AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಯಿಂದ ಕೊರೊನಾ ಸ್ಥಿತಿ ಪರಿಶೀಲನಾ ಸಭೆ; ಮತ್ತೆ ತ್ರಿಬಲ್​ ಟಿ ಸೂತ್ರ ನೆನಪಿಸಿದ ನರೇಂದ್ರ ಮೋದಿ, ಔಷಧ, ಆಕ್ಸಿಜನ್ ಕೊರತೆ ಬಗ್ಗೆ ಚರ್ಚೆ

ಕಳೆದ ಬಾರಿ ಕೊರೊನಾ ವೈರಸ್​ನ್ನು ನಮ್ಮ ಭಾರತ ಯಶಸ್ವಿಯಾಗಿ ಮಣಿಸಿದೆ. ಕಳೆದ ಬಾರಿ ಕೊರೊನಾ ವಿರುದ್ಧ ಹೋರಾಡಲು ಅಳವಡಿಸಿಕೊಂಡಿದ್ದ ಸಂಕಲ್ಪ ಈ ಬಾರಿಯೂ ಇರಬೇಕು ಎಂದು ಪ್ರಧಾನಿ ಮೋದಿ ತಿಳಿಸಿದರು.

ಪ್ರಧಾನಿಯಿಂದ ಕೊರೊನಾ ಸ್ಥಿತಿ ಪರಿಶೀಲನಾ ಸಭೆ; ಮತ್ತೆ ತ್ರಿಬಲ್​ ಟಿ ಸೂತ್ರ ನೆನಪಿಸಿದ ನರೇಂದ್ರ ಮೋದಿ, ಔಷಧ, ಆಕ್ಸಿಜನ್ ಕೊರತೆ ಬಗ್ಗೆ ಚರ್ಚೆ
ನರೇಂದ್ರ ಮೋದಿ
Lakshmi Hegde
|

Updated on:Apr 18, 2021 | 9:58 AM

Share

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ವಿಪರೀತವಾಗಿ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕೊವಿಡ್​ 19 ಕೇಸ್​ಗಳು ಹೆಚ್ಚುತ್ತಿರುವ, ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳು ಮತ್ತು ಲಸಿಕೆ ವಿತರಣೆಯ ಬಗ್ಗೆ ಚರ್ಚಿಸಿ, ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಕೊರೊನಾ ನಿಯಂತ್ರಣಕ್ಕಾಗಿ ಟೆಸ್ಟಿಂಗ್​, ಟ್ರ್ಯಾಕಿಂಗ್​ ಮತ್ತು ಟ್ರೀಟ್​ಮೆಂಟ್​ (ತಪಾಸಣೆ, ಸೋಂಕಿತರ ಸಂಪರ್ಕಿತರನ್ನು ಪತ್ತೆಹಚ್ಚುವುದು ಮತ್ತು ಚಿಕಿತ್ಸೆ)ಗೆ ಪರ್ಯಾಯವಾಗಿ ಇನ್ನೇನೂ ಮಾಡಲು ಸಾಧ್ಯವಿಲ್ಲ ಎಂದು ಸಭೆಯಲ್ಲಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಲಸಿಕೆ ಉತ್ಪಾದನೆ, ವಿತರಣೆಗಾಗಿ ಸಂಪೂರ್ಣವಾಗಿ ಈ ರಾಷ್ಟ್ರದ ಸಾಮರ್ಥ್ಯವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಟೆಸ್ಟಿಂಗ್, ಟ್ರ್ಯಾಕಿಂಗ್​, ಟ್ರೀಟ್​ಮೆಂಟ್​ ಎಂಬ ತ್ರಿಬಲ್ ಟಿ ಸೂತ್ರವನ್ನು ಕಳೆದ ವರ್ಷವೇ ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಪಡಿಸಿದ್ದರು. ಅದನ್ನೇ ಈಗ ಪುನರುಚ್ಚರಿಸಿದ ಅವರು, ಕಳೆದ ಬಾರಿ ಕೊರೊನಾ ವೈರಸ್​ನ್ನು ನಮ್ಮ ಭಾರತ ಯಶಸ್ವಿಯಾಗಿ ಮಣಿಸಿದೆ. ಕಳೆದ ಬಾರಿ ಕೊರೊನಾ ವಿರುದ್ಧ ಹೋರಾಡಲು ಅಳವಡಿಸಿಕೊಂಡಿದ್ದ ಸಂಕಲ್ಪ, ತತ್ವ, ಶಿಸ್ತಿನ ಪ್ರಯೋಗವನ್ನು ಈ ಬಾರಿಯೂ ಮಾಡಬೇಕು ಎಂದು ಹೇಳಿದರು.

ಆಕ್ಸಿಜನ್​, ರೆಮ್​ಡಿಸಿವಿರ್ ಔಷಧ, ವೆಂಟಿಲೇಟರ್​ಗಳ ಕೊರತೆ, ಲಸಿಕೆಯ ಬಗ್ಗೆ ಪ್ರಧಾನಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ವೈದ್ಯಕೀಯ ಆಕ್ಸಿಜನ್​ ಕೊರತೆ ನೀಗಿಸಲು, ಅನುಮೋದಿತ ಆಕ್ಸಿಜನ್​ ಪ್ಲಾಂಟ್​ಗಳ ಅಳವಡಿಕೆ ಕಾರ್ಯವನ್ನು ತ್ವರಿತಗೊಳಿಸಬೇಕು. PM-CARES ಫಂಡ್​ನಿಂದ 32 ರಾಜ್ಯಗಳಲ್ಲಿ ಒಟ್ಟು 162 ಆಕ್ಸಿಜನ್ ಸ್ಥಾವರಗಳನ್ನು ಅಳವಡಿಸಿದ ಬಗ್ಗೆಯೂ ಮೋದಿಯವರ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಸರ್ಕಾರ ಪ್ರಕಟಣೆ ಬಿಡುಗಡೆ ಮಾಡಿದೆ. ಹಾಗೇ, ಔಷಧಗಳ ಕೊರತೆ ನೀಗಿಸಲು ದೇಶದ ಔಷಧ ಉದ್ಯಮದ ಸಂಪೂರ್ಣ ಸಾಮರ್ಥ್ಯ ಬಳಕೆಯಾಗಬೇಕು ಎಂದೂ ಮೋದಿ ಹೇಳಿದ್ದಾರೆ. ಹಾಗೇ, ಎಲ್ಲ ರಾಜ್ಯಗಳ ಸ್ಥಳೀಯ ಆಡಳಿತಗಳು ಆಯಾ ಪ್ರದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪರಸ್ಪರ ಸಹಕಾರದಿಂದ ಕೊವಿಡ್​ 19 ಸಾಂಕ್ರಾಮಿಕದ ವಿರುದ್ಧ ಹೋರಾಡಬೇಕು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಭೀಕರ ಮಹಾಮಾರಿ ನಡುವೆ ವೈದ್ಯರ ನಿರ್ಲಕ್ಷ್ಯ.. ಕೊರೊನಾ ದೃಢವಾಗುತ್ತಿದ್ದಂತೆ ಡಿಸ್ಚಾರ್ಜ್, ಆಸ್ಪತ್ರೆಗಳ ಮುಂದೆ ನರಳಾಟ

ದೆಹಲಿಯಲ್ಲಿ ಆಕ್ಸಿಜನ್​, ರೆಮ್​ಡಿಸಿವಿರ್ ಔಷಧ​​ಗಳ ತೀವ್ರ ಕೊರತೆ: ಆತಂಕ ವ್ಯಕ್ತಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

Published On - 9:56 am, Sun, 18 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!