AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್ ಸಮುದಾಯವು ‘ಏಕ ಭಾರತ, ಶ್ರೇಷ್ಠ ಭಾರತ’ದ ಆದರ್ಶಗಳನ್ನು ಒಳಗೊಂಡಿದೆ: ಪ್ರಧಾನಿ ಮೋದಿ

PM Modi | Sikh Delegation: ಸಿಖ್ ನಿಯೋಗವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶ ಮತ್ತು ವಿದೇಶಗಳಲ್ಲಿ ಸಿಖ್ ಸಮುದಾಯದ ಕೊಡುಗೆಯನ್ನು ಶ್ಲಾಘಿಸಿದರು. ಸಿಖ್ ಸಮುದಾಯವು ಏಕ ಭಾರತ, ಶ್ರೇಷ್ಠ ಭಾರತದ ಆದರ್ಶಗಳನ್ನು ಒಳಗೊಂಡಿದೆ ಎಂದ ಪ್ರಧಾನಿ, ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಸ್ವಾತಂತ್ರ್ಯೋತ್ತರ ಭಾರತದಲ್ಲಿ ಸಿಖ್ಖರು ನೀಡಿದ ಕೊಡುಗೆಗಳಿಗಾಗಿ ಇಡೀ ದೇಶವು ಅವರಿಗೆ ಕೃತಜ್ಞವಾಗಿದೆ ಎಂದು ಹೇಳಿದರು.

ಸಿಖ್ ಸಮುದಾಯವು ‘ಏಕ ಭಾರತ, ಶ್ರೇಷ್ಠ ಭಾರತ’ದ ಆದರ್ಶಗಳನ್ನು ಒಳಗೊಂಡಿದೆ: ಪ್ರಧಾನಿ ಮೋದಿ
ಸಿಖ್ ನಿಯೋಗವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ
TV9 Web
| Edited By: |

Updated on:Apr 30, 2022 | 12:40 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಹೊಸದಿಲ್ಲಿಯ ತಮ್ಮ ನಿವಾಸದಲ್ಲಿ ಶುಕ್ರವಾರ ಸಿಖ್ ನಿಯೋಗವನ್ನು (Sikh Delegation) ಭೇಟಿ ಮಾಡಿ ಸಂವಾದ ನಡೆಸಿದರು. ಚಂಡೀಗಢ ವಿಶ್ವವಿದ್ಯಾನಿಲಯದ ಕುಲಪತಿ ಮತ್ತು ಎನ್‌ಐಡಿ ಫೌಂಡೇಶನ್‌ನ ಮುಖ್ಯ ಪೋಷಕರಾದ ಸತ್ನಾಮ್ ಸಿಂಗ್ ಸಂಧು ನೇತೃತ್ವದ 100 ಸದಸ್ಯರ ಸಿಖ್ ನಿಯೋಗ ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಿಯೋಗವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶ ಮತ್ತು ವಿದೇಶಗಳಲ್ಲಿ ಸಿಖ್ ಸಮುದಾಯದ ಕೊಡುಗೆಯನ್ನು ಶ್ಲಾಘಿಸಿದರು. ಸಿಖ್ ಸಮುದಾಯವು ಏಕ ಭಾರತ, ಶ್ರೇಷ್ಠ ಭಾರತದ ಆದರ್ಶಗಳನ್ನು ಒಳಗೊಂಡಿದೆ ಎಂದ ಪ್ರಧಾನಿ, ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಸ್ವಾತಂತ್ರ್ಯೋತ್ತರ ಭಾರತದಲ್ಲಿ ಸಿಖ್ಖರು ನೀಡಿದ ಕೊಡುಗೆಗಳಿಗಾಗಿ ಇಡೀ ದೇಶವು ಅವರಿಗೆ ಕೃತಜ್ಞವಾಗಿದೆ ಎಂದು ಹೇಳಿದರು. ವಿಶೇಷವೆಂದರೆ ಪ್ರಧಾನಿ ಮೋದಿ ಈ ಭೇಟಿಯ ಸಂದರ್ಭದಲ್ಲಿ ಕೆಂಪು ಸಿಖ್ ಪೇಟವನ್ನು ಧರಿಸಿದ್ದರು.

ಕಾಲಕಾಲಕ್ಕೆ ಹಲವಾರು ವಿಷಯಗಳ ಕುರಿತು ಸಿಖ್ ಸಮುದಾಯದಿಂದ ಸಲಹೆಗಳನ್ನು ಪಡೆಯುವ ಅದೃಷ್ಟ ನನಗೆ ಸಿಕ್ಕಿದೆ ಎಂದ ಪ್ರಧಾನಿ, ಆ ಸಲಹೆಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುವುದಾಗಿ ಹೇಳಿದರು. ‘‘ಗುರುದ್ವಾರಗಳಿಗೆ ಹೋಗುವುದು, ಸೇವೆಯಲ್ಲಿ ಸಮಯ ಕಳೆಯುವುದು, ಸಿಖ್ ಕುಟುಂಬಗಳ ಮನೆಗಳಲ್ಲಿ ಉಳಿಯುವುದು ನನ್ನ ಜೀವನದ ಒಂದು ಭಾಗವಾಗಿದೆ. ಕಾಲಕಾಲಕ್ಕೆ ಪ್ರಧಾನಿ ನಿವಾಸದಲ್ಲಿ ಸಿಖ್ ನಿಯೋಗಗಳನ್ನು ಭೇಟಿ ಮಾಡುವ ಅದೃಷ್ಟ ಸಿಕ್ಕಿದೆ. ನಾನು ಅದಕ್ಕಾಗಿ ಹೆಮ್ಮೆಪಡುತ್ತೇನೆ’’ ಎಂದು ಪ್ರಧಾನಿ ನುಡಿದರು.

ಸಿಖ್ ಸಮುದಾಯವು ಏಕ ಭಾರತ, ಶ್ರೇಷ್ಠ ಭಾರತದ ಆದರ್ಶಗಳನ್ನು ಒಳಗೊಂಡಿದೆ ಎಂದ ಪ್ರಧಾನಿ ಸಮುದಾಯದ ಧೈರ್ಯ, ಪರಾಕ್ರಮ ಮತ್ತು ಶ್ರದ್ಧೆಯು ರಾಷ್ಟ್ರೀಯ ಮನೋಭಾವಕ್ಕೆ ಸಮಾನಾರ್ಥಕವಾಗಿದೆ ಎಂದು ಹೇಳಿದರು.

ಸಿಖ್ ನಿಯೋಗದ ಜತೆಗಿನ ಮಾತುಕತೆಯ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ:

ಇದೇ ವೇಳೆ ಕೊರೊನಾ ಸಾಂಕ್ರಮಿಕದ ಬಗ್ಗೆ ಮಾತನಾಡಿದ ಪ್ರಧಾನಿ, ‘‘ಭಾರತವು ದೊಡ್ಡ ಮಟ್ಟದ ಜನಸಂಖ್ಯೆಯನ್ನು ಹೊಂದಿರುವುದರಿಂದ ಲಸಿಕೆ ನೀಡುವುದು ಸವಾಲಾಗಿತ್ತು. ಆದರೆ ಇಂದು ನಾವು ಅತಿದೊಡ್ಡ ಲಸಿಕೆ ಪೂರೈಕೆದಾರರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದೇವೆ’’ ಎಂದು ಹೇಳಿದರು. ಭಾರತದಲ್ಲಿ ಸ್ಟಾರ್ಟಪ್ ಬೆಳವಣಿಗೆಯ ಬಗ್ಗೆಯೂ ಅವರು ಮಾತನಾಡಿದರು. ಇದೇ ವೇಳೆ ಗುರು ತೇಜ್ ಬಹದ್ದೂರ್ ಅವರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಒಂದು ತಿಂಗಳ ಅವಧಿಯಲ್ಲಿ ಪ್ರಧಾನಿ ಭೇಟಿ ಮಾಡಿದ ಎರಡನೇ ಸಿಖ್ ನಿಯೋಗ ಇದಾಗಿದೆ.

ಇನ್ನೂ ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: PM Modi: ‘ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಬೇಕು’: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ಮೋದಿಯವರ ಜಮ್ಮು- ಕಾಶ್ಮೀರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ; ಭಾರತ ತಿರುಗೇಟು

Published On - 12:40 pm, Sat, 30 April 22

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ