AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್​​ಗೆ ಪ್ರಧಾನಿ ಮೋದಿ ಅಭಿನಂದನೆ

ಜಗದೀಪ್ ಧನ್ಖರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಎನ್​ಡಿಎ ಅಭ್ಯರ್ಥಿಯನ್ನು ಘೋಷಿಸಿದೆ. ಬಿಜೆಪಿ ನಾಯಕರಾದ ಜೆಪಿ ನಡ್ಡಾ ಮತ್ತು ನರೇಂದ್ರ ಮೋದಿಯವರ ನಿರ್ಧಾರವೇ ಅಂತಿಮವೆಂದು ಹೇಳಿದ್ದ ಎನ್​ಡಿಎ ಬಣಗಳು ಉಪರಾಷ್ಟ್ರಪತಿ ಆಯ್ಕೆಯ ಜವಾಬ್ದಾರಿಯನ್ನು ಬಿಜೆಪಿಗೆ ನೀಡಿದ್ದವು. ಅದರಂತೆ ಬಿಜೆಪಿ ಪಕ್ಷದ ಸಂಸದೀಯ ಮಂಡಳಿಯ ಸಭೆಯ ನಂತರ ತಮಿಳುನಾಡಿನ ಬಿಜೆಪಿಯ ಹಿರಿಯ ನಾಯಕ ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದರು.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್​​ಗೆ ಪ್ರಧಾನಿ ಮೋದಿ ಅಭಿನಂದನೆ
Modi Meets Cp Radhakrishnan
ಸುಷ್ಮಾ ಚಕ್ರೆ
|

Updated on: Aug 18, 2025 | 4:32 PM

Share

ನವದೆಹಲಿ, ಆಗಸ್ಟ್ 18: ಜಗದೀಪ್ ಧನ್ಖರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ತಮಿಳುನಾಡಿನ ಬಿಜೆಪಿ ನಾಯಕ ಸಿ.ಪಿ. ರಾಧಾಕೃಷ್ಣನ್ (CP Radhakrishnan) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್‌ಡಿಎಯ ಉಪರಾಷ್ಟ್ರಪತಿ (Vice President) ಅಭ್ಯರ್ಥಿ ಮತ್ತು ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು. ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಮತ್ತು ಪಕ್ಷದ ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ತಮಿಳುನಾಡಿನ ಅನುಭವಿ ಬಿಜೆಪಿ ನಾಯಕ ರಾಧಾಕೃಷ್ಣನ್ ಅವರನ್ನು ಭಾನುವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಹೆಸರಿಸಿದ್ದರು.

ರಾಧಾಕೃಷ್ಣನ್ ಅವರೊಂದಿಗಿನ ಸಭೆಯ ನಂತರ ಪ್ರಧಾನಿ ಮೋದಿ ಅವರು ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. “ತಿರು ಸಿಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದೆ. ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸಿದೆ. ಅವರ ದೀರ್ಘ ವರ್ಷಗಳ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಅವರು ಯಾವಾಗಲೂ ಪ್ರದರ್ಶಿಸಿದ ಅದೇ ಸಮರ್ಪಣೆ ಮತ್ತು ಸಂಕಲ್ಪದೊಂದಿಗೆ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆಗೆ ಸಿಪಿ ರಾಧಾಕೃಷ್ಣನ್​​ ಎನ್​ಡಿಎ ಅಭ್ಯರ್ಥಿ

ಸಿ.ಪಿ ರಾಧಾಕೃಷ್ಣನ್ ಆಗಸ್ಟ್ 20ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಮಂಗಳವಾರ ನಡೆಯಲಿರುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅವರನ್ನು ಸನ್ಮಾನಿಸುವ ನಿರೀಕ್ಷೆಯಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಜುಲೈ 21ರಂದು ಜಗದೀಪ್ ಧನ್ಖರ್ ಅವರ ದಿಢೀರ್ ರಾಜೀನಾಮೆಯ ನಂತರ ಉಪರಾಷ್ಟ್ರಪತಿ ಸ್ಥಾನ ತೆರವಾಗಿತ್ತು. ಇದರಿಂದ ಚುನಾವಣೆ ಅನಿವಾರ್ಯವಾಗಿದೆ.

ಎನ್​ಡಿಎ ಉಪರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಘೋಷಿಸಿರುವಂತೆ ವಿರೋಧ ಪಕ್ಷವೂ ತನ್ನ ಅಭ್ಯರ್ಥಿಯನ್ನು ಘೋಷಿಸಿದರೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: CP Radhakrishnan: ಎನ್​​ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಯಾರು?

ಸಿ.ಪಿ ರಾಧಾಕೃಷ್ಣನ್ ಯಾರು?:

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷರಾದ ಸಿ.ಪಿ ರಾಧಾಕೃಷ್ಣನ್ ಅವರು ಪಕ್ಷವನ್ನು ಅದರ ಆರಂಭಿಕ ವರ್ಷಗಳಿಂದಲೂ ಬೆಂಬಲಿಸುತ್ತಿದ್ದಾರೆ. 1998 ಮತ್ತು 2004ರ ನಡುವೆ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರು. ರಾಧಾಕೃಷ್ಣನ್ ತಮಿಳುನಾಡಿನಲ್ಲಿ ಪ್ರಭಾವಿ ಗೌಂಡರ್ ಜಾತಿಗೆ ಸೇರಿದವರು. ಇದು ಒಬಿಸಿ ಸಮುದಾಯವಾಗಿದೆ. ಕೊಯಮತ್ತೂರಿನ ಮಾಜಿ ಸಂಸದರಾದ ರಾಧಾಕೃಷ್ಣನ್ ಅವರನ್ನು 2023ರಲ್ಲಿ ಜಾರ್ಖಂಡ್ ರಾಜ್ಯಪಾಲರನ್ನಾಗಿ ನೇಮಿಸಲಾಯಿತು. ನಂತರ ಜುಲೈ 2024ರಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ ಅವರನ್ನು ವರ್ಗಾಯಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!