನ್ನಷ್ಟು ಪರಿಣಾಮಕಾರಿಯಾಗಿ ಜನಸೇವೆ ಮಾಡುವ ವಿಧಾನಗಳ ಬಗ್ಗೆ ಚರ್ಚಿಸಿದರು.

ಜನರು ನೀಡುತ್ತಿರುವ ಬೆಂಬಲ, ಸಹಕಾರಕ್ಕೆ ನಾನು ವಿಧೇಯನಾಗಿರುತ್ತೇನೆ. ಅಪಾರ ಸಂಖ್ಯೆಯ ಜನರು ಬೆಂಬಲ ನೀಡಿದಾಗ ನಮ್ಮಲ್ಲಿ ಕೆಲಸ ಮಾಡುವ ಉತ್ಸಾಹವೂ ಹೆಚ್ಚಾಗುತ್ತದೆ ಎಂದು ಮೋದಿ ಹೇಳಿದ್ದಾರೆ. ಗುಜರಾತ್​ನಲ್ಲಿ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಭೇಟಿ ಅತ್ಯಂತ ಮಹತ್ವ ಎನ್ನಿಸಿದೆ. ಈಗಷ್ಟೇ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಉತ್ತರಪ್ರದೇಶ, ಉತ್ತರಾಖಂಡ್​, ಗೋವಾ, ಮಣಿಪುರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: ರಿಸರ್ವ್​ ಬ್ಯಾಂಕ್​ಲ್ಲಿ ಖಾತೆ ತೆರೆದು ಲಾಭ ಗಳಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಉಪಯುಕ್ತ ಮಾಹಿತಿ

Published On - 7:41 am, Sat, 12 March 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು