Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಯಿಂದ ಕೊರೊನಾ ಸ್ಥಿತಿ ಪರಿಶೀಲನಾ ಸಭೆ; ಮತ್ತೆ ತ್ರಿಬಲ್​ ಟಿ ಸೂತ್ರ ನೆನಪಿಸಿದ ನರೇಂದ್ರ ಮೋದಿ, ಔಷಧ, ಆಕ್ಸಿಜನ್ ಕೊರತೆ ಬಗ್ಗೆ ಚರ್ಚೆ

ಕಳೆದ ಬಾರಿ ಕೊರೊನಾ ವೈರಸ್​ನ್ನು ನಮ್ಮ ಭಾರತ ಯಶಸ್ವಿಯಾಗಿ ಮಣಿಸಿದೆ. ಕಳೆದ ಬಾರಿ ಕೊರೊನಾ ವಿರುದ್ಧ ಹೋರಾಡಲು ಅಳವಡಿಸಿಕೊಂಡಿದ್ದ ಸಂಕಲ್ಪ ಈ ಬಾರಿಯೂ ಇರಬೇಕು ಎಂದು ಪ್ರಧಾನಿ ಮೋದಿ ತಿಳಿಸಿದರು.

ಪ್ರಧಾನಿಯಿಂದ ಕೊರೊನಾ ಸ್ಥಿತಿ ಪರಿಶೀಲನಾ ಸಭೆ; ಮತ್ತೆ ತ್ರಿಬಲ್​ ಟಿ ಸೂತ್ರ ನೆನಪಿಸಿದ ನರೇಂದ್ರ ಮೋದಿ, ಔಷಧ, ಆಕ್ಸಿಜನ್ ಕೊರತೆ ಬಗ್ಗೆ ಚರ್ಚೆ
ನರೇಂದ್ರ ಮೋದಿ
Follow us
Lakshmi Hegde
|

Updated on:Apr 18, 2021 | 9:58 AM

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ವಿಪರೀತವಾಗಿ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕೊವಿಡ್​ 19 ಕೇಸ್​ಗಳು ಹೆಚ್ಚುತ್ತಿರುವ, ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳು ಮತ್ತು ಲಸಿಕೆ ವಿತರಣೆಯ ಬಗ್ಗೆ ಚರ್ಚಿಸಿ, ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಕೊರೊನಾ ನಿಯಂತ್ರಣಕ್ಕಾಗಿ ಟೆಸ್ಟಿಂಗ್​, ಟ್ರ್ಯಾಕಿಂಗ್​ ಮತ್ತು ಟ್ರೀಟ್​ಮೆಂಟ್​ (ತಪಾಸಣೆ, ಸೋಂಕಿತರ ಸಂಪರ್ಕಿತರನ್ನು ಪತ್ತೆಹಚ್ಚುವುದು ಮತ್ತು ಚಿಕಿತ್ಸೆ)ಗೆ ಪರ್ಯಾಯವಾಗಿ ಇನ್ನೇನೂ ಮಾಡಲು ಸಾಧ್ಯವಿಲ್ಲ ಎಂದು ಸಭೆಯಲ್ಲಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಲಸಿಕೆ ಉತ್ಪಾದನೆ, ವಿತರಣೆಗಾಗಿ ಸಂಪೂರ್ಣವಾಗಿ ಈ ರಾಷ್ಟ್ರದ ಸಾಮರ್ಥ್ಯವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಟೆಸ್ಟಿಂಗ್, ಟ್ರ್ಯಾಕಿಂಗ್​, ಟ್ರೀಟ್​ಮೆಂಟ್​ ಎಂಬ ತ್ರಿಬಲ್ ಟಿ ಸೂತ್ರವನ್ನು ಕಳೆದ ವರ್ಷವೇ ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಪಡಿಸಿದ್ದರು. ಅದನ್ನೇ ಈಗ ಪುನರುಚ್ಚರಿಸಿದ ಅವರು, ಕಳೆದ ಬಾರಿ ಕೊರೊನಾ ವೈರಸ್​ನ್ನು ನಮ್ಮ ಭಾರತ ಯಶಸ್ವಿಯಾಗಿ ಮಣಿಸಿದೆ. ಕಳೆದ ಬಾರಿ ಕೊರೊನಾ ವಿರುದ್ಧ ಹೋರಾಡಲು ಅಳವಡಿಸಿಕೊಂಡಿದ್ದ ಸಂಕಲ್ಪ, ತತ್ವ, ಶಿಸ್ತಿನ ಪ್ರಯೋಗವನ್ನು ಈ ಬಾರಿಯೂ ಮಾಡಬೇಕು ಎಂದು ಹೇಳಿದರು.

ಆಕ್ಸಿಜನ್​, ರೆಮ್​ಡಿಸಿವಿರ್ ಔಷಧ, ವೆಂಟಿಲೇಟರ್​ಗಳ ಕೊರತೆ, ಲಸಿಕೆಯ ಬಗ್ಗೆ ಪ್ರಧಾನಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ವೈದ್ಯಕೀಯ ಆಕ್ಸಿಜನ್​ ಕೊರತೆ ನೀಗಿಸಲು, ಅನುಮೋದಿತ ಆಕ್ಸಿಜನ್​ ಪ್ಲಾಂಟ್​ಗಳ ಅಳವಡಿಕೆ ಕಾರ್ಯವನ್ನು ತ್ವರಿತಗೊಳಿಸಬೇಕು. PM-CARES ಫಂಡ್​ನಿಂದ 32 ರಾಜ್ಯಗಳಲ್ಲಿ ಒಟ್ಟು 162 ಆಕ್ಸಿಜನ್ ಸ್ಥಾವರಗಳನ್ನು ಅಳವಡಿಸಿದ ಬಗ್ಗೆಯೂ ಮೋದಿಯವರ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಸರ್ಕಾರ ಪ್ರಕಟಣೆ ಬಿಡುಗಡೆ ಮಾಡಿದೆ. ಹಾಗೇ, ಔಷಧಗಳ ಕೊರತೆ ನೀಗಿಸಲು ದೇಶದ ಔಷಧ ಉದ್ಯಮದ ಸಂಪೂರ್ಣ ಸಾಮರ್ಥ್ಯ ಬಳಕೆಯಾಗಬೇಕು ಎಂದೂ ಮೋದಿ ಹೇಳಿದ್ದಾರೆ. ಹಾಗೇ, ಎಲ್ಲ ರಾಜ್ಯಗಳ ಸ್ಥಳೀಯ ಆಡಳಿತಗಳು ಆಯಾ ಪ್ರದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪರಸ್ಪರ ಸಹಕಾರದಿಂದ ಕೊವಿಡ್​ 19 ಸಾಂಕ್ರಾಮಿಕದ ವಿರುದ್ಧ ಹೋರಾಡಬೇಕು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಭೀಕರ ಮಹಾಮಾರಿ ನಡುವೆ ವೈದ್ಯರ ನಿರ್ಲಕ್ಷ್ಯ.. ಕೊರೊನಾ ದೃಢವಾಗುತ್ತಿದ್ದಂತೆ ಡಿಸ್ಚಾರ್ಜ್, ಆಸ್ಪತ್ರೆಗಳ ಮುಂದೆ ನರಳಾಟ

ದೆಹಲಿಯಲ್ಲಿ ಆಕ್ಸಿಜನ್​, ರೆಮ್​ಡಿಸಿವಿರ್ ಔಷಧ​​ಗಳ ತೀವ್ರ ಕೊರತೆ: ಆತಂಕ ವ್ಯಕ್ತಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

Published On - 9:56 am, Sun, 18 April 21

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!